AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದ ನಡುವಿನ ನೀರು ಹಂಚಿಕೆ ಬಗ್ಗೆ ಏಕಪಕ್ಷೀಯ ಮಾತುಕತೆ ಸರಿಯಲ್ಲ: ಮೋದಿಗೆ ಮಮತಾ ಪತ್ರ

ಇತ್ತೀಚೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮೂರನೇ ಅಧಿಕಾರಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ದೆಹಲಿಗೆ ಭೇಟಿ ನೀಡಿದಾಗ ಗಂಗಾ ಮತ್ತು ತೀಸ್ತಾ ಜಲ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿತ್ತು.

ಬಾಂಗ್ಲಾದೇಶದ ನಡುವಿನ ನೀರು ಹಂಚಿಕೆ ಬಗ್ಗೆ ಏಕಪಕ್ಷೀಯ ಮಾತುಕತೆ ಸರಿಯಲ್ಲ: ಮೋದಿಗೆ ಮಮತಾ ಪತ್ರ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on: Jun 24, 2024 | 6:28 PM

ದೆಹಲಿ  ಜೂನ್ 24: ಪಶ್ಟಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದು, ಬಾಂಗ್ಲಾದೇಶದ (Bangladesh) ನಡುವಿನ ನೀರು ಹಂಚಿಕೆಯ ಮಾತುಕತೆಯನ್ನು ಆಕ್ಷೇಪಿಸಿದ್ದಾರೆ. ಈ ಮಾತುಕತೆಯಲ್ಲಿ ಭಾಗವಹಿಸಲು ಬಂಗಾಳವನ್ನು ಆಹ್ವಾನಿಸಲಾಗಿಲ್ಲ. “ಸಮಾಲೋಚನೆ ಮತ್ತು ರಾಜ್ಯ ಸರ್ಕಾರದ ಅಭಿಪ್ರಾಯವಿಲ್ಲದೆ ಇಂತಹ ಏಕಪಕ್ಷೀಯ ಚರ್ಚೆಗಳು ಮತ್ತು ನಿರ್ಧಾರ  ಸ್ವೀಕಾರಾರ್ಹ ಅಲ್ಲ  ಎಂದು ಮಮತಾ ಹೇಳಿದ್ದು, ಕೋಲ್ಕತ್ತಾ ಮತ್ತು ಢಾಕಾ ನಡುವಿನ ನಿಕಟ ಸಂಬಂಧವನ್ನು ಒತ್ತಿಹೇಳಿದರು.

ಇತ್ತೀಚೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮೂರನೇ ಅಧಿಕಾರಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ದೆಹಲಿಗೆ ಭೇಟಿ ನೀಡಿದಾಗ ಗಂಗಾ ಮತ್ತು ತೀಸ್ತಾ ಜಲ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿತ್ತು.

“ಭಾರತ ಸರ್ಕಾರವು 2026 ರಲ್ಲಿ ಮುಕ್ತಾಯಗೊಳ್ಳುತ್ತಿರುವ ಭಾರತ-ಬಾಂಗ್ಲಾದೇಶ ಫರಕ್ಕಾ ಒಪ್ಪಂದವನ್ನು (1996) ನವೀಕರಿಸುವ ಪ್ರಕ್ರಿಯೆಯಲ್ಲಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ನಡುವಿನ ನೀರಿನ ಹಂಚಿಕೆಯನ್ನು ವಿವರಿಸುವ ಒಪ್ಪಂದವಾಗಿದೆ.

ಬಾಂಗ್ಲಾದೇಶ ಮತ್ತು ಭಾರತ, ನಿಮಗೆ ತಿಳಿದಿರುವಂತೆ, ಪಶ್ಚಿಮ ಬಂಗಾಳದ ಜನರಿಗೆ ದೊಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ” ಎಂದು ಮಮತಾ ಬ್ಯಾನರ್ಜಿ ಬರೆದಿದ್ದಾರೆ. ಬಂಗಾಳದ ಜನರು, ಅಂತಹ ಒಪ್ಪಂದಗಳಿಂದ  ಸಂಕಷ್ಟ ಅನುಭವಿಸುತ್ತಾರೆ ಎಂದು  ಮಮತಾ ಹೇಳಿದ್ದಾರೆ.

ಇದನ್ನೂ ಓದಿ: JP Nadda: ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಬಿಜೆಪಿಯ ಜೆಪಿ ನಡ್ಡಾ ನೇಮಕ

ಪಶ್ಚಿಮ ಬಂಗಾಳ ರಾಜ್ಯವು ಈ ಹಿಂದೆ ಹಲವಾರು ವಿಷಯಗಳಲ್ಲಿ ಬಾಂಗ್ಲಾದೇಶದೊಂದಿಗೆ ಸಹಕರಿಸಿದೆ ಎಂದ ಮಮತಾ ಭಾರತ-ಬಾಂಗ್ಲಾದೇಶ ಎನ್‌ಕ್ಲೇವ್‌ಗಳು, ಇಂಡೋ-ಬಾಂಗ್ಲಾದೇಶ ರೈಲು ಮಾರ್ಗ ಮತ್ತು ಬಸ್ ಸೇವೆಗಳ ವಿನಿಮಯವನ್ನು  ಉಲ್ಲೇಖಿಸಿದ್ದಾರೆ.

“ಆದಾಗ್ಯೂ, ನೀರು ಬಹಳ ಅಮೂಲ್ಯವಾಗಿದೆ ಮತ್ತು ಜನರ ಜೀವನಾಡಿಯಾಗಿದೆ. ಜನರ ಮೇಲೆ ತೀವ್ರ ಮತ್ತು ಪ್ರತಿಕೂಲ ಪರಿಣಾಮ ಬೀರುವ ಇಂತಹ ಸೂಕ್ಷ್ಮ ವಿಚಾರದಲ್ಲಿ ನಾವು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್