AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದ ನಡುವಿನ ನೀರು ಹಂಚಿಕೆ ಬಗ್ಗೆ ಏಕಪಕ್ಷೀಯ ಮಾತುಕತೆ ಸರಿಯಲ್ಲ: ಮೋದಿಗೆ ಮಮತಾ ಪತ್ರ

ಇತ್ತೀಚೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮೂರನೇ ಅಧಿಕಾರಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ದೆಹಲಿಗೆ ಭೇಟಿ ನೀಡಿದಾಗ ಗಂಗಾ ಮತ್ತು ತೀಸ್ತಾ ಜಲ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿತ್ತು.

ಬಾಂಗ್ಲಾದೇಶದ ನಡುವಿನ ನೀರು ಹಂಚಿಕೆ ಬಗ್ಗೆ ಏಕಪಕ್ಷೀಯ ಮಾತುಕತೆ ಸರಿಯಲ್ಲ: ಮೋದಿಗೆ ಮಮತಾ ಪತ್ರ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 24, 2024 | 6:28 PM

Share

ದೆಹಲಿ  ಜೂನ್ 24: ಪಶ್ಟಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದು, ಬಾಂಗ್ಲಾದೇಶದ (Bangladesh) ನಡುವಿನ ನೀರು ಹಂಚಿಕೆಯ ಮಾತುಕತೆಯನ್ನು ಆಕ್ಷೇಪಿಸಿದ್ದಾರೆ. ಈ ಮಾತುಕತೆಯಲ್ಲಿ ಭಾಗವಹಿಸಲು ಬಂಗಾಳವನ್ನು ಆಹ್ವಾನಿಸಲಾಗಿಲ್ಲ. “ಸಮಾಲೋಚನೆ ಮತ್ತು ರಾಜ್ಯ ಸರ್ಕಾರದ ಅಭಿಪ್ರಾಯವಿಲ್ಲದೆ ಇಂತಹ ಏಕಪಕ್ಷೀಯ ಚರ್ಚೆಗಳು ಮತ್ತು ನಿರ್ಧಾರ  ಸ್ವೀಕಾರಾರ್ಹ ಅಲ್ಲ  ಎಂದು ಮಮತಾ ಹೇಳಿದ್ದು, ಕೋಲ್ಕತ್ತಾ ಮತ್ತು ಢಾಕಾ ನಡುವಿನ ನಿಕಟ ಸಂಬಂಧವನ್ನು ಒತ್ತಿಹೇಳಿದರು.

ಇತ್ತೀಚೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮೂರನೇ ಅಧಿಕಾರಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ದೆಹಲಿಗೆ ಭೇಟಿ ನೀಡಿದಾಗ ಗಂಗಾ ಮತ್ತು ತೀಸ್ತಾ ಜಲ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿತ್ತು.

“ಭಾರತ ಸರ್ಕಾರವು 2026 ರಲ್ಲಿ ಮುಕ್ತಾಯಗೊಳ್ಳುತ್ತಿರುವ ಭಾರತ-ಬಾಂಗ್ಲಾದೇಶ ಫರಕ್ಕಾ ಒಪ್ಪಂದವನ್ನು (1996) ನವೀಕರಿಸುವ ಪ್ರಕ್ರಿಯೆಯಲ್ಲಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ನಡುವಿನ ನೀರಿನ ಹಂಚಿಕೆಯನ್ನು ವಿವರಿಸುವ ಒಪ್ಪಂದವಾಗಿದೆ.

ಬಾಂಗ್ಲಾದೇಶ ಮತ್ತು ಭಾರತ, ನಿಮಗೆ ತಿಳಿದಿರುವಂತೆ, ಪಶ್ಚಿಮ ಬಂಗಾಳದ ಜನರಿಗೆ ದೊಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ” ಎಂದು ಮಮತಾ ಬ್ಯಾನರ್ಜಿ ಬರೆದಿದ್ದಾರೆ. ಬಂಗಾಳದ ಜನರು, ಅಂತಹ ಒಪ್ಪಂದಗಳಿಂದ  ಸಂಕಷ್ಟ ಅನುಭವಿಸುತ್ತಾರೆ ಎಂದು  ಮಮತಾ ಹೇಳಿದ್ದಾರೆ.

ಇದನ್ನೂ ಓದಿ: JP Nadda: ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಬಿಜೆಪಿಯ ಜೆಪಿ ನಡ್ಡಾ ನೇಮಕ

ಪಶ್ಚಿಮ ಬಂಗಾಳ ರಾಜ್ಯವು ಈ ಹಿಂದೆ ಹಲವಾರು ವಿಷಯಗಳಲ್ಲಿ ಬಾಂಗ್ಲಾದೇಶದೊಂದಿಗೆ ಸಹಕರಿಸಿದೆ ಎಂದ ಮಮತಾ ಭಾರತ-ಬಾಂಗ್ಲಾದೇಶ ಎನ್‌ಕ್ಲೇವ್‌ಗಳು, ಇಂಡೋ-ಬಾಂಗ್ಲಾದೇಶ ರೈಲು ಮಾರ್ಗ ಮತ್ತು ಬಸ್ ಸೇವೆಗಳ ವಿನಿಮಯವನ್ನು  ಉಲ್ಲೇಖಿಸಿದ್ದಾರೆ.

“ಆದಾಗ್ಯೂ, ನೀರು ಬಹಳ ಅಮೂಲ್ಯವಾಗಿದೆ ಮತ್ತು ಜನರ ಜೀವನಾಡಿಯಾಗಿದೆ. ಜನರ ಮೇಲೆ ತೀವ್ರ ಮತ್ತು ಪ್ರತಿಕೂಲ ಪರಿಣಾಮ ಬೀರುವ ಇಂತಹ ಸೂಕ್ಷ್ಮ ವಿಚಾರದಲ್ಲಿ ನಾವು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ