AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಸಿಂಗ್ ಮರುಸೇರ್ಪಡೆ: ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡ ಬಂಗಾಳ ಇಮಾಮ್ ಅಸೋಸಿಯೇಷನ್

"ಅರ್ಜುನ್ ಸಿಂಗ್ ಮತ್ತು ಬಾಬುಲ್ ಸುಪ್ರಿಯೊ ಅವರಂತಹ ಕೋಮುವಾದಿಗಳನ್ನು ತೃಣಮೂಲ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುತ್ತಿದೆ. ಪಕ್ಷದ ಈ ನಡೆಯನ್ನು ನಾವು ಖಂಡಿಸುತ್ತೇವೆ". ಟಿಎಂಸಿಯ ಈ ನಡೆಯನ್ನು ರಾಜ್ಯದ ಜನರು ನೆನಪಿಸಿಕೊಳ್ಳುತ್ತಾರೆ...

ಅರ್ಜುನ್ ಸಿಂಗ್ ಮರುಸೇರ್ಪಡೆ: ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡ ಬಂಗಾಳ ಇಮಾಮ್ ಅಸೋಸಿಯೇಷನ್
ಅರ್ಜುನ್ ಸಿಂಗ್
TV9 Web
| Edited By: |

Updated on:May 23, 2022 | 8:52 PM

Share

ಅರ್ಜುನ್ ಸಿಂಗ್ ಅವರನ್ನು ಟಿಎಂಸಿಗೆ ಮರುಸೇರ್ಪಡೆ ಮಾಡಿರುವುದಕ್ಕೆ ಬಂಗಾಳ ಇಮಾಮ್ ಅಸೋಸಿಯೇಷನ್ ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡಿದೆ. ಭಾನುವಾರ ಟಿಎಂಸಿಗೆ (TMC) ಮರಳಿದ ಅರ್ಜುನ್ ಸಿಂಗ್ (Arjun Singh) ಅವರು 2019 ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಬ್ಯಾರಕ್‌ಪುರದ ಸಂಸದರಾಗಿ ಆಯ್ಕೆಯಾದರು. ಅವರು ಟಿಎಂಸಿ ತೊರೆದು 2019 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಂಗಾಳ ಇಮಾಮ್ ಅಸೋಸಿಯೇಶನ್‌ನ ಅಧ್ಯಕ್ಷ ಮೊಹಮ್ಮದ್ ಯಾಹ್ಯಾ ಅವರು ಸಿಂಗ್ , ಕೋಮು ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆಂದು ಆರೋಪಿಸಿದ್ದ್ದು ನಾಗರಿಕರ ತಿದ್ದುಪಡಿ ಕಾಯ್ದೆ (CAA) ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಹೇಳಿದರು. “ಅರ್ಜುನ್ ಸಿಂಗ್ ಅವರು ಬ್ಯಾರಕ್‌ಪುರದಲ್ಲಿ ಕೋಮು ಹಿಂಸಾಚಾರಕ್ಕೆ ಪ್ರೇರೇಪಿಸಿದ್ದಾರೆ. ಅವರು ಟಿಎಂಸಿ ಕಾರ್ಯಕರ್ತರನ್ನು ಹಿಂಸಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅರ್ಜುನ್ ಸಂಸತ್ತಿನಲ್ಲಿ ಸಿಎಎಗೆ ಮತ ಹಾಕಿದ್ದರು. ಅವರು ತಮ್ಮ ಮತವನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಾರೆಯೇ?”. ಸಿಂಗ್ ಅವರು ಬಂಗಾಳ ವಿರೋಧಿ ಮತ್ತು ಬಂಗಾಳಿ ವಿರೋಧಿ. ಅರ್ಜುನ್ ಸಿಂಗ್ ಆಜಾನ್ ನುಡಿಸುವುದನ್ನು ವಿರೋಧಿಸಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯನ್ನು ಹಿಂಪಡೆಯುತ್ತಾರೆಯೇ?” ಎಂದು ಯಾಹ್ಯಾ ಕೇಳಿದ್ದಾರೆ.

ಮೊಹಮ್ಮದ್ ಯಾಹ್ಯಾ ಅವರು ಬಾಬುಲ್ ಸುಪ್ರಿಯೊ ಅವರನ್ನು ಬ್ಯಾಲಿಗುಂಗೆ ಉಪಚುನಾವಣೆ ವಿಧಾನಸಭಾ ಚುನಾವಣೆಗೆ ಶಾಸಕರಾಗಿ ನಾಮನಿರ್ದೇಶನ ಮಾಡುವುದನ್ನು ವಿರೋಧಿಸಿದರು.

“ಅರ್ಜುನ್ ಸಿಂಗ್ ಮತ್ತು ಬಾಬುಲ್ ಸುಪ್ರಿಯೊ ಅವರಂತಹ ಕೋಮುವಾದಿಗಳನ್ನು ತೃಣಮೂಲ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುತ್ತಿದೆ. ಪಕ್ಷದ ಈ ನಡೆಯನ್ನು ನಾವು ಖಂಡಿಸುತ್ತೇವೆ”. ಟಿಎಂಸಿಯ ಈ ನಡೆಯನ್ನು ರಾಜ್ಯದ ಜನರು ನೆನಪಿಸಿಕೊಳ್ಳುತ್ತಾರೆ ಎಂದು ಯಾಹ್ಯಾ ಹೇಳಿದ್ದಾರೆ.

ಇದನ್ನೂ ಓದಿ
Image
Arjun Singh ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಬಿಜೆಪಿ ಸಂಸದ ಅರ್ಜುನ್ ಸಿಂಗ್
Image
ಅಸ್ಸಾಂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಿಪುನ್ ಬೋರಾ ಟಿಎಂಸಿಗೆ ಸೇರ್ಪಡೆ
Image
ಪಶ್ಚಿಮ ಬಂಗಾಳದಲ್ಲಿ ಅರ್ಜುನ್ ಸಿಂಗ್ ನಿವಾಸದ ಹೊರಗೆ ಮತ್ತೊಂದು ಬಾಂಬ್ ಸ್ಫೋಟ; ಟಿಎಂಸಿ ತನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದೆ ಎಂದ ಬಿಜೆಪಿ ಸಂಸದ

Published On - 7:43 pm, Mon, 23 May 22

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು