AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್​ ಮಾಡುವುದಕ್ಕೆ ಮೊದಲು ಇರಲಿ ಎಚ್ಚರ..ಕೊರೊನಾ ಇನ್ನೂ ನಿರ್ಮೂಲನಗೊಂಡಿಲ್ಲ: ತಜ್ಞರಿಂದ ಎಚ್ಚರಿಕೆ

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ನಿಧಾನವಾಗಿ ಕಡಿಮೆಯಾಗುತ್ತ ಬರುತ್ತಿದ್ದಂತೆ, ಹಲವು ರಾಜ್ಯಗಲ್ಲಿ ಲಾಕ್​ಡೌನ್​, ಕರ್ಫ್ಯೂ ನಿಯಮಗಳನ್ನು ಸಡಿಲಿಸಲಾಗುತ್ತಿದೆ. ಆದರೆ ಈ ಮಧ್ಯೆ ಕೊರೊನಾ ಟಾಸ್ಕ್​ಫೋರ್ಸ್​ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಒಮ್ಮೆಲೆ ಅನ್​ಲಾಕ್​ ಮಾಡುವುದರಿಂದ ಮತ್ತಷ್ಟು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡಂತೆ ಆಗುತ್ತದೆ. ಹಾಗೇ, ಜನರೂ ಕೂಡ ಜವಾಬ್ದಾರಿಯಿಂದ ವರ್ತಿಸಬೇಕು. ತಮ್ಮ ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಎಷ್ಟರಮಟ್ಟಿಗೆ ಕಡಿಮೆಯಾಗಿದೆ ಎಂಬುದನ್ನು ತಿಳಿಯಬೇಕು. ಅನ್​ಲಾಕ್​ ಆದ ತಕ್ಷಣ ಮತ್ತೆ ನಿರ್ಲಕ್ಷ್ಯ ತೋರಬಾರದು ಎಂದೂ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ […]

ಅನ್​ಲಾಕ್​ ಮಾಡುವುದಕ್ಕೆ ಮೊದಲು ಇರಲಿ ಎಚ್ಚರ..ಕೊರೊನಾ ಇನ್ನೂ ನಿರ್ಮೂಲನಗೊಂಡಿಲ್ಲ: ತಜ್ಞರಿಂದ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 14, 2021 | 8:00 AM

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ನಿಧಾನವಾಗಿ ಕಡಿಮೆಯಾಗುತ್ತ ಬರುತ್ತಿದ್ದಂತೆ, ಹಲವು ರಾಜ್ಯಗಲ್ಲಿ ಲಾಕ್​ಡೌನ್​, ಕರ್ಫ್ಯೂ ನಿಯಮಗಳನ್ನು ಸಡಿಲಿಸಲಾಗುತ್ತಿದೆ. ಆದರೆ ಈ ಮಧ್ಯೆ ಕೊರೊನಾ ಟಾಸ್ಕ್​ಫೋರ್ಸ್​ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಒಮ್ಮೆಲೆ ಅನ್​ಲಾಕ್​ ಮಾಡುವುದರಿಂದ ಮತ್ತಷ್ಟು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡಂತೆ ಆಗುತ್ತದೆ. ಹಾಗೇ, ಜನರೂ ಕೂಡ ಜವಾಬ್ದಾರಿಯಿಂದ ವರ್ತಿಸಬೇಕು. ತಮ್ಮ ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಎಷ್ಟರಮಟ್ಟಿಗೆ ಕಡಿಮೆಯಾಗಿದೆ ಎಂಬುದನ್ನು ತಿಳಿಯಬೇಕು. ಅನ್​ಲಾಕ್​ ಆದ ತಕ್ಷಣ ಮತ್ತೆ ನಿರ್ಲಕ್ಷ್ಯ ತೋರಬಾರದು ಎಂದೂ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ದೆಹಲಿ ಏಮ್ಸ್​ (AIIMS) ಆಸ್ಪತ್ರೆಯ ಮೆಡಿಸಿನ್​ ಡಿಪಾರ್ಟ್​​ಮೆಂಟ್​​ನ ಮುಖ್ಯಸ್ಥ ಡಾ. ನವೀತ್ ವಿಗ್​​, ಕೊವಿಡ್​ 19 ಸೋಂಕನ್ನು ನಿಯಂತ್ರಣ ಮಾಡಲು ಪ್ರತಿಯೊಬ್ಬರೂ ಶ್ರದ್ಧೆಯಿಂದ ಶ್ರಮವಹಿಸಬೇಕು ಎಂದಿದ್ದಾರೆ. ತುಂಬ ನಿಧಾನವಾಗಿ ಅನ್​​ಲಾಕ್​ ಪ್ರಕ್ರಿಯೆ ಮಾಡಬೇಕು. ಅದರಲ್ಲೂ ಹಾಟ್​ಸ್ಫಾಟ್​​ಗಳ ಬಗ್ಗೆ ಮತ್ತಷ್ಟು ನಿಗಾ ವಹಿಸಬೇಕು. ಪ್ರತಿಯೊಬ್ಬರೂ ವೈಯಕ್ತಿಕ, ಕೌಟುಂಬಿಕ ಸುರಕ್ಷತೆಯ ಬಗ್ಗೆ ಗಮನಕೊಡಬೇಕು. ಕೊವಿಡ್​ 19 ಸೋಂಕು ಇನ್ನೂ ನಿರ್ಮೂಲನ ಗೊಂಡಿಲ್ಲ. ದೇಶದಲ್ಲಿ ಇನ್ನೂ 10 ಸಾವಿರ ಸಕ್ರಿಯ ಪ್ರಕರಣಗಳು ಇವೆ ಎಂದು ಎಚ್ಚರಿಸಿದ್ದಾರೆ.

ಅನ್​ಲಾಕ್ ಮಾಡುವಾಗ ಸ್ಥಳೀಯವಾಗಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಯಾವೆಲ್ಲ ಪ್ರದೇಶಗಳು, ನಗರಗಳು ಕೊರೊನಾ ಹಾಟ್​ಸ್ಫಾಟ್​ ಎನ್ನಿಸಿಕೊಂಡಿವೆಯೋ ಅಲ್ಲೆಲ್ಲ ಲಾಕ್​ಡೌನ್​ ಮುಂದುವರಿಸಬೇಕು. ಹಾಗೇ, ಕೊರೊನಾ ಮೂರನೇ ಅಲೆ ಬಗ್ಗೆ ಯಾರೂ ಗಾಬರಿ ಪಡುವುದು, ಭಯಗೊಳ್ಳುವ ಅಗತ್ಯವಿಲ್ಲ ಎಂದು ಡಾ. ನವೀತ್​ ವಿಗ್​ ಹೇಳಿದ್ದಾರೆ. ಕೊರೊನಾ ಶುರುವಾದ ಮೇಲೆ ಅನೇಕ ಅಧ್ಯಯನಗಳು ಹೊರಬೀಳುತ್ತಿವೆ. ಜನರು ಲಸಿಕೆ ಪಡೆದರೆ ಮಾತ್ರ ಕೊರೊನಾದಿಂದ ಪಾರಾಗಬಹುದೆಂದೇ ಎಲ್ಲ ಅಧ್ಯಯನಗಳೂ ಹೇಳುತ್ತಿವೆ. ದೇಶವನ್ನು ಕೊರೊನಾ ಮುಕ್ತ ಮಾಡಲು ಲಸಿಕೆಯೊಂದೇ ಮಾರ್ಗ. ಕೊರೊನಾ ವ್ಯಾಕ್ಸಿನ್​ ಪಡೆದವರಿಗೆ ಸೋಂಕಿನ ಅಪಾಯ ಇರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ