AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ.. ಸೂಕ್ತ ಸಮಯದಲ್ಲಿ ನಕ್ಸಲರಿಗೆ ಕಟು ತಿರುಗೇಟು ನೀಡುತ್ತೇವೆ: ಅಮಿತ್​ ಶಾ

ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಅಮಿತ್ ಶಾ, ಯೋಧರ ಸಾವಿನ ಸುದ್ದಿ ಕೇಳುತ್ತಲೇ ಪ್ರಚಾರವನ್ನು ಅರ್ಧಕ್ಕೆ ಬಿಟ್ಟು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ಹೊರಡುವುದಕ್ಕೂ ಮೊದಲು ಅಸ್ಸಾಂನ ಸೌಲ್​ಕುಂಚಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ.. ಸೂಕ್ತ ಸಮಯದಲ್ಲಿ ನಕ್ಸಲರಿಗೆ ಕಟು ತಿರುಗೇಟು ನೀಡುತ್ತೇವೆ: ಅಮಿತ್​ ಶಾ
ಅಮಿತ್ ಶಾ (ಸಂಗ್ರಹ ಚಿತ್ರ)
Lakshmi Hegde
|

Updated on: Apr 04, 2021 | 7:06 PM

Share

ಗುವಾಹಟಿ: ಚತ್ತೀಸ್​ಗಡ್​ನಲ್ಲಿ ನಕ್ಸಲರ ದಾಳಿಗೆ ಬರೋಬ್ಬರಿ 22 ಸೈನಿಕರು ಹುತಾತ್ಮರಾಗಿದ್ದಾರೆ. ನಿನ್ನೆಯಿಂದಲೂ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಲೇ ಇತ್ತು. ನಕ್ಸಲರ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದ ಭದ್ರತಾ ಪಡೆಗಳ ಮೇಲೆ ಸುಮಾರು 400 ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ತತ್ಪರಿಣಾಮ 22 ಯೋಧರು ಜೀವ ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಗೃಹಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಅಮಿತ್ ಶಾ, ಯೋಧರ ಸಾವಿನ ಸುದ್ದಿ ಕೇಳುತ್ತಲೇ ಪ್ರಚಾರವನ್ನು ಅರ್ಧಕ್ಕೆ ಬಿಟ್ಟು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ಹೊರಡುವುದಕ್ಕೂ ಮೊದಲು ಅಸ್ಸಾಂನ ಸೌಲ್​ಕುಂಚಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ನಿಖರವಾಗಿ ಇನ್ನೂ ಗೊತ್ತಿಲ್ಲ. ಆದರೆ ಯೋಧರನ್ನು ಹತ್ಯೆ ಮಾಡಿದ ನಕ್ಸಲರಿಗೆ, ಸೂಕ್ತ ಸಮಯದಲ್ಲಿ ಕಟು ಉತ್ತರ ನೀಡಲಾಗುವುದು ಎಂದು ಹೇಳಿದ್ದಾರೆ. ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಕುಟುಂಬಕ್ಕೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

ಅಸ್ಸಾನಿಂದ ದೆಹಲಿಗೆ ಹೋದ ಅಮಿತ್​ ಶಾ, ಚತ್ತೀಸ್​ಗಡ್​​ನ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ, ಸ್ಥಳದಲ್ಲಿರುವ ಪರಿಸ್ಥಿತಿಯ ಬಗ್ಗೆ ವರದಿ ಪಡೆದಿದ್ದಾರೆ.

ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ಯುವತಿಯರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ

Health Tips: ಈ ಔಷಧೀಯ ಸಸ್ಯಗಳು ನಿಮ್ಮ ಗಾರ್ಡನ್​​ನಲ್ಲಿ ಇರಲಿ; ಅಡುಗೆಗೂ ಆಯಿತು.. ಆರೋಗ್ಯಕ್ಕೂ ಒಳ್ಳೆಯದು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?