ಬೆಂಗಳೂರು ಬ್ಲಾಸ್ಟ್: ಆರೋಪಿಗಳನ್ನು ಹಿಡಿಯಲು ನೆರವಾಗಿದ್ದು ನಮ್ಮ ಪೊಲೀಸ್: ಬಿಜೆಪಿ ವಿರುದ್ದ ಸಿಡಿಗುಟ್ಟಿದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

West Bengal CM and Police Retorts Against BJP's Terror Jibe: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಒಬ್ಬ ಮಾಸ್ಟರ್ ಮೈಂಡ್ ಸೇರಿದಂತೆ ಇಬ್ಬರು ಶಂಕಿತ ಉಗ್ರರನ್ನು ಕೋಲ್ಕತಾದಲ್ಲಿ ಬಂಧಿಸಲಾಗಿದೆ. ಈ ವಿಚಾರದ ಬಗ್ಗೆ ಅಮಿತ್ ಮಾಳವೀಯ ಪ್ರತಿಕ್ರಿಯಿಸಿ, ಪಶ್ಚಿಮ ಬಂಗಾಳ ಉಗ್ರರ ಅಡಗುದಾಣವಾಗಿದೆ ಎಂದು ಆರೋಪ ಮಾಡಿದ್ದರು. ಈ ಹೇಳಿಕೆಗೆ ಪಶ್ಚಿಮ ಬಂಗಾಳ ಮತ್ತು ಆ ರಾಜ್ಯದ ಪೊಲೀಸ್ ಆಕ್ಷೇಪ ವ್ಯಕ್ತಪಡಿಸಿದೆ. ಬಂಗಾಳಕ್ಕೆ ಶಂಕಿತರು ಬಂದ ಎರಡೇ ಗಂಟೆಯಲ್ಲಿ ಅವರ ಬಂಧನವಾಗಿದೆ. ರಾಜ್ಯ ಪೊಲೀಸ್ ಮತ್ತು ಎನ್​ಐಎ ಜಂಟಿ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ. ಬಂಗಾಳ ಉಗ್ರರಿಗೆ ಹೇಗೆ ಸೇಫ್ ಹೇವನ್ ಆಗಲು ಸಾಧ್ಯ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಬೆಂಗಳೂರು ಬ್ಲಾಸ್ಟ್: ಆರೋಪಿಗಳನ್ನು ಹಿಡಿಯಲು ನೆರವಾಗಿದ್ದು ನಮ್ಮ ಪೊಲೀಸ್: ಬಿಜೆಪಿ ವಿರುದ್ದ ಸಿಡಿಗುಟ್ಟಿದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
|

Updated on: Apr 12, 2024 | 6:13 PM

ಕೋಲ್ಕತಾ, ಏಪ್ರಿಲ್ 12: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಳೆದ ತಿಂಗಳು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ (Rameshwaram Cafe Bomb blast case) ಎನ್​ಐಎ ತಂಡ ಕೋಲ್ಕತಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಈ ವಿಚಾರ ಈಗ ಬಿಜೆಪಿ ಮತ್ತು ಟಿಎಂಸಿ ಮಧ್ಯೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳ ಉಗ್ರಗಾಮಿಗಳ ಅಡಗುದಾಣವಾಗಿದೆ (terror safe haven) ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malaviya) ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ. ಈ ಹೇಳಿಕೆಗೆ ಪಶ್ಚಿಮ ಬಂಗಾಳ ಪೊಲೀಸ್ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಬ್ಬರು ಶಂಕಿತ ಉಗ್ರರಾದ ಮುಸ್ಸಾವಿರ್ ಹುಸೇನ್ ಶಾಝಿಬ್ ಹಾಗೂ ಅವರ ಸಹಚರ ಅಬ್ದುಲ್ ಮದೀನ್ ಅಹ್ಮದ್ ತಾಹಾ ಅವರನ್ನು ಕೋಲ್ಕತಾದಲ್ಲಿ ಬಂಧಿಸಲು ಎನ್​ಐಎಗೆ ಕೋಲ್ಕತಾ ಪೊಲೀಸ್ ನೆರವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಕೂಚ್ ಬಿಹಾರ್​ನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸುತ್ತಿದ್ದ ವೇಳೆ ಸಿಎಂ ಮಮತಾ ಬ್ಯಾನರ್ಜಿ ಇಬ್ಬರು ಶಂಕಿತ ಉಗ್ರರ ಬಂಧನದ ಘಟನೆಯನ್ನು ಉಲ್ಲೇಖಿಸಿದ್ದಾರೆ. ‘ಈ ಇಬ್ಬರು ವ್ಯಕ್ತಿಗಳು ಬಂಗಾಳಕ್ಕೆ ಬಂದ ಎರಡೇ ಗಂಟೆಯೊಳಗೆ ಬಂಧಿಸಲಾಗಿದೆ. ಇದು ತಮ್ಮ ರಾಜ್ಯದಲ್ಲಿರುವ ಕಾನೂನು ಜಾರಿ ಸಂಸ್ಥೆಗಳ ಕ್ರಿಯಾಶೀಲತೆಯನ್ನು ತೋರಿಸುತ್ತದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್, ಮಾಸ್ಟರ್​ ಮೈಂಡ್​​ ಪಶ್ಚಿಮ ಬಂಗಾಳದಲ್ಲಿ ಎನ್​ಐಎ ವಶಕ್ಕೆ

‘ಆರೋಪಿಗಳು ಇಲ್ಲಿಯವರಲ್ಲ, ಕರ್ನಾಟಕದವರು. ಬಂಗಾಳಕ್ಕೆ ಬಂದು ಎರಡು ಗಂಟೆಗಳಿಂದ ಅಡಿಗಿಕೊಂಡಿದ್ದರು. ಈ ಎರಡು ಗಂಟೆಯಲ್ಲಿ ನಮ್ಮ ಪೊಲೀಸರು ಇವರನ್ನು ಹಿಡಿದುಹಾಕಿದ್ದಾರೆ. ಈ ಮನುಷ್ಯರು ಬಂಗಾಳ ಸುರಕ್ಷಿತ ಅಲ್ಲ ಎನ್ನುತ್ತಿದ್ದಾರೆ,’ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕನಿಗೆ ತಿರುಗೇಟು ನೀಡಿದ ಬಂಗಾಳ ಪೊಲೀಸ್

ಬಿಜೆಪಿಯ ಅಮಿತ್ ಮಾಳವೀಯ ಹೇಳಿಕೆಗೆ ಪಶ್ಚಿಮ ಬಂಗಾಳ ಪೊಲೀಸ್ ಕೂಡ ತಿರುಗೇಟು ನೀಡಿದೆ. ಅವರ ಹೇಳಿಕೆಯನ್ನು ಸುಳ್ಳಿನ ಪರಮಾವಧಿ ಎಂದು ಬಣ್ಣಿಸಿದೆ.

‘ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಪೂರ್ವ ಮೇದಿನಿಪುರ್​ನಲ್ಲಿ ಕೇಂದ್ರ ಗುಪ್ತಚರ ಸಂಸ್ಥೆಗಳು ಹಾಗೂ ಪಶ್ಚಿಮ ಬಂಗಾಳ ಪೊಲೀಸರಿಂದ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Jallianwala Bagh Massacre : ಇದು ದೇಶ ಕಂಡ ಅತ್ಯಂತ ದುರಂತ ಘಟನೆ, ಇದನ್ನು ಭಾರತ ಎಂದಿಗೂ ಮರೆಯದು

‘ಕೇಂದ್ರೀಯ ಏಜೆನ್ಸಿಗಳು ಪಶ್ಚಿಮ ಬಂಗಾಳದ ಪಾತ್ರವನ್ನು ಗುರುತಿಸಿವೆ. ಪಶ್ಚಿಮ ಬಂಗಾಳ ಯಾವತ್ತೂ ಕೂಡ ಉಗ್ರರಿಗೆ ಅಡಗುದಾಣವಾಗಿರಲಿಲ್ಲ. ರಾಜ್ಯದ ಜನರ ಸುರಕ್ಷತೆಗೆ ಪೊಲೀಸರು ಸದಾ ಕಟಿಬದ್ಧರಾಗಿರುತ್ತಾರೆ,’ ಎಂದು ಬಂಗಾಳ ಪೊಲೀಸ್​ನ ಎಕ್ಸ್ ಖಾತೆಯಿಂದ ಪೋಸ್ಟ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ