AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ತೊರೆದ ಬಂಗಾಳಿ ನಟಿ; ಈ ಪಕ್ಷದಲ್ಲಿ ಪ್ರಾಮಾಣಿಕತೆಯೇ ಇಲ್ಲವೆಂದ ಶ್ರಬಂತಿ !

ಶ್ರಬಂತಿ ತೃಣಮೂಲ ಕಾಂಗ್ರೆಸ್​ಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಪತ್ರಕರ್ತರೊಬ್ಬರು ಪ್ರಶ್ನಿಸಿದಾಗ, ಎಲ್ಲಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದು ಅವರು ಹೇಳಿದ್ದಾರೆ. 

ಬಿಜೆಪಿ ತೊರೆದ ಬಂಗಾಳಿ ನಟಿ; ಈ ಪಕ್ಷದಲ್ಲಿ ಪ್ರಾಮಾಣಿಕತೆಯೇ ಇಲ್ಲವೆಂದ ಶ್ರಬಂತಿ !
ಶ್ರಬಂಟಿ ಚಟರ್ಜಿ
TV9 Web
| Edited By: |

Updated on: Nov 11, 2021 | 4:19 PM

Share

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೂ ಮೊದಲು ಬಿಜೆಪಿ ಸೇರ್ಪಡೆಯಾಗಿದ್ದ ಬೆಂಗಾಳಿ ನಟಿ ಶ್ರಬಂತಿ ಚಟರ್ಜಿ ಇದೀಗ ಕಮಲ ಪಕ್ಷವನ್ನು ತೊರೆದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಪೂರ್ವ ಅಂದರೆ ಮಾರ್ಚ್​ 2ರಂದು ಬಿಜೆಪಿ ಸೇರಿದ್ದ ಶ್ರಬಂತಿ, ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. 

ಇದೀಗ ತಮ್ಮ ರಾಜೀನಾಮೆ ವಿಚಾರವನ್ನು ಟ್ವೀಟ್​ ಮಾಡಿ ತಿಳಿಸಿದ್ದಾರೆ. ನಾನು ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದೆ. ಆದರೆ ಇದೀಗ  ಆ ಪಕ್ಷವನ್ನು ಬಿಡುತ್ತಿದ್ದೇನೆ. ಬಂಗಾಳದ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಪ್ರಾಮಾಣಿಕತೆ ತೋರುತ್ತಿಲ್ಲ. ಯಾವುದೇ ಉಪಕ್ರಮಗಳನ್ನೂ ತೆಗೆದುಕೊಳ್ಳುತ್ತಿಲ್ಲ. ಈ ಕಾರಣಕ್ಕೆ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ನಟಿ ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇನ್ನೊಂದು ಊಹಾಪೋಹ ಶುರುವಾಗಿದೆ. ಶ್ರಬಂತಿ ತೃಣಮೂಲ ಕಾಂಗ್ರೆಸ್​ಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಪತ್ರಕರ್ತರೊಬ್ಬರು ಶ್ರಬಂತಿ ಬಳಿ ಪ್ರಶ್ನಿಸಿದಾಗ, ಎಲ್ಲಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದು ಅವರು ಹೇಳಿದ್ದಾರೆ.  ವಿಧಾನಸಭೆ ಚುನಾವಣೆಗೂ ಮೊದಲು ಅವರು ಬಿಜೆಪಿ ನಾಯಕರಾದ ಕೈಲಾಶ್​ ವಿಜಯ್​ವರ್ಗಿಯಾ, ದಿಲೀಪ್​ ಘೋಷ್​ ಅವರೊಂದಿಗೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು. ಬೆಹಾಲಾ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇವರು ಕೇವಲ 60 ಸಾವಿರ ಮತಗಳಿಸಿ ಟಿಎಂಸಿಯ ಪಾರ್ಥ ಚಟರ್ಜಿ ವಿರುದ್ಧ ಸೋತಿದ್ದಾರೆ.  ಇನ್ನು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಸೇರಿದ್ದ ಹಲವು ಟಿಎಂಸಿ ನಾಯಕರೂ ಕೂಡ ಇದೀಗ ವಾಪಸ್​ ಮಾತೃಪಕ್ಷಕ್ಕೆ ತೆರಳುತ್ತಿದ್ದಾರೆ.

ಇದನ್ನೂ ಓದಿ: ‘ಅಪ್ಪು ಮಾಮನ ನೆನಪಲ್ಲಿ ‘ಮದಗಜ’ ಸಾಂಗ್​ ರಿಲೀಸ್​ ಮಾಡಿದೀವಿ’; ಸುದ್ದಿಗೋಷ್ಠಿಯಲ್ಲಿ ಶ್ರೀಮುರಳಿ ಮಾತು

Video: ಸ್ಮಶಾನದಲ್ಲಿ ಎಚ್ಚರವಿಲ್ಲದೆ ಬಿದ್ದಿದ್ದವನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​ ಅಧಿಕಾರಿ; ಚೆನ್ನೈ ಮಳೆ ಮಧ್ಯೆ ಮನಕಲಕುವ ದೃಶ್ಯ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ