AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು

ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು.

Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು
ಅಪಘಾತImage Credit source: The Hindu
ನಯನಾ ರಾಜೀವ್
|

Updated on:Mar 04, 2026 | 10:49 AM

Share

ಚಿತ್ತೂರು, ಮಾರ್ಚ್​ 04: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ.

ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಚಾಲಕ ನಿದ್ದೆ ಮಂಪರಿನಲ್ಲಿದ್ದನೋ ಅಥವಾ ಕಾರಿನ ವೇಗದಿಂದಾಗಿ ನಿಯಂತ್ರಣ ತಪ್ಪಿದ್ದನೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.  ಮೃತರನ್ನು ಬೆಂಗಳೂರು ರಾಜಾಜಿನಗರದ ನಿವಾಸಿ, ಮೋಹನ್ ದಾಸ್(71), ನಾಗರಾಜ್(61) ಕುಸುಮ(61), ಜಯಂತಿ(59), ಪೂಜಾ(33) ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ, ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಅವರ ವಿವರಗಳನ್ನು ಸಹ ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 4 March 26

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ