AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಎದುರು ವಾರಾಣಸಿಯಿಂದ ಸ್ಪರ್ಧಿಸಿ: ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಸವಾಲು

ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಬೇಕು ಎಂದು ಮಮತಾ ಒತ್ತಾಯಿಸಿದ ಬೆನ್ನಲ್ಲೇ ಪಾಲ್ ಅವರು ಸ್ಪರ್ಧೆಗೆ ಸವಾಲು ಹಾಕಿದ್ದಾರೆ. ಇಂಡಿಯಾ ಮೈತ್ರಿಕೂಟದ ನೇತೃತ್ವವನ್ನು ಮಮತಾ ವಹಿಸಬೇಕು ಎಂದು ತೃಣಮೂಲ ಕಾಂಗ್ರೆಸ್​​ ಪಕ್ಷದವರಿಂದ ಆಗ್ರಹ ವ್ಯಕ್ತವಾಗಿತ್ತು.

ಪ್ರಧಾನಿ ಮೋದಿ ಎದುರು ವಾರಾಣಸಿಯಿಂದ ಸ್ಪರ್ಧಿಸಿ: ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಸವಾಲು
ಅಗ್ನಿಮಿತ್ರಾ ಪಾಲ್Image Credit source: ANI
Ganapathi Sharma
|

Updated on: Dec 23, 2023 | 10:57 AM

Share

ನವದೆಹಲಿ, ಡಿಸೆಂಬರ್ 23: ಧೈರ್ಯವಿದ್ದರೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಅಗ್ನಿಮಿತ್ರಾ ಪಾಲ್ ಸವಾಲು ಹಾಕಿದ್ದಾರೆ. ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ವಿರುದ್ಧ ಕಣಕ್ಕಿಳಿಯುಂತೆ ಮಮತಾ ಅವರಿಗೆ ಪಾಲ್ ಆಗ್ರಹಿಸಿದ್ದಾರೆ.

‘ಮಮತಾ ಬ್ಯಾನರ್ಜಿ ಯಾಕೆ ವಾರಾಣಸಿಯಿಂದ ಸ್ಪರ್ಧಿಸಬಾರದು? ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬದಲಿಗೆ ಸ್ಪರ್ಧಿಸುವ ಧೈರ್ಯ ಅವರಿಗಿದ್ದರೆ ಮೋದಿ ವಿರುದ್ಧ ಸ್ಪರ್ಧಿಸಲಿ. ನೀವು (ಮಮತಾ) ಪ್ರಧಾನಿಯಾಗಲು ಬಯಸುತ್ತೀರಲ್ಲವೇ? ಹಾಗಿದ್ದರೆ ಪ್ರಧಾನಿಯವರ ವಿರುದ್ಧವೇ ಸ್ಪರ್ಧಿಸಿ’ ಎಂದು ಅಗ್ನಿಮಿತ್ರಾ ಪಾಲ್ ಹೇಳಿದ್ದಾರೆ. ಹೇಳಿಕೆಯ ವಿಡಿಯೋವನ್ನು ಎಎನ್​ಐ ಸುದ್ದಿಸಂಸ್ಥೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪ್ರಕಟಿಸಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಬೇಕು ಎಂದು ಮಮತಾ ಒತ್ತಾಯಿಸಿದ ಬೆನ್ನಲ್ಲೇ ಪಾಲ್ ಅವರು ಸ್ಪರ್ಧೆಗೆ ಸವಾಲು ಹಾಕಿದ್ದಾರೆ. ಇಂಡಿಯಾ ಮೈತ್ರಿಕೂಟದ ನೇತೃತ್ವವನ್ನು ಮಮತಾ ವಹಿಸಬೇಕು ಎಂದು ತೃಣಮೂಲ ಕಾಂಗ್ರೆಸ್​​ ಪಕ್ಷದವರಿಂದ ಆಗ್ರಹ ವ್ಯಕ್ತವಾಗಿತ್ತು.

ಇದನ್ನೂ ಓದಿ: ಯುವಕರು, ಬಡವರು, ಮಹಿಳೆಯರು, ರೈತರ ಬಗ್ಗೆ ಗಮನಹರಿಸಿ: ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಸಲಹೆ

ಪಶ್ಚಿಮ ಬಂಗಾಳದ ಕೆಲವು ಕಾಂಗ್ರೆಸ್ ನಾಯಕರು ಎಡಪಕ್ಷಗಳೊಂದಿಗೆ ಸೀಟು ಹಂಚಿಕೆಯ ಹೊಂದಾಣಿಕೆಗೆ ಒತ್ತಾಯಿಸುತ್ತಿದ್ದಾರೆ ಎಂಬ ವದಂತಿಗಳ ನಡುವೆಯೇ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಮಾತುಕತೆಗೆ ಮುಕ್ತರಾಗಿದ್ದಾರೆ ಎಂದು ಮೂಲಗಳು ಹೇಳಿವೆ. 2019ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು