AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್​ ಮಾಡುವುದಕ್ಕೆ ಮೊದಲು ಇರಲಿ ಎಚ್ಚರ..ಕೊರೊನಾ ಇನ್ನೂ ನಿರ್ಮೂಲನಗೊಂಡಿಲ್ಲ: ತಜ್ಞರಿಂದ ಎಚ್ಚರಿಕೆ

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ನಿಧಾನವಾಗಿ ಕಡಿಮೆಯಾಗುತ್ತ ಬರುತ್ತಿದ್ದಂತೆ, ಹಲವು ರಾಜ್ಯಗಲ್ಲಿ ಲಾಕ್​ಡೌನ್​, ಕರ್ಫ್ಯೂ ನಿಯಮಗಳನ್ನು ಸಡಿಲಿಸಲಾಗುತ್ತಿದೆ. ಆದರೆ ಈ ಮಧ್ಯೆ ಕೊರೊನಾ ಟಾಸ್ಕ್​ಫೋರ್ಸ್​ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಒಮ್ಮೆಲೆ ಅನ್​ಲಾಕ್​ ಮಾಡುವುದರಿಂದ ಮತ್ತಷ್ಟು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡಂತೆ ಆಗುತ್ತದೆ. ಹಾಗೇ, ಜನರೂ ಕೂಡ ಜವಾಬ್ದಾರಿಯಿಂದ ವರ್ತಿಸಬೇಕು. ತಮ್ಮ ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಎಷ್ಟರಮಟ್ಟಿಗೆ ಕಡಿಮೆಯಾಗಿದೆ ಎಂಬುದನ್ನು ತಿಳಿಯಬೇಕು. ಅನ್​ಲಾಕ್​ ಆದ ತಕ್ಷಣ ಮತ್ತೆ ನಿರ್ಲಕ್ಷ್ಯ ತೋರಬಾರದು ಎಂದೂ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ […]

ಅನ್​ಲಾಕ್​ ಮಾಡುವುದಕ್ಕೆ ಮೊದಲು ಇರಲಿ ಎಚ್ಚರ..ಕೊರೊನಾ ಇನ್ನೂ ನಿರ್ಮೂಲನಗೊಂಡಿಲ್ಲ: ತಜ್ಞರಿಂದ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 14, 2021 | 8:00 AM

Share

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ನಿಧಾನವಾಗಿ ಕಡಿಮೆಯಾಗುತ್ತ ಬರುತ್ತಿದ್ದಂತೆ, ಹಲವು ರಾಜ್ಯಗಲ್ಲಿ ಲಾಕ್​ಡೌನ್​, ಕರ್ಫ್ಯೂ ನಿಯಮಗಳನ್ನು ಸಡಿಲಿಸಲಾಗುತ್ತಿದೆ. ಆದರೆ ಈ ಮಧ್ಯೆ ಕೊರೊನಾ ಟಾಸ್ಕ್​ಫೋರ್ಸ್​ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಒಮ್ಮೆಲೆ ಅನ್​ಲಾಕ್​ ಮಾಡುವುದರಿಂದ ಮತ್ತಷ್ಟು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡಂತೆ ಆಗುತ್ತದೆ. ಹಾಗೇ, ಜನರೂ ಕೂಡ ಜವಾಬ್ದಾರಿಯಿಂದ ವರ್ತಿಸಬೇಕು. ತಮ್ಮ ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಎಷ್ಟರಮಟ್ಟಿಗೆ ಕಡಿಮೆಯಾಗಿದೆ ಎಂಬುದನ್ನು ತಿಳಿಯಬೇಕು. ಅನ್​ಲಾಕ್​ ಆದ ತಕ್ಷಣ ಮತ್ತೆ ನಿರ್ಲಕ್ಷ್ಯ ತೋರಬಾರದು ಎಂದೂ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ದೆಹಲಿ ಏಮ್ಸ್​ (AIIMS) ಆಸ್ಪತ್ರೆಯ ಮೆಡಿಸಿನ್​ ಡಿಪಾರ್ಟ್​​ಮೆಂಟ್​​ನ ಮುಖ್ಯಸ್ಥ ಡಾ. ನವೀತ್ ವಿಗ್​​, ಕೊವಿಡ್​ 19 ಸೋಂಕನ್ನು ನಿಯಂತ್ರಣ ಮಾಡಲು ಪ್ರತಿಯೊಬ್ಬರೂ ಶ್ರದ್ಧೆಯಿಂದ ಶ್ರಮವಹಿಸಬೇಕು ಎಂದಿದ್ದಾರೆ. ತುಂಬ ನಿಧಾನವಾಗಿ ಅನ್​​ಲಾಕ್​ ಪ್ರಕ್ರಿಯೆ ಮಾಡಬೇಕು. ಅದರಲ್ಲೂ ಹಾಟ್​ಸ್ಫಾಟ್​​ಗಳ ಬಗ್ಗೆ ಮತ್ತಷ್ಟು ನಿಗಾ ವಹಿಸಬೇಕು. ಪ್ರತಿಯೊಬ್ಬರೂ ವೈಯಕ್ತಿಕ, ಕೌಟುಂಬಿಕ ಸುರಕ್ಷತೆಯ ಬಗ್ಗೆ ಗಮನಕೊಡಬೇಕು. ಕೊವಿಡ್​ 19 ಸೋಂಕು ಇನ್ನೂ ನಿರ್ಮೂಲನ ಗೊಂಡಿಲ್ಲ. ದೇಶದಲ್ಲಿ ಇನ್ನೂ 10 ಸಾವಿರ ಸಕ್ರಿಯ ಪ್ರಕರಣಗಳು ಇವೆ ಎಂದು ಎಚ್ಚರಿಸಿದ್ದಾರೆ.

ಅನ್​ಲಾಕ್ ಮಾಡುವಾಗ ಸ್ಥಳೀಯವಾಗಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಯಾವೆಲ್ಲ ಪ್ರದೇಶಗಳು, ನಗರಗಳು ಕೊರೊನಾ ಹಾಟ್​ಸ್ಫಾಟ್​ ಎನ್ನಿಸಿಕೊಂಡಿವೆಯೋ ಅಲ್ಲೆಲ್ಲ ಲಾಕ್​ಡೌನ್​ ಮುಂದುವರಿಸಬೇಕು. ಹಾಗೇ, ಕೊರೊನಾ ಮೂರನೇ ಅಲೆ ಬಗ್ಗೆ ಯಾರೂ ಗಾಬರಿ ಪಡುವುದು, ಭಯಗೊಳ್ಳುವ ಅಗತ್ಯವಿಲ್ಲ ಎಂದು ಡಾ. ನವೀತ್​ ವಿಗ್​ ಹೇಳಿದ್ದಾರೆ. ಕೊರೊನಾ ಶುರುವಾದ ಮೇಲೆ ಅನೇಕ ಅಧ್ಯಯನಗಳು ಹೊರಬೀಳುತ್ತಿವೆ. ಜನರು ಲಸಿಕೆ ಪಡೆದರೆ ಮಾತ್ರ ಕೊರೊನಾದಿಂದ ಪಾರಾಗಬಹುದೆಂದೇ ಎಲ್ಲ ಅಧ್ಯಯನಗಳೂ ಹೇಳುತ್ತಿವೆ. ದೇಶವನ್ನು ಕೊರೊನಾ ಮುಕ್ತ ಮಾಡಲು ಲಸಿಕೆಯೊಂದೇ ಮಾರ್ಗ. ಕೊರೊನಾ ವ್ಯಾಕ್ಸಿನ್​ ಪಡೆದವರಿಗೆ ಸೋಂಕಿನ ಅಪಾಯ ಇರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್