AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ಬಾಲಕಿಯರನ್ನು ಥಳಿಸಿದ ದುಷ್ಕರ್ಮಿಗಳ ಗುಂಪು: ವೀಡಿಯೋ ವೈರಲ್​

ನಾಲ್ವರು ಯುವಕರು ರಾತ್ರಿ ವೇಳೆಯಲ್ಲಿ ಬಾಲಕಿಯ ಮನೆಯ ಎದುರು ವೇಗವಾಗಿ ಬೈಕ್​ ಅನ್ನು ಓಡಿಸಿಕೊಂಡು ಹೋಗಿದ್ದರು. ಈ ವೇಳೆ ಬಾಲಕಿಯ ಮನೆಯ ನಾಯಿ ಜೋರಾಗಿ ಕೂಗಿದೆ. ನಾಯಿ ಜೋರಾಗಿ ಕೂಗುತ್ತಿದ್ದಂತೆ ಯುವಕರು ಗುಂಪು ನಾಯಿಗೆ ರಾಡ್​ನಿಂದ ಹೊಡೆದಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಬಾಲಕಿಯರನ್ನು ಥಳಿಸಿದ ದುಷ್ಕರ್ಮಿಗಳ ಗುಂಪು: ವೀಡಿಯೋ ವೈರಲ್​
ಬಾಲಕಿಯರಿಗೆ ಥಳಿಸುತ್ತಿರುವ ಯುವಕರ ಗುಂಪು
TV9 Web
| Edited By: |

Updated on:Dec 11, 2021 | 1:35 PM

Share

ಮಧ್ಯಪ್ರದೇಶ (ಜಬಲ್ಪುರ): ಕ್ಷುಲ್ಲಕ ಕಾರಣಕ್ಕೆ ಬಾಲಕಿಯರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಇದರ ವೀಡಿಯೋ ವೈರಲ್ ಆಗಿದ್ದು, ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಬಲ್ಪುರದ ಗಧಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಲ್ವರು ಯುವಕರು ರಾತ್ರಿ ವೇಳೆಯಲ್ಲಿ ಬಾಲಕಿಯ ಮನೆಯ ಎದುರು ವೇಗವಾಗಿ ಬೈಕ್​ ಅನ್ನು ಓಡಿಸಿಕೊಂಡು ಹೋಗಿದ್ದರು. ಈ ವೇಳೆ ಬಾಲಕಿಯ ಮನೆಯ ನಾಯಿ ಜೋರಾಗಿ ಕೂಗಿದೆ. ನಾಯಿ ಜೋರಾಗಿ ಕೂಗುತ್ತಿದ್ದಂತೆ ಯುವಕರು ಗುಂಪು ನಾಯಿಗೆ ರಾಡ್​ನಿಂದ ಹೊಡೆದಿದ್ದಾರೆ. ಅದೇ ಸಮಯಕ್ಕೆ ಬಾಲಕಿ ಮನೆಯಿಂದ ಹೊರಬಂದಿದ್ದಳು. ಈ ವೇಳೆ ದುಷ್ಕರ್ಮಿಗಳು ಆಕೆಯನ್ನು ನಿಂದಿಸಿ ಮಾತನಾಡಿದ್ದಾರೆ. ಮನೆಯ ಹೊರಗೆ ಗಲಾಟೆ ಕೇಳುತ್ತಿದ್ದಂತೆ ಬಾಲಕಿಯ ಇನ್ನಿಬ್ಬರು ಸಹೋದರಿಯರು ಹೊರಗೆ ಬಂದಿದ್ದರು. ಕೋಪಗೊಂಡ ಯುವಕರು ಬಾಲಕಿ ಹಾಗೂ ಆಕೆಯ ಸಹೋದರಿಯರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಈ ಕುರಿತು ಬಾಲಕಿಯ ಚಿಕ್ಕಪ್ಪ ಮಾಹಿತಿ ನೀಡಿದ್ದಾರೆ.

ಬಳಿಕ ಬಾಲಕಿ ತನ್ನ ಚಿಕ್ಕಪ್ಪನೊಂದಿಗೆ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಹಲ್ಲೆ ನಡೆಸಿದ ಆರೋಪಿಗಳನ್ನು ಪ್ರಿನ್ಸ್​ ಶ್ರೀವಾಸ್ತವ್​, ಮೋನು ಶ್ರೀವಾಸ್ತವ್, ಶಿಬು ದಹಿಯಾ ಹಾಗೂ ಬಬ್ಲು ಶ್ರೀವಾಸ್ತವ್ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಗಧಾ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾಲ್ವರು ಆರೋಪಿಗಳು ಘಟನೆ ಬಳಿಕ ನಾಪತ್ತೆಯಾಗಿದ್ದು, ಅವರನ್ನು ಹುಡುಕಲು ಪೊಲೀಸರು ಪತ್ತೆ ಕಾರ್ಯ ಆರಂಭಿಸಿದ್ದಾರೆ. ಬಾಲಕಿಯನ್ನು ಥಳಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ದುಷ್ಕರ್ಮಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ:

ಹಾವು ಕಚ್ಚಿ ಅಪ್ಪ ಸಾವು: ತಂದೆಯ ಚಿತೆಗೆ ಮೂವರು ಪುತ್ರಿಯರಿಂದ ಅಗ್ನಿಸ್ಪರ್ಶ, ಅಂತಿಮ ಸಂಸ್ಕಾರ

ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ವಿಚಾರ; ಮಂಗಳೂರಿನಲ್ಲಿ ಪ್ರಕರಣ ದಾಖಲು

Published On - 1:26 pm, Sat, 11 December 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ