AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಡಿಗೆ ಕಟ್ಟದಿದ್ದಕ್ಕೆ ಪೊಲೀಸರಿಂದ ಥಳಿತ, ಮನ ನೊಂದ ವ್ಯಕ್ತಿ ಆತ್ಮಹತ್ಯೆ..

ತಮಿಳುನಾಡು:ತಮಿಳುನಾಡಿನಲ್ಲಿ ಮತ್ತೊಮ್ಮೆ ಪೊಲೀಸರು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸಪ್ಪನ ಕ್ರೌರ್ಯಕ್ಕೆ ನೊಂದು ಯುವಕನೊಬ್ಬ ಸಜೀವ ದಹನವಾಗಿದ್ದಾನೆ. ಪೈಂಟರ್ ಒಬ್ಬ ಮನೆಯ ಬಾಡಿಗೆ ಪಾವತಿಸದ ಕಾರಣಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್‌ ಆತನನ್ನು ಥಳಿಸಿದ್ದಾರೆ.ಇದರಿಂದ ತೀರ ಅವಮಾನಕೊಳಗಾದ ಪೈಂಟರ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನೆಡೆದಿದೆ. ಚೆನ್ನೈನ ಪುಜಲ್ ನಗರದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ ಶ್ರೀನಿವಾಸನ್ ಲಾಕ್​ಡೌನ್​ ಪರಿಣಾಮ ಕೆಲಸವಿರಲಿಲ್ಲ, ಹೀಗಾಗಿ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮನೆಯ ಯಜಮಾನ ರಾಜೇಂದ್ರನ್ ಮನೆಯನ್ನು ಖಾಲಿ […]

ಮನೆ ಬಾಡಿಗೆ ಕಟ್ಟದಿದ್ದಕ್ಕೆ ಪೊಲೀಸರಿಂದ ಥಳಿತ, ಮನ ನೊಂದ ವ್ಯಕ್ತಿ ಆತ್ಮಹತ್ಯೆ..
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Aug 04, 2020 | 11:29 AM

Share

ತಮಿಳುನಾಡು:ತಮಿಳುನಾಡಿನಲ್ಲಿ ಮತ್ತೊಮ್ಮೆ ಪೊಲೀಸರು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸಪ್ಪನ ಕ್ರೌರ್ಯಕ್ಕೆ ನೊಂದು ಯುವಕನೊಬ್ಬ ಸಜೀವ ದಹನವಾಗಿದ್ದಾನೆ. ಪೈಂಟರ್ ಒಬ್ಬ ಮನೆಯ ಬಾಡಿಗೆ ಪಾವತಿಸದ ಕಾರಣಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್‌ ಆತನನ್ನು ಥಳಿಸಿದ್ದಾರೆ.ಇದರಿಂದ ತೀರ ಅವಮಾನಕೊಳಗಾದ ಪೈಂಟರ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನೆಡೆದಿದೆ.

ಚೆನ್ನೈನ ಪುಜಲ್ ನಗರದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ ಶ್ರೀನಿವಾಸನ್ ಲಾಕ್​ಡೌನ್​ ಪರಿಣಾಮ ಕೆಲಸವಿರಲಿಲ್ಲ, ಹೀಗಾಗಿ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮನೆಯ ಯಜಮಾನ ರಾಜೇಂದ್ರನ್ ಮನೆಯನ್ನು ಖಾಲಿ ಮಾಡುವಂತೆ ಪದೇ ಪದೇ ಹೇಳುತ್ತಿದ್ದರು. ಜೊತೆಗೆ ರಾಜಕೀಯ ಪಕ್ಷದ ಸದಸ್ಯರಾಗಿರುವ ಮನೆ ಮಾಲೀಕ ಈ ವಿಷಯವಾಗಿ ಪುಜಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ಪುಜಲ್ ನಗರದ ಪೊಲೀಸ್ ಇನ್ಸ್‌ಪೆಕ್ಟರ್ ಸ್ಯಾಮ್ ಬೆನ್ಸನ್, ಶ್ರೀನಿವಾಸನ್ ಅವರ ಮನೆಗೆ ಬಂದು ಹೆಂಡತಿ ಮತ್ತು ಮಕ್ಕಳ ಮುಂದೆ ಶ್ರೀನಿವಾಸನ್​ನನ್ನು ಮನಬಂದಂತೆ ಥಳಿಸಿದ್ದಾರೆ.ಇದರಿಂದ ತೀವ್ರ ನಿರಾಶೆಗೊಂಡ ಶ್ರೀನಿವಾಸನ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ಸ್ಥಳೀಯರೆಲ್ಲ ಸೇರಿ ಬೆಂಕಿ ನಂದಿಸಿ ಶ್ರೀನಿವಾಸನ್ ಅವರನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇ 80 ರಷ್ಟು ಸುಟ್ಟ ಗಾಯಗಳಾಗಿದ್ದ ಶ್ರೀನಿವಾಸನ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಚೆನ್ನೈನ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅಗರ್‌ವಾಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ಈಗಾಗಲೇ ಪುಜಲ್ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಸ್ಯಾಮ್ ಬೆನ್ಸನ್ ಅವರನ್ನು ಅಮಾನತು ಮಾಡಲಾಗಿದೆ.

Published On - 11:05 am, Tue, 4 August 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್