AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಎದುರು ವಾರಾಣಸಿಯಿಂದ ಸ್ಪರ್ಧಿಸಿ: ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಸವಾಲು

ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಬೇಕು ಎಂದು ಮಮತಾ ಒತ್ತಾಯಿಸಿದ ಬೆನ್ನಲ್ಲೇ ಪಾಲ್ ಅವರು ಸ್ಪರ್ಧೆಗೆ ಸವಾಲು ಹಾಕಿದ್ದಾರೆ. ಇಂಡಿಯಾ ಮೈತ್ರಿಕೂಟದ ನೇತೃತ್ವವನ್ನು ಮಮತಾ ವಹಿಸಬೇಕು ಎಂದು ತೃಣಮೂಲ ಕಾಂಗ್ರೆಸ್​​ ಪಕ್ಷದವರಿಂದ ಆಗ್ರಹ ವ್ಯಕ್ತವಾಗಿತ್ತು.

ಪ್ರಧಾನಿ ಮೋದಿ ಎದುರು ವಾರಾಣಸಿಯಿಂದ ಸ್ಪರ್ಧಿಸಿ: ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಸವಾಲು
ಅಗ್ನಿಮಿತ್ರಾ ಪಾಲ್Image Credit source: ANI
ಗಣಪತಿ ಶರ್ಮಾ
|

Updated on: Dec 23, 2023 | 10:57 AM

Share

ನವದೆಹಲಿ, ಡಿಸೆಂಬರ್ 23: ಧೈರ್ಯವಿದ್ದರೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಅಗ್ನಿಮಿತ್ರಾ ಪಾಲ್ ಸವಾಲು ಹಾಕಿದ್ದಾರೆ. ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ವಿರುದ್ಧ ಕಣಕ್ಕಿಳಿಯುಂತೆ ಮಮತಾ ಅವರಿಗೆ ಪಾಲ್ ಆಗ್ರಹಿಸಿದ್ದಾರೆ.

‘ಮಮತಾ ಬ್ಯಾನರ್ಜಿ ಯಾಕೆ ವಾರಾಣಸಿಯಿಂದ ಸ್ಪರ್ಧಿಸಬಾರದು? ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬದಲಿಗೆ ಸ್ಪರ್ಧಿಸುವ ಧೈರ್ಯ ಅವರಿಗಿದ್ದರೆ ಮೋದಿ ವಿರುದ್ಧ ಸ್ಪರ್ಧಿಸಲಿ. ನೀವು (ಮಮತಾ) ಪ್ರಧಾನಿಯಾಗಲು ಬಯಸುತ್ತೀರಲ್ಲವೇ? ಹಾಗಿದ್ದರೆ ಪ್ರಧಾನಿಯವರ ವಿರುದ್ಧವೇ ಸ್ಪರ್ಧಿಸಿ’ ಎಂದು ಅಗ್ನಿಮಿತ್ರಾ ಪಾಲ್ ಹೇಳಿದ್ದಾರೆ. ಹೇಳಿಕೆಯ ವಿಡಿಯೋವನ್ನು ಎಎನ್​ಐ ಸುದ್ದಿಸಂಸ್ಥೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪ್ರಕಟಿಸಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಬೇಕು ಎಂದು ಮಮತಾ ಒತ್ತಾಯಿಸಿದ ಬೆನ್ನಲ್ಲೇ ಪಾಲ್ ಅವರು ಸ್ಪರ್ಧೆಗೆ ಸವಾಲು ಹಾಕಿದ್ದಾರೆ. ಇಂಡಿಯಾ ಮೈತ್ರಿಕೂಟದ ನೇತೃತ್ವವನ್ನು ಮಮತಾ ವಹಿಸಬೇಕು ಎಂದು ತೃಣಮೂಲ ಕಾಂಗ್ರೆಸ್​​ ಪಕ್ಷದವರಿಂದ ಆಗ್ರಹ ವ್ಯಕ್ತವಾಗಿತ್ತು.

ಇದನ್ನೂ ಓದಿ: ಯುವಕರು, ಬಡವರು, ಮಹಿಳೆಯರು, ರೈತರ ಬಗ್ಗೆ ಗಮನಹರಿಸಿ: ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಸಲಹೆ

ಪಶ್ಚಿಮ ಬಂಗಾಳದ ಕೆಲವು ಕಾಂಗ್ರೆಸ್ ನಾಯಕರು ಎಡಪಕ್ಷಗಳೊಂದಿಗೆ ಸೀಟು ಹಂಚಿಕೆಯ ಹೊಂದಾಣಿಕೆಗೆ ಒತ್ತಾಯಿಸುತ್ತಿದ್ದಾರೆ ಎಂಬ ವದಂತಿಗಳ ನಡುವೆಯೇ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಮಾತುಕತೆಗೆ ಮುಕ್ತರಾಗಿದ್ದಾರೆ ಎಂದು ಮೂಲಗಳು ಹೇಳಿವೆ. 2019ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?