AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ; ಟೇಕಾಫ್​ಗೂ ಮುನ್ನವೇ ಬಂದಿತ್ತೇ ವೈಫಲ್ಯದ ಸಂದೇಶ?

ಇಂಡಿಗೋ ವಿಮಾನದ ಎರಡನೇ ಎಂಜಿನ್​ ವೈಫಲ್ಯದ ಸಂದೇಶ ನೀಡಿತ್ತು ಎಂದಿವೆ ಡಿಜಿಸಿಎ ಮೂಲಗಳು.

ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ; ಟೇಕಾಫ್​ಗೂ ಮುನ್ನವೇ ಬಂದಿತ್ತೇ ವೈಫಲ್ಯದ ಸಂದೇಶ?
ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಚಿತ್ರImage Credit source: PTI
TV9 Web
| Edited By: |

Updated on: Oct 29, 2022 | 10:09 AM

Share

ನವದೆಹಲಿ: ಬೆಂಗಳೂರಿಗೆ ಹೊರಟಿದ್ದ ಇಂಡಿಗೋ (IndiGo) ವಿಮಾನದ ಎಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಗೆ ಸಂಬಂಧಿಸಿ ವಿಸ್ತೃತ ತನಿಖೆ ನಡೆಸಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ (DGCA) ಶನಿವಾರ ಬೆಳಿಗ್ಗೆ ತಿಳಿಸಿದೆ. ದೆಹಲಿಯಿಂದ ಬೆಳಗೂರಿಗೆ ಹೊರಟಿದ್ದ 6E-2131 ನಂಬರಿನ ಇಂಡಿಗೋ ವಿಮಾನ ಟೇಕಾಫ್‌ ಆಗುತ್ತಿದ್ದಂತೆ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಪೈಲಟ್ ವಿಮಾನವನ್ನು ಲ್ಯಾಂಡ್ ಮಾಡಿದ್ದರು. ವಿಮಾನದಲ್ಲಿದ್ದ 184 ಮಂದಿಗೆ ಯಾವುದೇ ಅಪಾಯವಾಗಿಲ್ಲ.

‘ವಿಸ್ತೃತ ತನಿಖೆ ನಡೆಸುವುದು ನಮ್ಮ ಆದ್ಯತೆಯಾಗಿದೆ. ಎಂಜಿನ್​ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದನ್ನು ಪತ್ತೆ ಮಾಡಬೇಕಿದೆ. ಅದೃಷ್ಟವಶಾತ್, ಬೆಂಕಿಯನ್ನು ನಂದಿಸಲಾಗಿದ್ದು, ವಿಮಾನ ಸುರಕ್ಷಿತವಾಗಿದೆ’ ಎಂದು ಡಿಜಿಸಿಎ ಮುಖ್ಯಸ್ಥ ಅರುಣ್ ಕುಮಾರ್ ‘ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು- ದೆಹಲಿ ವಿಮಾನದಲ್ಲಿ ಬೆಂಕಿಯ ವಿಡಿಯೋ ವೈರಲ್; ವರದಿ ಕೇಳಿದ ವಿಮಾನಯಾನ ಸಚಿವಾಲಯ

IAEV2500 ಎಂಜಿನ್​ಗೆ ಬೆಂಕಿ ತಗುಲಿತ್ತು. ಈ ಎಂಜಿನ್​ ಅನ್ನು ‘ಇಂಟರ್​ನ್ಯಾಷನಲ್ ಏರೋ ಎಂಜಿನ್ಸ್ ಎಜಿ’ ನಿರ್ಮಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಈ ಎಂಜಿನ್​ನಲ್ಲಿ ಈ ಹಿಂದೆ ಎಂದಾದರೂ ಇಂಥ ಘಟನೆ ಸಂಭವಿಸಿತ್ತೇ ಎಂಬುದನ್ನು ಡಿಜಿಸಿಎ ಅಧ್ಯಯನ ನಡೆಸಲಿದೆ. ಜತೆಗೆ, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನೂ ಶೋಧಿಸಲಿದೆ. ವಿಸ್ತೃತ ತನಿಖೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಡಿಜಿಸಿಎ ತಿಳಿಸಿದೆ.

6E-2131 ನಂಬರಿನ ಇಂಡಿಗೋ ವಿಮಾನದ ಎರಡನೇ ಎಂಜಿನ್​ ವೈಫಲ್ಯದ ಸಂದೇಶ ನೀಡಿತ್ತು. ಟೇಕಾಫ್ ಸಂದರ್ಭದಲ್ಲೇ ಈ ಸಂದೇಶ ಬಂದಿತ್ತು. ಭಾರಿ ಸದ್ದಿನೊಂದಿಗೆ ಬೆಂಕಿ ನಂದಿಸುವ ಸಾಧನ ತೆರೆದುಕೊಂಡಿತ್ತು ಎಂದು ಡಿಜಿಸಿಎ ಮೂಲಗಳು ಹೇಳಿವೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆ ಬಗ್ಗೆ ಶೀಘ್ರ ವರದಿ ನೀಡುವಂತೆ ವಿಮಾನಯಾನ ಸಚಿವಾಲಯ ಡಿಜಿಸಿಎಗೆ ಸೂಚಿಸಿದೆ.

ಈ ಮಧ್ಯೆ, ಘಟನೆಗೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ: ದಿಲ್ಲಿ ನಿಲ್ದಾಣದಲ್ಲಿ ಹೈಅಲರ್ಟ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ