AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

ಪಶ್ಚಿಮ ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಕಳೆದ ವರ್ಷ ಕೊಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಇದಾದ ನಂತರ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿತ್ತು. ಇದೀಗ ಮತ್ತೆ ಬಂಗಾಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ
Harassment
ಸುಷ್ಮಾ ಚಕ್ರೆ
|

Updated on: Oct 11, 2025 | 8:49 PM

Share

ಕೊಲ್ಕತ್ತಾ, ಅಕ್ಟೋಬರ್ 11: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ (CM Mamata Banerjee) ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಪಶ್ಚಿಮ ಬಂಗಾಳ ರಾಜ್ಯ ಅತ್ಯಾಚಾರಿಗಳಿಗೆ ಸುರಕ್ಷಿತ ಸ್ವರ್ಗವಾಗಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಬಂಗಾಳ ಸರ್ಕಾರವು ಮಹಿಳೆಯರ ಸುರಕ್ಷತೆಯನ್ನು ನಿರ್ವಹಿಸುತ್ತಿರುವ ರೀತಿಗೆ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಸದ್ಯಕ್ಕೆ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಂಗಾಳ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಬಂಗಾಳ ರಾಜ್ಯದ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಕೂಡ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ಮೇಲೆ ತೀವ್ರ ದಾಳಿ ನಡೆಸಿತು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪದೇ ಪದೇ ಹಾಳಾಗುತ್ತಿದೆ ಎಂದು ಆರೋಪಿಸಿತು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

“ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪುನರಾವರ್ತಿತ ವೈಫಲ್ಯವು ಗೊಂದಲವನ್ನು ಉಂಟುಮಾಡಿದೆ. ಮಮತಾ ಬ್ಯಾನರ್ಜಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಬಿಜೆಪಿ ಒತ್ತಾಯಿಸಿದೆ.

“ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತವಲ್ಲ. ಟಿಎಂಸಿ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವವರೆಗೆ ರಾಜ್ಯಾದ್ಯಂತ ಮಹಿಳೆಯರು ಭಯದಲ್ಲಿ ಬದುಕುತ್ತಲೇ ಇರುತ್ತಾರೆ. ಮಮತಾ ಬ್ಯಾನರ್ಜಿ 2026ರಲ್ಲಿ ಅಧಿಕಾರದಿಂದ ದೂರ ಇರಬೇಕು” ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಖಾಸಗಿ ಕಾಲೇಜಿನ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ದುರ್ಗಾಪುರದ ಆಸ್ಪತ್ರೆ ಆವರಣದೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗಿದೆ. ಈ ಪ್ರಕರಣವು 2024ರ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಘಟನೆಗೆ ಹೋಲುತ್ತದೆ.

ಇದನ್ನೂ ಓದಿ: ಮಧ್ಯಪ್ರದೇಶದ ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಯುವಕನಿಂದ ಅತ್ಯಾಚಾರ!

ಇದೀಗ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಒಡಿಶಾದ ಜಲೇಶ್ವರ ಮೂಲದವರಾಗಿದ್ದು, ರಾಜ್ಯದ ಅತಿದೊಡ್ಡ ಕೈಗಾರಿಕಾ ಕೇಂದ್ರವಾದ ದುರ್ಗಾಪುರದ ಶೋಭಾಪುರ ಬಳಿಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಓದುತ್ತಿದ್ದಾರೆ. ಇದು ಕೊಲ್ಕತ್ತಾದಿಂದ ಸುಮಾರು 170 ಕಿಲೋಮೀಟರ್ ದೂರದಲ್ಲಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಆ ವಿದ್ಯಾರ್ಥಿನಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸ್ನೇಹಿತನೊಂದಿಗೆ ಕ್ಯಾಂಪಸ್‌ನಿಂದ ಹೊರಬಂದಿದ್ದಳು. ಕ್ಯಾಂಪಸ್ ಗೇಟ್ ಬಳಿ, ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಆಸ್ಪತ್ರೆಯ ಹಿಂದಿನ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!