AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್; ಬೆಂಗಳೂರಿನಲ್ಲಿ ಇಂದು ಸಮಾವೇಶ

TV9 Network The Leaders of Road Transport Conclave: ಎರಡನೇ ಸೀಸನ್​ನ ‘ದಿ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್’ ಸಮಾವೇಶ ಇಂದು ಅಕ್ಟೋಬರ್ 27ರಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ಎರಡನೇ ಹಂತದ ಈ ಕಾಂಕ್ಲೇವ್ ಸೀರೀಸ್ ಶುರುವಾಗುತ್ತದೆ. ಬಹಳ ಸುಸ್ಥಿರವಾದ, ತಂತ್ರಜ್ಞಾನ ಬೆಂಬಲಿತವಾದ, ನಾವೀನ್ಯವಾದ ಮತ್ತು ಸುರಕ್ಷಿತವಾದ ರಸ್ತೆ ಸಾರಿಗೆ ವ್ಯವಸ್ಥೆಯನ್ನು ಹೇಗೆ ರೂಪಿಸಬಹುದು ಎಂದು ಈ ಸರಣಿ ಕಾರ್ಯಕ್ರಮಗಳಲ್ಲಿ ಚರ್ಚಿಸಲಾಗುತ್ತದೆ.

ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್; ಬೆಂಗಳೂರಿನಲ್ಲಿ ಇಂದು ಸಮಾವೇಶ
ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್
TV9 Web
| Edited By: |

Updated on:Oct 27, 2023 | 1:11 PM

Share

ಬೆಂಗಳೂರು, ಅಕ್ಟೋಬರ್ 27: ಎರಡನೇ ಸೀಸನ್​ನ ‘ದಿ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್’ ಸಮಾವೇಶ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಭಾರತದ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವಲಯದ ಪ್ರಮುಖ ಸಂಗತಿಗಳನ್ನು ಈ ಕಾರ್ಯಕ್ರಮದಲ್ಲಿ ಚರ್ಚಿಸಲಾಗುತ್ತದೆ. ಈ ಕ್ಷೇತ್ರದ ಸಾಧನೆಗಳು ಮತ್ತು ಯಶೋಗಾಥೆಗಳನ್ನು ಗುರುತಿಸಿ ಸಂಭ್ರಮಾಚರಿಸಲಾಗುತ್ತದೆ.

ರಸ್ತೆ ಸುರಕ್ಷತೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ಸುಸ್ಥಿರತೆ ಇತ್ಯಾದಿ ಅಂಶಗಳಿರುವ ಸ್ಮಾರ್ಟ್ ಮೊಬಿಲಿಟಿ ಇಕೋಸಿಸ್ಟಂ ಅನ್ನು ರೂಪಿಸಲು ಬೇಕಾದ ಅವಶ್ಯಕ ಸಂಗತಿಗಳನ್ನು ಬೆಳಕಿಗೆ ತರುವ ಪ್ರಯತ್ನವಾಗಲಿದೆ. ಇದು ಈ ಅಭಿಯಾನದ ಮೊದಲ ಹಂತವಾಗಿದೆ. ರಸ್ತೆ ಸಾರಿಗೆ ನಾಯಕರ ಸಮಾವೇಶವು ಈ ಹಂತದಲ್ಲಿದೆ. ಟ್ರಾನ್ಸ್​ಪೋರ್ಟರ್​ಗಳು ಮೊದಲಾದ ಸಂಬಂಧಿತರು ಪ್ಯಾನಲ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ 12 ಜಿಲ್ಲೆಗಳಲ್ಲಿ ಅ. 29ರಿಂದ ಈಶಾನ್ಯ ಮಾನ್ಸೂನ್ ಅಬ್ಬರ

ಈ ಸೀಸನ್​ನ ಲೀಡರ್ಸ್ ಅಫ್ ರೋಡ್ ಟ್ರಾನ್ಸ್​ಪೋರ್ಟ್ ಕೂಟ ಒಟ್ಟು ನಾಲ್ಕು ಕಡೆ ನಡೆಯಲಿದೆ. ದೆಹಲಿ, ಜೈಪುರ, ಮುಂಬೈ ಮತ್ತು ಬೆಂಗಳೂರಿನಲ್ಲಿ ಹಂತ ಹಂತವಾಗಿ ಈ ಕಾಂಕ್ಲೇವ್ ನಡೆಯುತ್ತಿದೆ. ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ತಂದಿರುವ ಕಾಂಟಿನೆಂಟಲ್ ಕಂಪನಿಯ ಪ್ರತಿನಿಧಿಗಳು ಪ್ಯಾನಲ್ ಡಿಸ್ಕಶನ್​ನ ಭಾಗವಾಗಿರಲಿದ್ದಾರೆ.

ಬೆಂಗಳೂರಿನಲ್ಲಿ ಇಂದು ಅಕ್ಟೋಬರ್ 27ರಂದು ಎರಡನೇ ಹಂತದ ಈ ಕಾಂಕ್ಲೇವ್ ಸೀರೀಸ್ ಆರಂಭವಾಗುತ್ತಿದೆ. ಬಹಳ ಸುಸ್ಥಿರವಾದ, ತಂತ್ರಜ್ಞಾನ ಬೆಂಬಲಿತವಾದ, ನಾವೀನ್ಯವಾದ ಮತ್ತು ಸುರಕ್ಷಿತವಾದ ರಸ್ತೆ ಸಾರಿಗೆ ವ್ಯವಸ್ಥೆಯನ್ನು ಹೇಗೆ ರೂಪಿಸಬಹುದು ಎಂದು ಈ ಸರಣಿ ಕಾರ್ಯಕ್ರಮಗಳಲ್ಲಿ ಚರ್ಚಿಸಲಾಗುತ್ತದೆ. ಕಳೆದ ವರ್ಷ ನಡೆದ ಮೊದಲ ಸೀಸನ್​ನ ಸಮಾವೇಶ ಭರ್ಜರಿ ಯಶಸ್ವಿಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:27 am, Fri, 27 October 23

Follow Us
Web contact
Web contact

TV9 Kannada

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!