AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ?

Bengali singer Lagnajita Chakraborty allegedly abused for singing Hindu religious song: ಭಕ್ತಿಯ ಹಾಡೊಂದನ್ನು ಹಾಡಿದ್ದಕ್ಕೆ ಖ್ಯಾತ ಬಂಗಾಳಿ ಗಾಯಕಿಯನ್ನು ನಿಂದಿಸಿ, ಹಲ್ಲೆಗೆ ಯತ್ನಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಜಾಗೋ ಮಾ ಹಾಡಿದ್ದು ಸಾಕು, ಯಾವುದಾದರೂ ಸೆಕ್ಯೂಲರ್ ಹಾಡು ಹಾಡು ಎಂದು ಜಬರ್ದಸ್ತ್ ಮಾಡಿದ್ದಾನೆ. ಗಾಯಕಿಯನ್ನು ನಿಂದಿಸಿ ಹಲ್ಲೆಗೂ ಯತ್ನಿಸಿದ್ದಾರೆ. ಹಲ್ಲೆಗೆ ಯತ್ನಿಸಿದ ಆರೋಪ ಮೆಹಬೂಬ್ ಮಲ್ಲಿಕ್ ಎಂಬಾತನ ಮೇಲಿದೆ. ಗಾಯಕಿ ಹೆಸರು ಲಗ್ನಜಿತಾ ಚಕ್ರವರ್ತಿ.

ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ?
ಲಗ್ನಜಿತಾ ಚಕ್ರವರ್ತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 21, 2025 | 5:43 PM

Share

ಕೋಲ್ಕತಾ, ಡಿಸೆಂಬರ್ 21: ಬಂಗಾಳಿ ಸಿನಿಮಾವೊಂದರ ಭಕ್ತಿ ಗೀತೆಯನ್ನು ಹಾಡಿದ್ದಕ್ಕೆ ಗಾಯಕಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಪೂರ್ಬ ಮೇದಿನಿಪುರ್​ನ ಭಾಗಬನ್​ಪುರ್ ಎಂಬಲ್ಲಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಖ್ಯಾತ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರಬರ್ತಿ (Lagnajita Chakraborty) ಎಂಬಾಕೆಯನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪ ಹೊತ್ತು ಬಂಧಿತರಾಗಿರುವ ವ್ಯಕ್ತಿಯು ಆ ಶಾಲೆಯ ಒಬ್ಬ ಸಹ-ಮಾಲೀಕ ಎನ್ನಲಾಗಿದೆ.

ಭಾಗಬನ್​ಪುರ್​ನಲ್ಲಿರುವ ಸೌತ್ ಪಾಯಿಂಟ್ ಪಬ್ಲಿಕ್ ಸ್ಕೂಲ್​ನಲ್ಲಿ ಶನಿವಾರ ಸಂಜೆ 7ಕ್ಕೆ ಲಗ್ನಿಜಿತಾ ಚಕ್ರಬರ್ತಿ ಅವರ ಗಾಯನ ಕಾರ್ಯಕ್ರಮ ಶುರುವಾಗಿದೆ. ಮೊದಲ 45 ನಿಮಿಷ ಅವರು ವಿವಿಧ ಹಾಡುಗಳನ್ನು ಹಾಡಿದ್ದಾರೆ. ನಂತರ, ಸನ್ಮಾನ ಕಾರ್ಯಕ್ರಮವೂ ಸರಾಗವಾಗಿ ನಡೆದಿದೆ. ಅವರ ಏಳನೇ ಹಾಡು ದೇಬಿ ಚೌಧುರಾಣಿ ಎನ್ನುವ ಬಂಗಾಳಿ ಸಿನಿಮಾದ ‘ಜಾಗೋ ಮಾ’ ಆಗಿತ್ತು.

ಇದನ್ನೂ ಓದಿ: ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ

ಹಿಂದೂ ದೇವತೆಯನ್ನು ಸ್ತುತಿಸುವ ಈ ಹಾಡನ್ನು ಹಾಡಿದ ಬಳಿಕ ಲಗ್ನಜಿತಾ ಅವರು ಸಭಿಕರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ, ವೇದಿಕೆಗೆ ಏರಿ ಹೋದ ಮೆಹಬೂಬ್ ಮಲ್ಲಿಕ್ ಎನ್ನುವ ವ್ಯಕ್ತಿ, ಲಗ್ನಜಿತಾ ಅವರನ್ನು ನಿಂದಿಸಿ ಹೊಡೆಯಲು ಯತ್ನಿಸಿದ್ದಾನೆ. ‘ಜಾಗೋ ಮಾ ಹಾಡಿದ್ದು ಸಾಕು. ಈಗ ಏನಾದರೂ ಸೆಕ್ಯೂಲರ್​ನಂಥದ್ದು ಹಾಡು’ ಎಂದು ಮಲ್ಲಿಕ್ ಜಬರ್ದಸ್ ಮಾಡಿದ್ದು ಮೈಕ್​ನಲ್ಲಿ ಎಲ್ಲರಿಗೂ ಕೇಳಿಸಿದೆ. ಈತ ವೇದಿಕೆ ಮೇಲೆ ಏರಿ ಹೋಗಿ ಲಗ್ನಜಿತಾ ಮೇಲೆ ಹಲ್ಲೆಗೆ ಮುಂದಾಗುತ್ತಿರುವಂತೆಯೇ ಕೆಲವರು ಓಡಿ ಬಂದು ತಡೆದಿದ್ದಾರೆ.

ಈ ಘಟನೆ ಬಳಿಕ ಲಗ್ನಜಿತಾ ಅವರು ಕಾರ್ಯಕ್ರಮವನ್ನು ಅಲ್ಲಿಗೇ ಇಳಿಸಿ ಹೊರಟು ಹೋಗಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದಾರೆ. ಇದಾದ ಬಳಿಕ ಪೊಲೀಸರು ಮೆಹಬೂಬಾ ಮಲ್ಲಿಕ್​ರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ

ಕಳೆದ ವರ್ಷದ (2024) ದುರ್ಗಾ ಪೂಜೆಯಂದು ಬಿಡುಗಡೆಯಾದ ದೇಬಿ ಚೌಧುರಾಣಿ ಸಿನಿಮಾದ ಹಿಟ್ ಹಾಡು ‘ಜಾಗೋ ಮಾ’. ಇದನ್ನು ಸಿನಿಮಾಗೆ ಹಾಡಿದವರು ಇದೇ ಗಾಯಕಿ ಲಗ್ನಜಿತಾ ಚಕ್ರಬರ್ತಿ. ಈಕೆಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿರುವ ಮೆಹಬೂಬ್ ಮಲ್ಲಿಕ್ ಅವರು ಕಾರ್ಯಕ್ರಮ ನಡೆದ ಶಾಲೆಯ ಸಹ-ಮಾಲೀಕರಲ್ಲಿ ಒಬ್ಬರಾಗಿದ್ದಾರೆ. ಆ ಶಾಲೆಯ ಆಡಳಿತ ಮಂಡಳಿಯ ಸದಸ್ಯರೂ ಆಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ