AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಂದೆ ಸರ್ಕಾರ 6 ತಿಂಗಳಲ್ಲೇ ಬೀಳಲಿದೆ, ಮಧ್ಯಂತರ ಚುನಾವಣೆಗೆ ಸಿದ್ಧರಾಗಿ: ಶರದ್​ ಪವಾರ್ ಭವಿಷ್ಯ

ಏಕನಾಥ್ ಶಿಂದೆಯ ನೂತನ ಸರ್ಕಾರ ಮುಂದಿನ 6 ತಿಂಗಳಲ್ಲೇ ಬೀಳಲಿದೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ.

ಶಿಂದೆ ಸರ್ಕಾರ 6 ತಿಂಗಳಲ್ಲೇ ಬೀಳಲಿದೆ, ಮಧ್ಯಂತರ ಚುನಾವಣೆಗೆ ಸಿದ್ಧರಾಗಿ: ಶರದ್​ ಪವಾರ್ ಭವಿಷ್ಯ
Sharad Pawar
TV9 Web
| Edited By: |

Updated on: Jul 04, 2022 | 10:47 AM

Share

ಏಕನಾಥ್ ಶಿಂದೆಯ ನೂತನ ಸರ್ಕಾರ ಮುಂದಿನ 6 ತಿಂಗಳಲ್ಲೇ ಬೀಳಲಿದೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ. ಮಹಾರಾಷ್ಟ್ರದ ರಾಜಕೀಯದಲ್ಲಿ ದೊಡ್ಡ ಬದಲಾವಣೆ ತಂದ ಏಕನಾಥ್ ಶಿಂಧೆ ಸರ್ಕಾರದ ನಿಜವಾದ ಪರೀಕ್ಷೆ ಇಂದು ನಡೆಯಲಿದೆ. ಶಿಂಧೆ ಸರ್ಕಾರ ಇಂದು ವಿಶ್ವಾಸಮತ ಪರೀಕ್ಷೆ ಎದುರಿಸಲಿದೆ.

ಇದೆಲ್ಲದರ ನಡುವೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಹೇಳಿಕೆ ಮುನ್ನೆಲೆಗೆ ಬಂದಿದೆ.

ಮುಂದಿನ ಆರು ತಿಂಗಳಲ್ಲಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂದೆ ನೇತೃತ್ವದ ರಾಜ್ಯ ಸರ್ಕಾರ ಪತನವಾಗುವ ಸಾಧ್ಯತೆ ಇರುವುದರಿಂದ ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಎನ್‌ಸಿಪಿ ಶಾಸಕರು ಮತ್ತು ಪಕ್ಷದ ಇತರ ನಾಯಕರನ್ನು ಉದ್ದೇಶಿಸಿ ಪವಾರ್ ಮಾತನಾಡಿ, ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗಬಹುದು, ಆದ್ದರಿಂದ ಎಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಿರಬೇಕು ಎಂದು ಪವಾರ್ ಹೇಳಿದ್ದಾರೆ.

ಶಿಂದೆ ಅವರನ್ನು ಬೆಂಬಲಿಸುವ ಅನೇಕ ಬಂಡಾಯ ಶಾಸಕರು ಪ್ರಸ್ತುತ ವ್ಯವಸ್ಥೆಯಿಂದ ಸಂತೋಷವಾಗಿಲ್ಲ ಎಂದು ಪವಾರ್ ಹೇಳಿದ್ದಾರೆ. ಸಚಿವರಿಗೆ ಖಾತೆ ಹಂಚಿಕೆಯಾದ ಬಳಿಕ ಅವರ ಅಸಮಾಧಾನ ಹೊರಬೀಳಲಿದ್ದು, ಅಂತಿಮವಾಗಿ ಸರ್ಕಾರ ಪತನವಾಗಲಿದೆ.

“ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರವು ಮುಂದಿನ ಆರು ತಿಂಗಳಲ್ಲಿ ಬೀಳಬಹುದು, ಆದ್ದರಿಂದ ಎಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಿರಬೇಕು” ಎಂದು ಪವಾರ್ ಹೇಳಿದ್ದಾರೆ ಎಂದು ಎನ್‌ಸಿಪಿ ನಾಯಕರೊಬ್ಬರು ತಿಳಿಸಿದ್ದಾರೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ