AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಹೊರಟಿದ್ದ ಟ್ರಕ್​ ಮಧ್ಯಪ್ರದೇಶದಲ್ಲಿ ಲೂಟಿ; 7 ಕೋಟಿ ರೂ.ಮೌಲ್ಯದ ಮೊಬೈಲ್​ಗಳು ದುಷ್ಕರ್ಮಿಗಳ ಪಾಲು

ಒಪ್ಪೋ ಕಂಪನಿ ಮ್ಯಾನೇಜರ್​ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ಪೊಲೀಸ್​ ಠಾಣೆಯಲ್ಲಿ ದೂರು ನೀಡಲು ಪ್ರಯತ್ನಿಸಿದರು. ಆದರೆ ಘಟನೆ ನಡೆದದ್ದು ಮಥುರಾ ಗಡಿಯ ಬಳಿ ಆಗಿದ್ದರಿಂದ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಿಂದ ಹೊರಟಿದ್ದ ಟ್ರಕ್​ ಮಧ್ಯಪ್ರದೇಶದಲ್ಲಿ ಲೂಟಿ; 7 ಕೋಟಿ ರೂ.ಮೌಲ್ಯದ ಮೊಬೈಲ್​ಗಳು ದುಷ್ಕರ್ಮಿಗಳ ಪಾಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 17, 2021 | 11:50 AM

Share

ಮಥುರಾ: ಸುಮಾರು 7 ಕೋಟಿ ರೂಪಾಯಿ ಮೌಲ್ಯದ 9 ಸಾವಿರ ಮೊಬೈಲ್​ ಫೋನ್​​ಗಳನ್ನು ಒಯ್ಯುತ್ತಿದ್ದ ಬೆಂಗಳೂರು ಮೂಲದ ಟ್ರಕ್​​​ನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಈ ಬೆಂಗಳೂರಿನ ಟ್ರಕ್​​​ನ್ನು ಮಧ್ಯಪ್ರದೇಶದ ಶಿಯೋಪುರ್​​ ಎಂಬಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸಿ, ಆತನನ್ನು ವಾಹನದಿಂದ ಎತ್ತಿ ಬಿಸಾಕಿದ್ದಾರೆ. ಬಳಿಕ ಲಾರಿಯನ್ನು ಲೂಟಿ ಮಾಡಿದ್ದಾರೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದರೂ ಉತ್ತರಪ್ರದೇಶದ ಮಥುರಾದಲ್ಲಿ ಪ್ರಕರಣ ದಾಖಲಾಗಿದೆ.  

ಇನ್ನು ಪ್ರಕರಣದ ಬಗ್ಗೆ ಮಥುರಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಟಂಡ್​ ಪ್ರಕಾಶ್​ ಸಿಂಗ್​ ವಿವರಿಸಿದ್ದಾರೆ. ಲಾರಿ ಲೂಟಿಯಾಗಿರುವ ಬಗ್ಗೆ ಒಪ್ಪೊ ಮೊಬೈಲ್​ (Oppo Mobile) ಕಂಪನಿಯ ಮ್ಯಾನೇಜರ್​ ಸಚಿನ್​ ಮಾನವ್​ ಎಂಬುವರು ದೂರು ನೀಡಿದ್ದಾರೆ. ಲಾರಿ ಚಾಲಕ ಮನೀಶ್ ಯಾದವ್​ ಉತ್ತರಪ್ರದೇಶದ ಫಾರೂಖಾಬಾದ್​ ಜಿಲ್ಲೆಯವನು. ಅಕ್ಟೋಬರ್​ 5ರಂದು ಮುಂಜಾನೆ ಬೆಂಗಳೂರಿನಿಂದ ಸುಮಾರು 9 ಸಾವಿರ ಮೊಬೈಲ್​​ ಫೋನ್​​ಗಳನ್ನು ಟ್ರಕ್​​ನಲ್ಲಿ ತುಂಬಿಕೊಂಡು ನೊಯ್ಡಾಕ್ಕೆ ಹೊರಟಿದ್ದ. ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿರುವ ಬೈಪಾಸ್​ ಬಳಿ ಈತನ ಲಾರಿಗೆ ಇಬ್ಬರು ಪ್ರಯಾಣಿಕರು ಹತ್ತಿದ್ದರು.  ಲಾರಿ ಝಾನ್ಸಿಯ ಬಬಿನಾ ಟೋಲ್​ ದಾಟುತ್ತಿದ್ದಂತೆ ಈ ಪ್ರಯಾಣಿಕರ ಸೋಗಿನಲ್ಲಿ ಲಾರಿ ಹತ್ತಿದ್ದ ಇಬ್ಬರು ಚಾಲಕನಿಗೆ ಥಳಿಸಲು ಶುರು ಮಾಡಿದರು. ನಂತರ ಆತನನ್ನು ಲಾರಿಯಿಂದ ಎತ್ತಿ ಬಿಸಾಕಿದ್ದಾರೆ. ಟ್ರಕ್​​​ನೊಂದಿಗೆ ಪರಾರಿಯಾಗಿದ್ದಾರೆ. ಅಂದಹಾಗೆ  ಈ ಟ್ರಕ್​​ ಶಿಯೋಪುರ್​​​ನ ಮನ್​​ಪುರ್​​ನಲ್ಲಿ ಸಿಕ್ಕಿದ್ದು, ಖಾಲಿಯಾಗಿತ್ತು. ಅದರಲ್ಲಿರುವ ಮೊಬೈಲ್​​​ಗಳು ಯಾವುದೂ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಒಪ್ಪೋ ಕಂಪನಿ ಮ್ಯಾನೇಜರ್​ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ಪೊಲೀಸ್​ ಠಾಣೆಯಲ್ಲಿ ದೂರು ನೀಡಲು ಪ್ರಯತ್ನಿಸಿದರು. ಆದರೆ ಘಟನೆ ನಡೆದದ್ದು ಮಥುರಾ ಗಡಿಯ ಬಳಿ ಆಗಿದ್ದರಿಂದ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಂತರ ಅವರು ಹೋಗಿ ಮಥುರಾ ಠಾಣೆಯಲ್ಲಿ ದೂರು ನೀಡಿದ್ದಾರೆ.  ಸದ್ಯ ತನಿಖೆ ನಡೆಸಲು ಪೊಲೀಸ್​ ತಂಡವನ್ನು ರಚಿಸಲಾಗಿದೆ. ಮಧ್ಯಪ್ರದೇಶ ಪೊಲೀಸರೂ ಕೂಡ ಕಾರ್ಯಾಚರಣೆಗೆ ಇಳಿದಿದ್ದಾರೆ. ಸಿಸಿಟಿವಿ ಫೂಟೇಜ್​​​ಗಳನ್ನು ಪರಿಶೀಲಿಸಲಾಗುತ್ತಿದ್ದು, ದುಷ್ಕರ್ಮಿಗಳ ಲೊಕೇಶನ್​ ಪತ್ತೆ ಕಾರ್ಯವೂ ನಡೆಯುತ್ತಿದೆ.

ಇದನ್ನೂ ಓದಿ: Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

ತುಮಕೂರಿನಲ್ಲಿ ಬಸ್-ಗೂಡ್ಸ್ ಮಧ್ಯೆ ಭೀಕರ ಅಪಘಾತ! ಸ್ಥಳದಲ್ಲೇ ನಾಲ್ವರ ಸಾವು

Published On - 11:47 am, Sun, 17 October 21

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ