Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸೆ ಪ್ರಕರಣದ ವಿಚಾರಣೆ ಜಾರಿಯಲ್ಲಿರುವಾಗಲೇ ದೆಹಲಿಗೆ ಭೇಟಿ ನೀಡಲಿದ್ದಾರೆ ಮಮತಾ ಬ್ಯಾನರ್ಜಿ

ಕಲ್ಕತ್ತ ಹೈಕೋರ್ಟ್ ಬಂಗಾಳದಲ್ಲಿ ಚುನಾವಣೋತ್ತರ ಹಿಂಸೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸುತ್ತಿರುವಾಗಲೇ, ಮಮತಾ ಅವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಪ್ರಕರಣದ ವಿಷಯವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್​ಎಚ್​ಆರ್​ಸಿ), ‘ಬಂಗಾಳದಲ್ಲಿ ಆಡಳಿತವೆಂಬುದೇ ಇಲ್ಲ, ಆಡಳಿತ ನಡೆಸುತ್ತಿರುವವರು ಹೇಳಿದ್ದೇ ಅಲ್ಲಿ ಕಾನೂನಾಗಿದೆ,’ ಎಂದು ಹೇಳಿದೆ.

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸೆ ಪ್ರಕರಣದ ವಿಚಾರಣೆ ಜಾರಿಯಲ್ಲಿರುವಾಗಲೇ ದೆಹಲಿಗೆ ಭೇಟಿ ನೀಡಲಿದ್ದಾರೆ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜೀ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 18, 2021 | 11:20 PM

ಕೊಲ್ಕತ್ತಾ: ಜುಲೈ 21 ರಂದು ತನ್ನ ವಾರ್ಷಿಕ ಹುತಾತ್ಮರ ದಿನ ಱಲಿಗಾಗಿ ತೃಣಮೂಲ್ ಕಾಂಗ್ರೆಸ್ ಸಿದ್ಧತೆಯಲ್ಲಿ ತೊಡಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಳೆದ ಸಲದಂತೆ ಈ ಬಾರಿಯೂ ವರ್ಚ್ಯುಯಲ್ ಭಾಷಣ ಮಾಡಲಿದ್ದಾರೆ. ಆದರೆ, ಈ ಸಲದ ಅವರ ಭಾಷಣವು ಇತ್ತೀಚೆಗೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಅವರ ಟಿಎಮ್​ಸಿ ಪಕ್ಷ ಭರ್ಜರಿ ಜಯ ಸಾಧಿಸಿದ ನಂತರ ಮಾಡಲಿರುವ ಮೊದಲ ಪ್ರಮುಖ ಭಾಷಣವಾಗಲಿದೆ. ತೃಣಮೂಲ ಪಕ್ಷದ ಮೂಲಗಳ ಪ್ರಕಾರ ಮಮತಾ ಅವರ ಭಾಷಣವನ್ನು ಈ ಬಾರಿ ಬಂಗಾಳವಲ್ಲದೆ, ತ್ರಿಪುರ, ಅಸ್ಸಾಂ, ದೆಹಲಿ, ಉತ್ತರ ಪ್ರದೇಶ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯ ಗುಜರಾತ್​ನಲ್ಲೂ ನೇರ ಪ್ರಸಾರಗೊಳ್ಳಲಿದೆ.

ಮಮತಾ ಅವರು ಜುಲೈ 25 ರಂದು ದೆಹಲಿಗೆ ಹೋಗಲಿರುವುದರಿಂದ ಅದಕ್ಕೆ 4 ದಿನ ಮೊದಲು ನಡೆಯುವ ಈ ಱಲಿಯಲ್ಲಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲಿದ್ದಾರೆಂದು ನಿರೀಕ್ಷಿಸಲಾಗಿದೆ. ಆ ವಾರವೆಲ್ಲ ದೆಹಲಿಯಲ್ಲಿ ಉಳಿಯಲಿರುವ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ.

ಅಖಿಲೇಶ್ ಯಾದವ್ ಮತ್ತು ಅರವಿಂದ್ ಕೇಜ್ರಿವಾಲ್​ ಅವರನ್ನು ಸಹ ಅವರು ಭೇಟಿ ಮಾಡುವ ಸಾಧ್ಯತೆಯಿದೆ. ಉತ್ತರ ಪ್ರಧೇಶದಲ್ಲಿ ಮುಂದಿನ ವರ್ಷ ವಿಧಾನ ಸಭೆ ಚುನಾವಣೆ ನಡೆಯಲಿರುವುದರಿಂದ ಅದಕ್ಕೆ ಮೊದಲು ವಿರೋಧ ಪಕ್ಷಗಳ ಒಂದು ಸಂಯುಕ್ತ ರಂಗ ರಚಿಸಲು ಗಂಭೀರ ಪ್ರಯತ್ನಗಳು ನಡೆದಿವೆ. ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳು ಸಮಯ ನೀಡಿದರೆ ಅವರನ್ನೂ ಭೇಟಿಯಾಗುವುದಾಗಿ ಮಮತಾ ಹೇಳಿದ್ದಾರೆ.

ಕಲ್ಕತ್ತ ಹೈಕೋರ್ಟ್ ಬಂಗಾಳದಲ್ಲಿ ಚುನಾವಣೋತ್ತರ ಹಿಂಸೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸುತ್ತಿರುವಾಗಲೇ, ಮಮತಾ ಅವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಪ್ರಕರಣದ ವಿಷಯವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್​ಎಚ್​ಆರ್​ಸಿ), ‘ಬಂಗಾಳದಲ್ಲಿ ಆಡಳಿತವೆಂಬುದೇ ಇಲ್ಲ, ಆಡಳಿತ ನಡೆಸುತ್ತಿರುವವರು ಹೇಳಿದ್ದೇ ಅಲ್ಲಿ ಕಾನೂನಾಗಿದೆ,’ ಎಂದು ಹೇಳಿದೆ.

ಚುನಾವಣೋತ್ತರ ಹಿಂಸೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಯೋಗ ಹೇಳಿದ್ದು, ಒಬ್ಬ ಸಚಿವನೂ ಸೇರಿದಂತೆ ‘ತೃಣಮೂಲ ಪಕ್ಷದ ನಾಯಕರು ಕುಖ್ಯಾತ ಕ್ರಿಮಿನಲ್​ಗಳು,’ ಎಂದು ಹೇಳಿದೆ.

ಎನ್​ಎಚ್​ಆರ್​ಸಿ ವರದಿಯನ್ನು ಲೀಕ್ ಮಾಡಲಾಗಿದೆ ಎಂದು ಆರೋಪಿಸಿರುವ ಮಮತಾ ಅವರು ಬಿಜೆಪಿಯೊಂದಿಗೆ ಸಂಪರ್ಕವಿಟ್ಟುಕೊಂಡಿರುವ ಆಯೋಗದ ಕೆಲ ಸದಸ್ಯರು ತಪ್ಪು ಮಾಹಿತಿ ಬಹಿರಂಗಗೊಳ್ಳುವಂತೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

‘ಅವರು ವರದಿಯನ್ನು ಹೇಗೆ ಲೀಕ್ ಮಾಡಿದರು? ಪಶ್ಚಿಮ ಬಂಗಾಳಕ್ಕೆ ಕೆಟ್ಟ ಹೆಸರು ತರುವ ಮತ್ತು ರಾಜಕೀಯ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಲಾಗಿದೆ. ಅವರು ಚುನಾವಣೆಯಲ್ಲಿ ಸೋತಿರುವುದರಿಂದ ಕಂಗಾಲಾಗಿದ್ದಾರೆ, ಹಾಗಾಗಿ ಇದು ಅವರ ಸೇಡು ತೀರಿಸಿಕೊಳ್ಳುವ ವಿಧಾನ,’ ಎಂದು ಹೇಳಿದ ಮಮತಾ,ಉತ್ತರ ಪ್ರದೇಶದಲ್ಲಿ ಯಾವುದೇ ಕಾನೂನಿಲ್ಲ,’ ಎಂದರು.

ಸದರಿ ಪ್ರಕರಣದ ಮುಂದಿನ ವಿಚಾರಣೆ ಜುಲೈ 22ರಂದು ನಡೆಯಲಿದೆ. ಅದಕ್ಕೆ ಮೊದಲು ಟಿಎಮ್​ಸಿ ಸುಪ್ರೀಮ್​ ಕೋರ್ಟ್​ನಲ್ಲಿ ಮನವಿ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಬಿಜೆಪಿ ಸದರಿ ಪ್ರಕರಣದ ಮೇಲೆ ಒತ್ತಡ ಹೇರುತ್ತಿದೆ.

ರವಿವಾರದಂದು ಹೇಳಿಕೆಯೊಂದನ್ನು ನೀಡಿದ ಪಕ್ಷದ ಎಸ್​ಸಿ ಮೋರ್ಚಾದ ನಾಯಕ ದುಲಾಲ್ ಬಾರ್ ಅವರು, ಎನ್​ಎಚ್​ಆರ್​ಸಿ ವರದಿಯ ಆಧಾರದ ಮೇಲೆ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದರು. ಕಳೆದ ಎರಡು ತಿಂಗಳುಗಳಲ್ಲಿ ಬಿಜೆಪಿಯ 42 ಬೆಂಬಲಿಗರನ್ನು ಕೊಲ್ಲಲಾಗಿದೆ ಅವರಲ್ಲಿ 29 ಜನ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದವರು ಎಂದು ಹೇಳಿದರು. ಇದಕ್ಕೆ ಮೊದಲು ಬಿಜೆಪಿಯ ಅಂಗವು ಎನ್​ಎಚ್​ಆರ್​ಸಿಗೆ ದೌರ್ಜನ್ಯದ 1,627 ದೂರುಗಳನ್ನು ಸಲ್ಲಿಸಿದೆ ಮತ್ತು ರವಿವಾರದಂದು 5,170 ದೂರುಗಳನ್ನು ಸಲ್ಲಿಸಲಾಗಿದೆ ಎಂದು ಬಾರ್ ಹೇಳಿದರು.

‘ಬಂಗಾಳದಲ್ಲಿ ಜನರ ಸುರಕ್ಷತೆಯ ದೃಷ್ಟಿಯಿಂದ ಎನ್​ಎಚ್​ಆರ್​ಸಿ ವರದಿಯಲ್ಲಿ ಉಲ್ಲೇಖಿಸಲ್ಪಟ್ಟಿರುವ ತೃಣಮೂಲ ಪಕ್ಷದ ನಾಯಕರೆಲ್ಲ ರಾಜೀನಾಮೆ ನೀಡಬೇಕು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿಗಳ ಆಳ್ವಿಕೆ ಜಾರಿಗೆ ತರಬೇಕೆನ್ನುವುದು ನಮ್ಮ ಆಗ್ರಹವಾಗಿದೆ, ಹಾಗಾಗದೇ ಹೋದ ಪಕ್ಷದಲ್ಲಿ ಬಂಗಾಳ ಭಾರತದಿಂದ ಬೇರ್ಪಟ್ಟ ರಾಜ್ಯವೆನಿಸಿಕೊಳ್ಳುತ್ತದೆ,’ ಎಂದು ಬಾರ್ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತಾಡಿದ್ದ ಬಿಜೆಪಿ ಬಾತ್ಮೀದಾರ ಸಮಿಕ್ ಭಟ್ಟಾಚಾರ್ಯ ಅವರು, ಎನ್​ಎಚ್​ಆರ್​ಸಿಯ ವರದಿ ಮತ್ತು ಅದರಲ್ಲಿ ಮಾಡಿರುವ ಶಿಫಾರಸ್ಸುಗಳು ಬಂಗಾಳದಲ್ಲಿ ಸಾಂವಿಧಾನಿಕ ಆಡಳಿತ ಯಂತ್ರ ನಾಶವಾಗಿರುವುದನ್ನು ಸೂಚಿಸುತ್ತದೆ. ಈಗ ಭಾರತ ಸಂವಿಧಾನದ ರಕ್ಷಕ ಮತ್ತು ಅದನ್ನು ಅರ್ಥೈಸುವವರು ಮಧ್ಯಸ್ಥಿಕೆ ವಹಿಸಬೇಕಿದೆ. ಆದರೆ, ಬಿಜೆಪಿಯು ಬಂಗಾಳದಲ್ಲಿ 356 ನೇ ವಿಧಿಗಾಗಿ ಒತ್ತಾಯಿಸುತ್ತಿಲ್ಲ. ನಾವು ತಾತ್ವಿಕವಾಗಿ ಮತ್ತು ಸೈದ್ಧಾಂತಿಕವಾಗಿ ಅದಕ್ಕೆ ವಿರೋಧಿಗಳಾಗಿದ್ದೇವೆ,’ ಎಂದು ಹೇಳಿದ್ದರು.

ಇದನ್ನೂ ಓದಿ: Mamata Banerjee ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರನ್ನು ವಾಪಸ್ ಕರೆಸಿಕೊಳ್ಳಲು ಮನವಿ ಮಾಡಿದ್ದ ಮಮತಾ ಬ್ಯಾನರ್ಜಿಗೆ ₹5 ಲಕ್ಷ ದಂಡ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್