AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಅಕ್ರಮ ನೇಮಕಾತಿ: ಸತತ ಮೂರನೇ ದಿನ ಸಿಬಿಐ ಅಧಿಕಾರಗಳ ಮುಂದೆ ಹಾಜರಾದರು ಬಂಗಾಳ ಸಚಿವ ಪರೇಶ್ ಅಧಿಕಾರಿ

ಮೇಕ್ಲಿಗಂಜ್ ಕ್ಷೇತ್ರದ ಶಾಸಕರಾಗಿರುವ ಅಧಿಕಾರಿ ಅವರನ್ನು ಗುರುವಾರದಂದು 9 ಗಂಟೆಗಳಿಗಿಂತ ಹೆಚ್ಚು ಮತ್ತು ಶುಕ್ರವಾರದಂದು ಸುಮಾರು 4 ಗಂಟೆಗಳ ಕಾಲ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದರು.

ಮಗಳ ಅಕ್ರಮ ನೇಮಕಾತಿ: ಸತತ ಮೂರನೇ ದಿನ ಸಿಬಿಐ ಅಧಿಕಾರಗಳ ಮುಂದೆ ಹಾಜರಾದರು ಬಂಗಾಳ ಸಚಿವ ಪರೇಶ್ ಅಧಿಕಾರಿ
ಅಂಕಿತಾ ಅಧಿಕಾರಿ ಮತ್ತು ಪರೇಶ್ ಅಧಿಕಾರಿ
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: May 21, 2022 | 6:25 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜೀ(Mamata Banerjee) ಅವರ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಪರೇಶ್ ಅಧಿಕಾರಿ (Paresh Adhikari) ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) (CBI) ಶನಿವಾರದಂದು ಸತತ ಮೂರನೇ ದಿನ ವಿಚಾರಣೆ ನಡೆಸಿದರು. ಅಧಿಕಾರಿ ಅವರು ತಮ್ಮ ಮಗಳಿಗೆ ಕಾನೂನುಬಾಹಿರವಾಗಿ ಒಬ್ಬ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ (primary school teacher) ನೇಮಕಾತಿ ಮಾಡಿಸಿರುವ ಆರೋಪ ಎದುರಿಸುತ್ತಿದ್ದಾರೆ. ಕೊಲ್ಕತ್ತಾದ ಹೈಕೋರ್ಟ್ ಶುಕ್ರವಾರದಂದು ಸಚಿವರ ಪುತ್ರಿ ಅಂಕಿತಾ ಅಧಿಕಾರಿ ಅವರನ್ನು ಸರ್ಕಾರದ ಅನುದಾನಿತ ಶಾಲೆಯೊಂದರ ಶಿಕ್ಷಕಿಯು ಹುದ್ದೆಯಿಂದ ವಜಾಗೊಳಿಸಿದೆ ಮತ್ತು ಅವರು ಕೆಲಸ ಮಾಡಿದ 41-ತಿಂಗಳ ಅವಧಿಯಲ್ಲಿ ಪಡೆದ ಸಂಬಳವನ್ನು ಹಿಂತಿರುಗಿಸುವಂತೆ ಆದೇಶವನ್ನೂ ನೀಡಿದೆ.

ಮಮತಾ ಅವರ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿರುವ ಪರೇಶ್ ಅಧಿಕಾರಿ ಅವರು ಕೊಲ್ಕತ್ತಾದ ಸಿಬಿಐ ಕಚೇರಿಯನ್ನು ಶನಿವಾರ ಬೆಳಗ್ಗೆ 10:35 ಕ್ಕೆ ತಲುಪಿದರು. ಅವರ ಆಪ್ತ ಮೂಲಗಳಿಂದ ಪ್ರಾಪ್ತವಾಗಿರುವ ಮಾಹಿತಿ ಪ್ರಕಾರ ಅಂಕಿತಾ ಅವರ ನೇಮಕಾತಿಗೆ ಸಂಬಂಧಿಸಿದ ಹಲವಾರು ಪ್ರಮುಖ ದಾಖಲೆಗಳ ಫೈಲ್ ಒಂದನ್ನು ಸಚಿವರು ಕಚೇರಿಗೆ ತೆಗೆದುಕೊಂಡು ಹೋದರು.

ಶನಿವಾರ ವಿಚಾರಣೆ ಅರಂಭವಾಗುವ ಮೊದಲು ಸಿಬಿಐ ಆಧಿಕಾರಿಯೊಬ್ಬರು ಮಾಧ್ಯಮಗಳಿಗೆ ಒದಗಿಸಿದ ಮಾಹಿತಿಯ ಪ್ರಕಾರ ತಮ್ಮ ಮಗಳು ಅಂಕಿತಾಳ ನೇಮಕಾತಿಯ ಸಲುವಾಗಿ ಪರೇಶ್ ಆಧಿಕಾರಿ ತಮ್ಮ ಮೊಬೈಲ್ ಫೋನಿಂದ ಮಾಡಿದ ಹಲವಾರು ಫೋನ್ ಕರೆಗಳ ಬಗ್ಗೆ ಪ್ರಶ್ನಿಸಲಾಗಲಿದೆ.

ಸಚಿವರು ಮಾಡಿದ ಕರೆಗಳು ಅವರ ಮಗಳು ಅಂಕಿತಾ ಸರ್ಕಾರದ ಅನುದಾನಿತ ಶಾಲೆಯೊಂದರಲ್ಲಿ ಸಹಾಯಕ ಶಿಕ್ಷಕಿಯಾಗಿ ನೇಮಕಾತಿ ಹೊಂದಿದ ಅಂಶದ ಜೊತೆ ಸಂಬಂಧ ಹೊಂದಿರುವ ಸಾಧ್ಯತೆ ಇದೆ. ಶುಕ್ರವಾರದ ಹಾಗೆ ಶನಿವಾರ ನಡೆದ ವಿಚಾರಣೆಯನ್ನು ವಿಡಿಯೋಗ್ರಾಫ್ ಮಾಡಲಾಗುತ್ತದೆ ಎಂದು ಸಿಬಿಐ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದರು.

ಮೇಕ್ಲಿಗಂಜ್ ಕ್ಷೇತ್ರದ ಶಾಸಕರಾಗಿರುವ ಅಧಿಕಾರಿ ಅವರನ್ನು ಗುರುವಾರದಂದು 9 ಗಂಟೆಗಳಿಗಿಂತ ಹೆಚ್ಚು ಮತ್ತು ಶುಕ್ರವಾರದಂದು ಸುಮಾರು 4 ಗಂಟೆಗಳ ಕಾಲ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದರು.

ಸಿಬಿಐ ಆಂತರಿಕ ಮೂಲಗಳಿಂದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಸುದ್ದಿ ಸಂಸ್ಥೆಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅದರ ಅಧಿಕಾರಿಗಳು ಮುಂದಿನ ವಾರ ಅಂಕಿತಾ ಅಧಿಕಾರಿಯನ್ನು ವಿಚಾರಣೆಗೆ ಕರೆಸಲಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ