AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra Suspended: ಕುಂಭಮೇಳದ ಬಳಿಕ ಎಚ್ಚೆತ್ತುಕೊಂಡ ಉತ್ತರಾಖಂಡ್ ಸರ್ಕಾರ; ಚಾರ್ ಧಾಮ್ ಯಾತ್ರೆ ರದ್ದು

ಉತ್ತರಾಖಂಡ್​ನಲ್ಲಿ ಕೊವಿಡ್​ ಸೋಂಕಿನಿ ಪ್ರಮಾಣ ಹೆಚ್ಚಾಗಿದೆ. ಬುಧವಾರ ಒಂದೇ ದಿನ 6054 ಕೊರೊನಾ ಕೇಸ್​ಗಳು ದಾಖಲಾಗಿದ್ದು ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,68,616ಕ್ಕೆ ಏರಿಕೆಯಾಗಿದೆ. ಬುಧವಾರ 108ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2417ಕ್ಕೆ ತಲುಪಿದೆ.

Char Dham Yatra Suspended: ಕುಂಭಮೇಳದ ಬಳಿಕ ಎಚ್ಚೆತ್ತುಕೊಂಡ ಉತ್ತರಾಖಂಡ್ ಸರ್ಕಾರ; ಚಾರ್ ಧಾಮ್ ಯಾತ್ರೆ ರದ್ದು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 29, 2021 | 5:19 PM

Share

ಡೆಹ್ರಾಡೂನ್: ಕೊರೊನಾ ಸೋಂಕಿನ ಪ್ರಸರಣ ಹೆಚ್ಚಾಗುತ್ತಿರುವ ಕಾರಣ ಪ್ರಸಕ್ತ ವರ್ಷದ ಚಾರ್ ಧಾಮ್​ ಯಾತ್ರೆಯನ್ನು ರದ್ದು ಪಡಿಸಿದ್ದಾಗಿ ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್​ ರಾವತ್​ ಹೇಳಿದ್ದಾರೆ. ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಕುಂಭಮೇಳ ಕೊರೊನಾ ಹಾಟ್​ಸ್ಫಾಟ್ ಆಗಿ ಬದಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ಅನೇಕ ಸಾಧುಗಳಿಗೆ ಕೊರೊನಾ ತಗುಲಿತ್ತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಮನವಿಯ ಮೇರೆಗೆ ಕುಂಭಮೇಳವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು.

ಇದೀಗ ಚಾರ್​ಧಾಮ್​ ಯಾತ್ರೆಯನ್ನು ರದ್ದುಗೊಳಿಸಿ ಆದೇಶ ನೀಡಿರುವ ಮುಖ್ಯಮಂತ್ರಿ ರಾವತ್​, ಅರ್ಚಕರು ಪೂಜೆ ಮಾಡಬಹುದು. ಆದರೆ ಯಾತ್ರೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಭಕ್ತರು ಬದ್ರಿನಾಥ್​, ಕೇದಾರನಾಥ್​, ಯಮುನೋತ್ರಿ ಹಾಗೂ ಗಂಗೋತ್ರಿ (ಚಾರ್ ಧಾಮ್​)ಗಳಿಗೆ ಈ ಸಮಯದಲ್ಲಿ ಯಾತ್ರೆಗೆ ಹೋಗುತ್ತಾರೆ. ಈ ಚಾರ್​ಧಾಮ್​ ಯಾತ್ರೆಯ ಸಂಬಂಧ ಎರಡು ದಿನಗಳ ಹಿಂದಷ್ಟೇ ಉತ್ತರಾಖಂಡ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಇದೀಗ ಸಂಪೂರ್ಣವಾಗಿ ರದ್ದು ಮಾಡಿದೆ.

ಉತ್ತರಾಖಂಡ್​ನಲ್ಲಿ ಕೊವಿಡ್​ ಸೋಂಕಿನಿ ಪ್ರಮಾಣ ಹೆಚ್ಚಾಗಿದೆ. ಬುಧವಾರ ಒಂದೇ ದಿನ 6054 ಕೊರೊನಾ ಕೇಸ್​ಗಳು ದಾಖಲಾಗಿದ್ದು ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,68,616ಕ್ಕೆ ಏರಿಕೆಯಾಗಿದೆ. ಬುಧವಾರ 108ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2417ಕ್ಕೆ ತಲುಪಿದೆ. ಇದರಲ್ಲಿ ಅತಿ ಹೆಚ್ಚು ಸೋಂಕಿತರು ಇರುವುದು ಡೆಹ್ರಾಡೂನ್​​ನಲ್ಲಿ.

ಇದನ್ನೂ ಓದಿ: ಸರ್​.. 3 ಲಕ್ಷ ಕೊಟ್ರೂ ಉಳಿದ 90 ಸಾವಿರ ಕೊಡೋವರೆಗೂ ಅಮ್ಮನ ಬಾಡಿ ಕೊಟ್ಟಿರಲಿಲ್ಲ | ಮಗನ ಕಣ್ಣೀರು

ಶರಣು ಮಣ್ಣಿಗೆ : ಹುರಿಗಟ್ಟಿದ ರಟ್ಟೆಯೊಂದಿಗೆ ಅವುಡುಗಚ್ಚಿದ ದವಡೆಯೊಂದಿಗೆ ಇಳಕಲ್-ಇಸ್ಲಾಂಪುರದ ರೈತಮಕ್ಕಳು

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​