AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಕಟ್ಟಿದಾಕ್ಷಣ ರಾಮನಾಗುವುದಿಲ್ಲ: ಕಪಿಲ್ ಸಿಬಲ್ ವ್ಯಂಗ್ಯ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ.70ರಷ್ಟು ಪೂರ್ಣಗೊಂಡಿದೆ. 2024ರ ಜನವರಿ ಮೊದಲ ವಾರದೊಳಗೆ ಎರಡನೇ ಮಹಡಿಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಈ ನಡುವೆ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಮ ಮಂದಿರ ಕಟ್ಟಿದರೆ ರಾಮನಾಗುವುದಿಲ್ಲ, ರಾಮನ ಹಾದಿಯಲ್ಲಿ ಸಾಗುವವರೇ ರಾಮ ಎಂದು ಹೇಳಿದ್ದಾರೆ.

ರಾಮ ಮಂದಿರ ಕಟ್ಟಿದಾಕ್ಷಣ ರಾಮನಾಗುವುದಿಲ್ಲ: ಕಪಿಲ್ ಸಿಬಲ್ ವ್ಯಂಗ್ಯ
ಕಪಿಲ್ ಸಿಬಲ್
ನಯನಾ ರಾಜೀವ್
|

Updated on: Sep 17, 2023 | 12:54 PM

Share

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ.70ರಷ್ಟು ಪೂರ್ಣಗೊಂಡಿದೆ. 2024ರ ಜನವರಿ ಮೊದಲ ವಾರದೊಳಗೆ ಎರಡನೇ ಮಹಡಿಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಈ ನಡುವೆ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಮ ಮಂದಿರ ಕಟ್ಟಿದರೆ ರಾಮನಾಗುವುದಿಲ್ಲ, ರಾಮನ ಹಾದಿಯಲ್ಲಿ ಸಾಗುವವರೇ ರಾಮ ಎಂದು ಹೇಳಿದ್ದಾರೆ.

ಮೋದಿ ಸ್ವತಃ ಸನಾತನಿ ಅಲ್ಲ ಮತ್ತು ಅವರೇ ಸನಾತನವಲ್ಲದಿದ್ದರೆ ಅವರು ಸನಾತನ ಧರ್ಮವನ್ನು ಹೇಗೆ ರಕ್ಷಿಸುತ್ತಾರೆ. ಸೂಟು ಬೂಟು ಅಲ್ಲ ಸತ್ಯದ ಆಧಾರದಲ್ಲಿ ನಡೆದು ಹೋಗುತ್ತಿದ್ದ ಗಾಂಧೀಜಿಯೇ ನಿಜವಾದ ಸನಾತನಿ, ಸನಾತನ ಧರ್ಮದವರು ಕಟ್ಟಡಗಳನ್ನು ಕೆಡಗುವುದಿಲ್ಲ, ಬಿಜೆಪಿಯವರಿಗೆ ಸನಾತನದ ಅರ್ಥವೇ ಗೊತ್ತಿಲ್ಲ ಎಂದು ಕಡಿಕಾರಿದ್ದಾರೆ. ಈ ಮೊದಲು ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿಕೊಂಡು ಮಾತನಾಡಿ, ಸೈನಿಕರು ಹುತಾತ್ಮರಾದಾಗ ಸನಾತನಿಗಳು ಸಂಭ್ರಮಿಸುವುದಿಲ್ಲ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಉತ್ತರ ನೀಡಿದ್ದ ಪ್ರಧಾನಿ ಮೋದಿ ಪ್ರತಿಪಕ್ಷಗಳು ಸನಾತನ ಧರ್ಮವನ್ನು ನಾಶಪಡಿಸಲು ಪ್ರಯತ್ನಿಸುತ್ತಿವೆ , ದೇಶದ ಸನಾತನ ಸಂಪ್ರದಾಯದ ಮೇಲೆ ದಾಳಿ ಮಾಡಲು ಉಪಾಯ ಮಾಡುತ್ತಿವೆ ಎಂದು ಕಿಡಿ ಕಾರಿದ್ದರು.

ಮತ್ತಷ್ಟು ಓದಿ: ದೆಹಲಿಯಲ್ಲಿ ಯಶೋಭೂಮಿ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ; ವಿಶ್ವದರ್ಜೆಯ ಈ ಸೆಂಟರ್​ನ ವಿಶೇಷತೆಗಳೇನು?

ಇದಕ್ಕೂ ಮುನ್ನ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾಗೆ ಹೋಲಿಕೆ ಮಾಡಿದ್ದರು.

ಈ ರೋಗಗಳ ವಿರುದ್ಧ ಹೇಗೆ ನಮಗೆ ಹೋರಾಡಲು ಸಾಧ್ಯವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧವೂ ಹೋರಾಡಿ ಪ್ರಯೋಜನವಿಲ್ಲ ಅದನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅದಾದ ಬಳಿಕ ಸನಾತನ ಧರ್ಮದ ವಿಚಾರವಾಗಿ ಸಾಕಷ್ಟು ರಾಜಕೀಯ ನಾಯಕರು ಪರ, ವಿರೋಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ