AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಸಿಂಗ್ ಮರುಸೇರ್ಪಡೆ: ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡ ಬಂಗಾಳ ಇಮಾಮ್ ಅಸೋಸಿಯೇಷನ್

"ಅರ್ಜುನ್ ಸಿಂಗ್ ಮತ್ತು ಬಾಬುಲ್ ಸುಪ್ರಿಯೊ ಅವರಂತಹ ಕೋಮುವಾದಿಗಳನ್ನು ತೃಣಮೂಲ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುತ್ತಿದೆ. ಪಕ್ಷದ ಈ ನಡೆಯನ್ನು ನಾವು ಖಂಡಿಸುತ್ತೇವೆ". ಟಿಎಂಸಿಯ ಈ ನಡೆಯನ್ನು ರಾಜ್ಯದ ಜನರು ನೆನಪಿಸಿಕೊಳ್ಳುತ್ತಾರೆ...

ಅರ್ಜುನ್ ಸಿಂಗ್ ಮರುಸೇರ್ಪಡೆ: ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡ ಬಂಗಾಳ ಇಮಾಮ್ ಅಸೋಸಿಯೇಷನ್
ಅರ್ಜುನ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 23, 2022 | 8:52 PM

ಅರ್ಜುನ್ ಸಿಂಗ್ ಅವರನ್ನು ಟಿಎಂಸಿಗೆ ಮರುಸೇರ್ಪಡೆ ಮಾಡಿರುವುದಕ್ಕೆ ಬಂಗಾಳ ಇಮಾಮ್ ಅಸೋಸಿಯೇಷನ್ ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡಿದೆ. ಭಾನುವಾರ ಟಿಎಂಸಿಗೆ (TMC) ಮರಳಿದ ಅರ್ಜುನ್ ಸಿಂಗ್ (Arjun Singh) ಅವರು 2019 ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಬ್ಯಾರಕ್‌ಪುರದ ಸಂಸದರಾಗಿ ಆಯ್ಕೆಯಾದರು. ಅವರು ಟಿಎಂಸಿ ತೊರೆದು 2019 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಂಗಾಳ ಇಮಾಮ್ ಅಸೋಸಿಯೇಶನ್‌ನ ಅಧ್ಯಕ್ಷ ಮೊಹಮ್ಮದ್ ಯಾಹ್ಯಾ ಅವರು ಸಿಂಗ್ , ಕೋಮು ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆಂದು ಆರೋಪಿಸಿದ್ದ್ದು ನಾಗರಿಕರ ತಿದ್ದುಪಡಿ ಕಾಯ್ದೆ (CAA) ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಹೇಳಿದರು. “ಅರ್ಜುನ್ ಸಿಂಗ್ ಅವರು ಬ್ಯಾರಕ್‌ಪುರದಲ್ಲಿ ಕೋಮು ಹಿಂಸಾಚಾರಕ್ಕೆ ಪ್ರೇರೇಪಿಸಿದ್ದಾರೆ. ಅವರು ಟಿಎಂಸಿ ಕಾರ್ಯಕರ್ತರನ್ನು ಹಿಂಸಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅರ್ಜುನ್ ಸಂಸತ್ತಿನಲ್ಲಿ ಸಿಎಎಗೆ ಮತ ಹಾಕಿದ್ದರು. ಅವರು ತಮ್ಮ ಮತವನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಾರೆಯೇ?”. ಸಿಂಗ್ ಅವರು ಬಂಗಾಳ ವಿರೋಧಿ ಮತ್ತು ಬಂಗಾಳಿ ವಿರೋಧಿ. ಅರ್ಜುನ್ ಸಿಂಗ್ ಆಜಾನ್ ನುಡಿಸುವುದನ್ನು ವಿರೋಧಿಸಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯನ್ನು ಹಿಂಪಡೆಯುತ್ತಾರೆಯೇ?” ಎಂದು ಯಾಹ್ಯಾ ಕೇಳಿದ್ದಾರೆ.

ಮೊಹಮ್ಮದ್ ಯಾಹ್ಯಾ ಅವರು ಬಾಬುಲ್ ಸುಪ್ರಿಯೊ ಅವರನ್ನು ಬ್ಯಾಲಿಗುಂಗೆ ಉಪಚುನಾವಣೆ ವಿಧಾನಸಭಾ ಚುನಾವಣೆಗೆ ಶಾಸಕರಾಗಿ ನಾಮನಿರ್ದೇಶನ ಮಾಡುವುದನ್ನು ವಿರೋಧಿಸಿದರು.

“ಅರ್ಜುನ್ ಸಿಂಗ್ ಮತ್ತು ಬಾಬುಲ್ ಸುಪ್ರಿಯೊ ಅವರಂತಹ ಕೋಮುವಾದಿಗಳನ್ನು ತೃಣಮೂಲ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುತ್ತಿದೆ. ಪಕ್ಷದ ಈ ನಡೆಯನ್ನು ನಾವು ಖಂಡಿಸುತ್ತೇವೆ”. ಟಿಎಂಸಿಯ ಈ ನಡೆಯನ್ನು ರಾಜ್ಯದ ಜನರು ನೆನಪಿಸಿಕೊಳ್ಳುತ್ತಾರೆ ಎಂದು ಯಾಹ್ಯಾ ಹೇಳಿದ್ದಾರೆ.

ಇದನ್ನೂ ಓದಿ
Image
Arjun Singh ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಬಿಜೆಪಿ ಸಂಸದ ಅರ್ಜುನ್ ಸಿಂಗ್
Image
ಅಸ್ಸಾಂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಿಪುನ್ ಬೋರಾ ಟಿಎಂಸಿಗೆ ಸೇರ್ಪಡೆ
Image
ಪಶ್ಚಿಮ ಬಂಗಾಳದಲ್ಲಿ ಅರ್ಜುನ್ ಸಿಂಗ್ ನಿವಾಸದ ಹೊರಗೆ ಮತ್ತೊಂದು ಬಾಂಬ್ ಸ್ಫೋಟ; ಟಿಎಂಸಿ ತನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದೆ ಎಂದ ಬಿಜೆಪಿ ಸಂಸದ

Published On - 7:43 pm, Mon, 23 May 22

ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ