AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West bengal election 2021 ದೀದಿ ಸರ್ಕಾರ ಶೀಘ್ರದಲ್ಲೇ ರಾಮ್​ ಕಾರ್ಡ್​ ನೋಡಲಿದೆ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿಯವರನ್ನು ಜೈ ಶ್ರೀರಾಮ್​ ಘೋಷಣೆಯೊಂದಿಗೇ ಬರಮಾಡಿಕೊಳ್ಳಲಾಯಿತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೋದಿಯವರ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ.

West bengal election 2021 ದೀದಿ ಸರ್ಕಾರ ಶೀಘ್ರದಲ್ಲೇ ರಾಮ್​ ಕಾರ್ಡ್​ ನೋಡಲಿದೆ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Lakshmi Hegde
| Edited By: |

Updated on: Feb 07, 2021 | 6:45 PM

Share

ಹಲ್ದಿಯಾ: ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲ್ದಿಯಾದಲ್ಲಿ ಭಾರತ್​ ಪೆಟ್ರೋಲಿಯಂ ಕಾರ್ಪೋರೇಶನ್​ ಲಿಮಿಟೆಡ್​ ನಿರ್ಮಿಸಿದ ಎಲ್​ಪಿಜಿ ಆಮದು ಟರ್ಮಿನಲ್​, ಪ್ರಧಾನ್​ ಮಂತ್ರಿ ಉರ್ಜಾ ಗಂಗಾ ಯೋಜನೆಯಡಿ ನಿರ್ಮಿಸಲಾದ ದೋಭಿಗುರ್ಗಾಪುರ ನ್ಯಾಚ್ಯುರಲ್ ಗ್ಯಾಸ್​ ಪೈಪ್​​ಲೈನ್​ ಉದ್ಘಾಟಸಿದರು.

ನಂತರ ಭಾಷಣ ಪ್ರಾರಂಭ ಮಾಡಿದ ಪ್ರಧಾನಿ ಮೋದಿ ಮೊದಲು ಬಂಗಾಳಿಯಲ್ಲೇ ಮಾತನಾಡಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು. ಬಂಗಾಳದಲ್ಲಿ ಯಾರಾದರೂ ತಮ್ಮ ಹಕ್ಕಿನ ಬಗ್ಗೆ ಮಾತನಾಡಿದರೆ ಸಾಕು ದೀದಿ ಹತಾಶರಾಗುತ್ತಾರೆ. ಅಷ್ಟೇ ಅಲ್ಲ, ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರೂ ಅವರು ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಮಮತಾ ಬ್ಯಾನರ್ಜಿ ಸರ್ಕಾರ ಮೊದಲ ಅವಧಿ ಪೂರೈಸಿದಾಗಲೇ ಸ್ಪಷ್ಟವಾಗಿ ಹೋಯಿತು, ಪಶ್ಚಿಮ ಬಂಗಾಳ ಪಡೆದಿದ್ದು ಪರಿವರ್ತನೆಯನ್ನಲ್ಲ, ಬದಲಿಗೆ ಎಡದ ಪುನರುಜ್ಜೀವನ ಎಂದು. ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರ, ಅಪರಾಧ, ಹಿಂಸೆಯೇ ತುಂಬಿದೆ. ಇಲ್ಲಿ ಪ್ರಜಾಪ್ರಭುತ್ವದ ಮೇಲೆ ಪದೇಪದೆ ದಾಳಿಯಾಗುತ್ತಿದೆ ಎಂದು ಹೇಳಿದರು.

ಟಿಎಂಸಿ ಪದೇಪದೆ ತಪ್ಪುಗಳನ್ನು ಮಾಡುತ್ತಲೇ ಬಂದಿದೆ. ಅಧಿಕಾರ ದುರ್ಬಳಕೆ, ಹಿಂಸೆ, ಉಳಿದವರ ನಂಬಿಕೆಗಳ ಮೇಲೆ ದಾಳಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ನಮ್ಮ ಹೋರಾಟ ಏನಿದ್ದರೂ ಟಿಎಂಸಿ ಪಕ್ಷದೊಂದಿಗೆ. ಹಾಗೇ, ಇವರ ಗುಪ್ತ ಮಿತ್ರರ ಬಗ್ಗೆ ಎಚ್ಚರಿಕೆಯಿಂದ ಇರುತ್ತೇವೆ. ಎಡಪಕ್ಷಗಳು, ಕಾಂಗ್ರೆಸ್​ ಮತ್ತು ಟಿಎಂಸಿ ಸೇರಿ ಮ್ಯಾಚ್​ ಫಿಕ್ಸಿಂಗ್ ಮಾಡಿಕೊಂಡಿವೆ. ದೆಹಲಿಯಲ್ಲಿ ಇವರು ಭೇಟಿಯಾಗಿ ಚರ್ಚೆ ಮಾಡುತ್ತಾರೆ. ಅದೇ ಕೇರಳದಲ್ಲಿ ಕಾಂಗ್ರೆಸ್ ಮತ್ತು ಎಡ ಪಕ್ಷಗಳು ಸೇರಿ ಇಡೀ ರಾಜ್ಯವನ್ನು ಲೂಟಿ ಹೊಡೆಯುವ ಒಪ್ಪಂದ ಮಾಡಿಕೊಂಡಿವೆ ಎಂದು ಮೋದಿ ವಾಗ್ದಾಳಿ ನಡೆಸಿದರು. ಪಶ್ಚಿಮ ಬಂಗಾಳದಲ್ಲಿ ಶೀಘ್ರದಲ್ಲೇ ಜನರು ಟಿಎಂಸಿಗೆ ರಾಮ್​ ಕಾರ್ಡ್ ತೋರಿಸಲಿದ್ದಾರೆ ಎಂದೂ ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಜೈ ಶ್ರೀರಾಮ್​ ಘೋಷಣೆಯೊಂದಿಗೇ ಬರಮಾಡಿಕೊಳ್ಳಲಾಯಿತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೋದಿಯವರ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ. ಕಳೆದ ಬಾರಿ ಜ.23ರಂದು ಸುಭಾಷ್​ ಚಂದ್ರ ಬೋಸ್ ಜನ್ಮದಿನದ ಪ್ರಯುಕ್ತ ಮೋದಿಯವರು ಕೋಲ್ಕತ್ತಕ್ಕೆ ತೆರಳಿದ್ದಾಗ ಮಮತಾ ಬ್ಯಾನರ್ಜಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ಅಂದು ದೀದಿ ಭಾಷಣ ಮಾಡುತ್ತಿದ್ದಂತೆ ಜೈ ಶ್ರೀರಾಮ್​ ಘೋಷಣೆ ಕೂಗಿದ್ದಕ್ಕೆ, ಸಿಟ್ಟಾಗಿ ತಮಗೆ ಅವಮಾನ ಆಯಿತು ಎಂದು ಮಾತು ಮೊಟಕುಗೊಳಿಸಿದ್ದರು.

Uttarakhand Glacier Burst: ಇಡೀ ದೇಶ ಉತ್ತರಾಖಂಡ್ ರಾಜ್ಯದ ಜನರ ಜೊತೆಗಿದೆ: ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ