ಬಂಗಾಳ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಮಮತಾ ಸರ್ಕಾರಕ್ಕೆ ಒಡಿಶಾ ಸಿಎಂ ಒತ್ತಾಯ

ಪಶ್ಚಿಮ ಬಂಗಾಳದ ದುರ್ಗಾಪುರದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಒಡಿಶಾ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ. ಒಡಿಶಾ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗೆ ಶುಕ್ರವಾರ ರಾತ್ರಿ ಒಡಿಶಾದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.

ಬಂಗಾಳ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಮಮತಾ ಸರ್ಕಾರಕ್ಕೆ ಒಡಿಶಾ ಸಿಎಂ ಒತ್ತಾಯ
Mohan Charan Majhi

Updated on: Oct 11, 2025 | 9:19 PM

ಭುವನೇಶ್ವರ, ಅಕ್ಟೋಬರ್ 11: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Sexual Harassment) ನಡೆದಿದೆ. ಒಡಿಶಾದ ಜಲೇಶ್ವರ ಮೂಲದ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ. ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಒತ್ತಾಯಿಸಿದ್ದಾರೆ.

ಒಡಿಶಾದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನೆರೆಯ ರಾಜ್ಯದ ಸಿಎಂ ಮಮತಾ ಬ್ಯಾನರ್ಜಿಯ ಮಧ್ಯಪ್ರವೇಶ ಮಾಡಬೇಕು. ಇದು ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಬಂಗಾಳ ಸರ್ಕಾರಕ್ಕೆ ಅಗತ್ಯವಿರುವ ಎಲ್ಲ ಸಹಾಯ ಮಾಡಲು ಸಿದ್ಧವಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ


ಎಕ್ಸ್​ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಮಾಝಿ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಯಾ ವಿದ್ಯಾರ್ಥಿನಿಯ ಮೇಲೆ ನಡೆದ ದುರದೃಷ್ಟಕರ ಸಾಮೂಹಿಕ ಅತ್ಯಾಚಾರದ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನಿಂದ ಕೂಡಿದೆ. ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಈ ಸೂಕ್ಷ್ಮ ವಿಷಯದಲ್ಲಿ, ಕಾನೂನಿನ ಪ್ರಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಾನು ಬಲವಾಗಿ ಒತ್ತಾಯಿಸುತ್ತೇನೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us