AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಹೊರಟಿದ್ದ ಟ್ರಕ್​ ಮಧ್ಯಪ್ರದೇಶದಲ್ಲಿ ಲೂಟಿ; 7 ಕೋಟಿ ರೂ.ಮೌಲ್ಯದ ಮೊಬೈಲ್​ಗಳು ದುಷ್ಕರ್ಮಿಗಳ ಪಾಲು

ಒಪ್ಪೋ ಕಂಪನಿ ಮ್ಯಾನೇಜರ್​ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ಪೊಲೀಸ್​ ಠಾಣೆಯಲ್ಲಿ ದೂರು ನೀಡಲು ಪ್ರಯತ್ನಿಸಿದರು. ಆದರೆ ಘಟನೆ ನಡೆದದ್ದು ಮಥುರಾ ಗಡಿಯ ಬಳಿ ಆಗಿದ್ದರಿಂದ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಿಂದ ಹೊರಟಿದ್ದ ಟ್ರಕ್​ ಮಧ್ಯಪ್ರದೇಶದಲ್ಲಿ ಲೂಟಿ; 7 ಕೋಟಿ ರೂ.ಮೌಲ್ಯದ ಮೊಬೈಲ್​ಗಳು ದುಷ್ಕರ್ಮಿಗಳ ಪಾಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 17, 2021 | 11:50 AM

Share

ಮಥುರಾ: ಸುಮಾರು 7 ಕೋಟಿ ರೂಪಾಯಿ ಮೌಲ್ಯದ 9 ಸಾವಿರ ಮೊಬೈಲ್​ ಫೋನ್​​ಗಳನ್ನು ಒಯ್ಯುತ್ತಿದ್ದ ಬೆಂಗಳೂರು ಮೂಲದ ಟ್ರಕ್​​​ನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಈ ಬೆಂಗಳೂರಿನ ಟ್ರಕ್​​​ನ್ನು ಮಧ್ಯಪ್ರದೇಶದ ಶಿಯೋಪುರ್​​ ಎಂಬಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸಿ, ಆತನನ್ನು ವಾಹನದಿಂದ ಎತ್ತಿ ಬಿಸಾಕಿದ್ದಾರೆ. ಬಳಿಕ ಲಾರಿಯನ್ನು ಲೂಟಿ ಮಾಡಿದ್ದಾರೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದರೂ ಉತ್ತರಪ್ರದೇಶದ ಮಥುರಾದಲ್ಲಿ ಪ್ರಕರಣ ದಾಖಲಾಗಿದೆ.  

ಇನ್ನು ಪ್ರಕರಣದ ಬಗ್ಗೆ ಮಥುರಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಟಂಡ್​ ಪ್ರಕಾಶ್​ ಸಿಂಗ್​ ವಿವರಿಸಿದ್ದಾರೆ. ಲಾರಿ ಲೂಟಿಯಾಗಿರುವ ಬಗ್ಗೆ ಒಪ್ಪೊ ಮೊಬೈಲ್​ (Oppo Mobile) ಕಂಪನಿಯ ಮ್ಯಾನೇಜರ್​ ಸಚಿನ್​ ಮಾನವ್​ ಎಂಬುವರು ದೂರು ನೀಡಿದ್ದಾರೆ. ಲಾರಿ ಚಾಲಕ ಮನೀಶ್ ಯಾದವ್​ ಉತ್ತರಪ್ರದೇಶದ ಫಾರೂಖಾಬಾದ್​ ಜಿಲ್ಲೆಯವನು. ಅಕ್ಟೋಬರ್​ 5ರಂದು ಮುಂಜಾನೆ ಬೆಂಗಳೂರಿನಿಂದ ಸುಮಾರು 9 ಸಾವಿರ ಮೊಬೈಲ್​​ ಫೋನ್​​ಗಳನ್ನು ಟ್ರಕ್​​ನಲ್ಲಿ ತುಂಬಿಕೊಂಡು ನೊಯ್ಡಾಕ್ಕೆ ಹೊರಟಿದ್ದ. ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿರುವ ಬೈಪಾಸ್​ ಬಳಿ ಈತನ ಲಾರಿಗೆ ಇಬ್ಬರು ಪ್ರಯಾಣಿಕರು ಹತ್ತಿದ್ದರು.  ಲಾರಿ ಝಾನ್ಸಿಯ ಬಬಿನಾ ಟೋಲ್​ ದಾಟುತ್ತಿದ್ದಂತೆ ಈ ಪ್ರಯಾಣಿಕರ ಸೋಗಿನಲ್ಲಿ ಲಾರಿ ಹತ್ತಿದ್ದ ಇಬ್ಬರು ಚಾಲಕನಿಗೆ ಥಳಿಸಲು ಶುರು ಮಾಡಿದರು. ನಂತರ ಆತನನ್ನು ಲಾರಿಯಿಂದ ಎತ್ತಿ ಬಿಸಾಕಿದ್ದಾರೆ. ಟ್ರಕ್​​​ನೊಂದಿಗೆ ಪರಾರಿಯಾಗಿದ್ದಾರೆ. ಅಂದಹಾಗೆ  ಈ ಟ್ರಕ್​​ ಶಿಯೋಪುರ್​​​ನ ಮನ್​​ಪುರ್​​ನಲ್ಲಿ ಸಿಕ್ಕಿದ್ದು, ಖಾಲಿಯಾಗಿತ್ತು. ಅದರಲ್ಲಿರುವ ಮೊಬೈಲ್​​​ಗಳು ಯಾವುದೂ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಒಪ್ಪೋ ಕಂಪನಿ ಮ್ಯಾನೇಜರ್​ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ಪೊಲೀಸ್​ ಠಾಣೆಯಲ್ಲಿ ದೂರು ನೀಡಲು ಪ್ರಯತ್ನಿಸಿದರು. ಆದರೆ ಘಟನೆ ನಡೆದದ್ದು ಮಥುರಾ ಗಡಿಯ ಬಳಿ ಆಗಿದ್ದರಿಂದ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಂತರ ಅವರು ಹೋಗಿ ಮಥುರಾ ಠಾಣೆಯಲ್ಲಿ ದೂರು ನೀಡಿದ್ದಾರೆ.  ಸದ್ಯ ತನಿಖೆ ನಡೆಸಲು ಪೊಲೀಸ್​ ತಂಡವನ್ನು ರಚಿಸಲಾಗಿದೆ. ಮಧ್ಯಪ್ರದೇಶ ಪೊಲೀಸರೂ ಕೂಡ ಕಾರ್ಯಾಚರಣೆಗೆ ಇಳಿದಿದ್ದಾರೆ. ಸಿಸಿಟಿವಿ ಫೂಟೇಜ್​​​ಗಳನ್ನು ಪರಿಶೀಲಿಸಲಾಗುತ್ತಿದ್ದು, ದುಷ್ಕರ್ಮಿಗಳ ಲೊಕೇಶನ್​ ಪತ್ತೆ ಕಾರ್ಯವೂ ನಡೆಯುತ್ತಿದೆ.

ಇದನ್ನೂ ಓದಿ: Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

ತುಮಕೂರಿನಲ್ಲಿ ಬಸ್-ಗೂಡ್ಸ್ ಮಧ್ಯೆ ಭೀಕರ ಅಪಘಾತ! ಸ್ಥಳದಲ್ಲೇ ನಾಲ್ವರ ಸಾವು

Published On - 11:47 am, Sun, 17 October 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್