Atul Subhash: ಅತುಲ್ ಅತ್ತೆ ತಮ್ಮ ಮಗನೊಂದಿಗೆ ಬೈಕ್​ನಲ್ಲಿ ಪರಾರಿ, ಮನೆಗೆ ನೋಟಿಸ್ ಅಂಟಿಸಿ ಬಂದ ಪೊಲೀಸರು

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಬೆಂಗಳೂರು ಪೊಲೀಸರು ಜೌನ್​ಪುರಕ್ಕೆ ತೆರಳಿದ್ದರು. ಆದರೆ ಅಷ್ಟರಲ್ಲಾಗಲೇ ಅತುಲ್ ಅತ್ತೆ ಮನೆಗೆ ಬೀಗ ಹಾಕಿಕೊಂಡು ಬೈಕ್​ನಲ್ಲಿ ಪರಾರಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಬಳಿಕ ಪೊಲೀಸರು ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ಬರಿಗೈಯಲ್ಲಿ ವಾಪಸಾಗಿದ್ದಾರೆ.

Atul Subhash: ಅತುಲ್ ಅತ್ತೆ ತಮ್ಮ ಮಗನೊಂದಿಗೆ ಬೈಕ್​ನಲ್ಲಿ ಪರಾರಿ, ಮನೆಗೆ ನೋಟಿಸ್ ಅಂಟಿಸಿ ಬಂದ ಪೊಲೀಸರು
ಅತುಲ್
Image Credit source: Business Today

Updated on: Dec 13, 2024 | 11:46 AM

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಬೆಂಗಳೂರು ಪೊಲೀಸರು ಜೌನ್​ಪುರಕ್ಕೆ ತೆರಳಿದ್ದರು. ಆದರೆ ಅಷ್ಟರಲ್ಲಾಗಲೇ ಅತುಲ್ ಅತ್ತೆ ಮನೆಗೆ ಬೀಗ ಹಾಕಿಕೊಂಡು ಬೈಕ್​ನಲ್ಲಿ ಪರಾರಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಬಳಿಕ ಪೊಲೀಸರು ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ಬರಿಗೈಯಲ್ಲಿ ವಾಪಸಾಗಿದ್ದಾರೆ.

ಅತುಲ್ ಸುಭಾಷ್ ಅವರ ಸಹೋದರ ನೀಡಿರುವ ದೂರಿನ ಮೇರೆಗೆ ಅತುಲ್​ನ ಅತ್ತೆ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.
ಬೆಂಗಳೂರು ಪೊಲೀಸರ ತಂಡ ಗುರುವಾರ ಉತ್ತರ ಪ್ರದೇಶಕ್ಕೆ ತೆರಳಿತ್ತು, ಅತ್ತೆಯ ಫೋನ್ ಸ್ವಿಚ್ಡ್​ ಆಫ್ ಆಗಿತ್ತು, ಮನೆಗೆ ಬೀಗ ಹಾಕಲಾಗಿತ್ತು.

ನಿಶಾ ಮತ್ತು ಅವರ ಮಗ ಅನುರಾಗ್ ಬುಧವಾರ ರಾತ್ರಿ ಬೈಕ್​ನಲ್ಲಿ ಮನೆಯಿಂದ ಹೊರಟಿದ್ದರು ಎಂದು ಎಂದು ಜಾನ್‌ಪುರ್ ಕೊತ್ವಾಲಿ ಇನ್ಸ್‌ಪೆಕ್ಟರ್ ಮಿಥಿಲೇಶ್ ಕುಮಾರ್ ಮಿಶ್ರಾ ಹೇಳಿದ್ದಾರೆ. ಅಲ್ಲಿ ಮೊಕ್ಕಾಂ ಹೂಡಿದ್ದ ಕೆಲ ಪತ್ರಕರ್ತರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಕೇಳಿದಾಗ, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅನುರಾಗ್ ಉತ್ತರಿಸಿದ್ದರು.

ಮತ್ತಷ್ಟು ಓದಿ: ಅತುಲ್ ಸುಭಾಷ್ ಆತ್ಮಹತ್ಯೆ ‌ಕೇಸ್: ರಾಷ್ಟ್ರಪತಿ, ಸುಪ್ರೀಂ ಜಡ್ಜ್​​ಗೆ ಮೇಲ್​​ ಮಾಡಿದ್ದ ಟೆಕ್ಕಿ

ಸಿಂಘಾನಿಯಾ ಕುಟುಂಬ ಎರಡು ತಿಂಗಳ ಹಿಂದೆ ಇಲ್ಲಿ ವಾಸಿಸಲು ಬಂದಿತ್ತು. ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಮನೆಯ ಪ್ರವೇಶದ್ವಾರದಲ್ಲಿ ನೋಟಿಸ್ ಅಂಟಿಸಿದ್ದು, ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನಿವಾಸಿಗಳನ್ನು ಕೇಳಿದ್ದಾರೆ.

ಬೆಂಗಳೂರು ಪೊಲೀಸ್‌ನ ಡಿಸಿಪಿ ಶಿವಕುಮಾರ್‌ ಗುಣಾರೆ ಮಾತನಾಡಿ, ನಾವು ಸ್ಥಳೀಯ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಶಂಕಿತರ ಪತ್ತೆಗೆ ಅವರು ನಮ್ಮೊಂದಿಗೆ ಕೆಲಸ ಮಾಡುತ್ತಿದ್ದಾರೆ. ವಕೀಲ ದಿನೇಶ್ ಮಿಶ್ರಾ ಮಾತನಾಡಿ, ಅವರು ಮಾಸಿಕ 84,000 ರೂಪಾಯಿಗಳನ್ನು ಪಡೆಯುತ್ತಿದ್ದಾರೆ ಮತ್ತು ಜುಲೈನಲ್ಲಿ ಜೌನ್‌ಪುರ್ ಕೌಟುಂಬಿಕ ನ್ಯಾಯಾಲಯವು ಅವರ ಮಗನಿಗೆ ತಿಂಗಳಿಗೆ 40,000 ರೂಪಾಯಿಗಳನ್ನು ನೀಡುವಂತೆ ಆದೇಶಿಸಿತ್ತು.

ಅದು ಅವರಿಗೆ ಹೊರೆಯಾಗಿರಬಹುದು. ಅತುಲ್ ಅವರು 24 ಪುಟಗಳ ಸೂಸೈಡ್ ನೋಟ್ ಮತ್ತು 81 ನಿಮಿಷಗಳ ವೀಡಿಯೊವನ್ನು ಮಾಡಿಟ್ಟಿದ್ದರು. ಅತುಲ್ ಮತ್ತು ನಿಕಿತಾ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಭೇಟಿಯಾದರು ಮತ್ತು ಏಪ್ರಿಲ್ 26, 2019 ರಂದು ವಾರಾಣಸಿಯಲ್ಲಿ ವಿವಾಹವಾಗಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Fri, 13 December 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us