AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿನಲ್ಲಿ ಸಭ್ಯತೆ ಇರಲಿ, ಪ್ರಚಾರಕ್ಕೆ ಧರ್ಮವನ್ನು ಬಳಸಬೇಡಿ ಬಿಜೆಪಿ-ಕಾಂಗ್ರೆಸ್​​ಗೆ​​ ಬಿಸಿ ಮುಟ್ಟಿಸಿದ ಚುನಾವಣಾ ಆಯೋಗ

ಕಾಂಗ್ರೆಸ್​​​ ಹಾಗೂ ಬಿಜೆಪಿಗೆ ಚುನಾವಣಾ ಆಯೋಗ ಬಿಸಿ ಮುಟ್ಟಿಸಿದೆ. ತಮ್ಮ ಸ್ಟಾರ್​​ ಪ್ರಚಾರಕರು ಮಾಡುವ ಭಾಷಣದಲ್ಲಿ ಸಭ್ಯತೆ ಹಾಗೂ ಕಾಳಜಿಯನ್ನು ಕಾಪಾಡುವಂತೆ ನಿರ್ದೇಶನ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೇಳಿದೆ. ಚುನಾವಣೆ ಪ್ರಚಾರ ಹೆಸರಿನಲ್ಲಿ ಭಾರತದ ಸಾಮಾಜಿಕ-ಸಾಂಸ್ಕೃತಿಕ ಪರಿಸರವನ್ನು ಕೆಟ್ಟಿಸುವುದು ಬೇಡ ಎಂದು ಹೇಳಿದೆ.

ಮಾತಿನಲ್ಲಿ ಸಭ್ಯತೆ ಇರಲಿ, ಪ್ರಚಾರಕ್ಕೆ ಧರ್ಮವನ್ನು ಬಳಸಬೇಡಿ ಬಿಜೆಪಿ-ಕಾಂಗ್ರೆಸ್​​ಗೆ​​ ಬಿಸಿ ಮುಟ್ಟಿಸಿದ ಚುನಾವಣಾ ಆಯೋಗ
ಅಕ್ಷಯ್​ ಪಲ್ಲಮಜಲು​​
|

Updated on:May 22, 2024 | 4:19 PM

Share

ದೆಹಲಿ, ಮೇ.22: ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ. ತಮ್ಮ ಸ್ಟಾರ್​​ ಪ್ರಚಾರಕರು ಮಾಡುವ ಭಾಷಣದಲ್ಲಿ ಸಭ್ಯತೆ ಹಾಗೂ ಕಾಳಜಿಯನ್ನು ಕಾಪಾಡುವಂತೆ ನಿರ್ದೇಶನ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೇಳಿದೆ. ಚುನಾವಣೆ ಪ್ರಚಾರ ಹೆಸರಿನಲ್ಲಿ ಭಾರತದ ಸಾಮಾಜಿಕ-ಸಾಂಸ್ಕೃತಿಕ ಪರಿಸರವನ್ನು ಕೆಟ್ಟಿಸುವುದು ಬೇಡ. ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ವಿಚಾರಗಳನ್ನು ಇಟ್ಟುಕೊಂಡು ಪ್ರಚಾರ ಮಾಡದಂತೆ ಆದೇಶವನ್ನು ನೀಡಿದೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮದ ವಿಚಾರವನ್ನು ಇಟ್ಟುಕೊಂಡು ಭಾಷಣ ಮಾಡಿದ್ದಾರೆ ಎಂದು ವಿಪಕ್ಷಗಳು ಆರೋಪವನ್ನು ಮಾಡಿತ್ತು. ಈ ಆರೋಪದ ಮಾಡಿದ ಒಂದು ತಿಂಗಳ ನಂತರ ಚುನಾವಣಾ ಆಯೋಗ ನಡ್ಡಾ ಅವರಿಗೆ ನೋಟಿಸ್​​​ ನೀಡಿತ್ತು. ಜತೆಗೆ ನಡ್ಡಾ ಅವರ ಸಮರ್ಥನೆಯನ್ನು ತಿರಸ್ಕರಿಸಿತು. ಹಾಗೂ ಪಕ್ಷದ ಸ್ಟಾರ್ ಪ್ರಚಾರಕರು ಧಾರ್ಮಿಕ ಮತ್ತು ಕೋಮುವಾದದ ಪ್ರಚಾರದಿಂದ ದೂರವಿರುವಂತೆ ಹೇಳಿಕೊಂಡಿದೆ.

ಸಮಾಜವನ್ನು ವಿಭಜಿಸುವ ಪ್ರಚಾರ ಭಾಷಣಗಳನ್ನು ನಿಲ್ಲಿಸುವಂತೆ ಚುನಾವಣಾ ಸಮಿತಿಯು ಬಿಜೆಪಿಯನ್ನು ಕೇಳಿದೆ. ಇನ್ನು ಕಾಂಗ್ರೆಸ್​​​​ ಬಗ್ಗೆಯೂ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿತ್ತು. ಈ ದೂರಿನ ಆಧಾರ ಮೇಲೆ ರಾಹುಲ್​​ ಗಾಂಧಿ ಅವರು ಧರ್ಮದ ಮೇಲೆ ಮಾಡಿದ ಭಾಷಣಕ್ಕೆ ನೋಟಿಸ್​​ ನೀಡಿ. ಇದಕ್ಕೆ ಉತ್ತರ ನೀಡುವಂತೆ ಚುನಾವಣಾ ಆಯೋಗ ಕಾಂಗ್ರೆಸ್​​​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಳಿದೆ.

ಇನ್ನು ಎರಡು ಪಕ್ಷಗಳಿಗೂ ಈ ಬಗ್ಗೆ ಪತ್ರವನ್ನು ಬರೆದಿರುವ ಚುನಾವಣಾ ಆಯೋಗ, ಬಿಜೆಪಿಯ ಸ್ಟಾರ್ ಪ್ರಚಾರಕರು ಮಾದರಿ ನೀತಿ ಸಂಹಿತೆಗೆ ವಿರುದ್ಧವಾದ ಹೇಳಿಕೆಗಳನ್ನು ನೀಡದಂತೆ ನೋಡಿಕೊಳ್ಳುವಂತೆ ಆಯೋಗ ಪತ್ರ ಬರೆದಿದೆ. ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ದ್ವೇಷ, ಧರ್ಮ, ಜಾತಿ, ಸಮುದಾಯ ಅಥವಾ ತಮ್ಮ ಪ್ರತಿಸ್ಪರ್ಧಿಯ ವಿರೋಧ ಯಾವುದೇ ದ್ವೇಷದ ಭಾಷಣ ಮಾಡಬಾರದು ಎಂದು ಪತ್ರದಲ್ಲಿ ತಿಳಿಸಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 30 ಸ್ಥಾನ ಪಡೆದರೆ ಟಿಎಂಸಿ ಛಿದ್ರವಾಗಲಿದೆ; ಅಮಿತ್ ಶಾ

ಇನ್ನು ಕಾಂಗ್ರೆಸ್​​​ ಪಕ್ಷ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೂಡ ಪತ್ರ ಬರೆದಿದೆ. ಭಾರತೀಯ ಸಮಾಜದ ಸಂಕೀರ್ಣತೆಗಳಿಗೆ ಧಕ್ಕೆ ತರುವ ಪ್ರಚಾರಗಳನ್ನು ಮಾಡದಂತೆ ಪತ್ರದಲ್ಲಿ ತಿಳಿಸಿದೆ. ಸೇನೆ ಹಾಗೂ ದೇಶದ ಭದ್ರತೆಗಳ ಬಗ್ಗೆ ಹಾಗೂ ಅದರ ಕೆಲಸದಲ್ಲಿ ರಾಜಕೀಯಕ್ಕಾಗಿ ಬಳಸಿಕೊಳ್ಳಬಾರದು ಹಾಗೂ ಅವುಗಳ ಬಗ್ಗೆ ಪ್ರಚಾರದಲ್ಲಿ ಮಾತನಾಡಬಾರದು ಎಂದು ಚುನಾವಣಾ ಆಯೋಗ ಕಾಂಗ್ರೆಸ್​​​ಗೆ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Wed, 22 May 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ