AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್; ಬೆಂಗಳೂರಿನಲ್ಲಿ ಇಂದು ಸಮಾವೇಶ

TV9 Network The Leaders of Road Transport Conclave: ಎರಡನೇ ಸೀಸನ್​ನ ‘ದಿ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್’ ಸಮಾವೇಶ ಇಂದು ಅಕ್ಟೋಬರ್ 27ರಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ಎರಡನೇ ಹಂತದ ಈ ಕಾಂಕ್ಲೇವ್ ಸೀರೀಸ್ ಶುರುವಾಗುತ್ತದೆ. ಬಹಳ ಸುಸ್ಥಿರವಾದ, ತಂತ್ರಜ್ಞಾನ ಬೆಂಬಲಿತವಾದ, ನಾವೀನ್ಯವಾದ ಮತ್ತು ಸುರಕ್ಷಿತವಾದ ರಸ್ತೆ ಸಾರಿಗೆ ವ್ಯವಸ್ಥೆಯನ್ನು ಹೇಗೆ ರೂಪಿಸಬಹುದು ಎಂದು ಈ ಸರಣಿ ಕಾರ್ಯಕ್ರಮಗಳಲ್ಲಿ ಚರ್ಚಿಸಲಾಗುತ್ತದೆ.

ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್; ಬೆಂಗಳೂರಿನಲ್ಲಿ ಇಂದು ಸಮಾವೇಶ
ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್
TV9 Web
| Edited By: |

Updated on:Oct 27, 2023 | 1:11 PM

Share

ಬೆಂಗಳೂರು, ಅಕ್ಟೋಬರ್ 27: ಎರಡನೇ ಸೀಸನ್​ನ ‘ದಿ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್’ ಸಮಾವೇಶ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಭಾರತದ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವಲಯದ ಪ್ರಮುಖ ಸಂಗತಿಗಳನ್ನು ಈ ಕಾರ್ಯಕ್ರಮದಲ್ಲಿ ಚರ್ಚಿಸಲಾಗುತ್ತದೆ. ಈ ಕ್ಷೇತ್ರದ ಸಾಧನೆಗಳು ಮತ್ತು ಯಶೋಗಾಥೆಗಳನ್ನು ಗುರುತಿಸಿ ಸಂಭ್ರಮಾಚರಿಸಲಾಗುತ್ತದೆ.

ರಸ್ತೆ ಸುರಕ್ಷತೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ಸುಸ್ಥಿರತೆ ಇತ್ಯಾದಿ ಅಂಶಗಳಿರುವ ಸ್ಮಾರ್ಟ್ ಮೊಬಿಲಿಟಿ ಇಕೋಸಿಸ್ಟಂ ಅನ್ನು ರೂಪಿಸಲು ಬೇಕಾದ ಅವಶ್ಯಕ ಸಂಗತಿಗಳನ್ನು ಬೆಳಕಿಗೆ ತರುವ ಪ್ರಯತ್ನವಾಗಲಿದೆ. ಇದು ಈ ಅಭಿಯಾನದ ಮೊದಲ ಹಂತವಾಗಿದೆ. ರಸ್ತೆ ಸಾರಿಗೆ ನಾಯಕರ ಸಮಾವೇಶವು ಈ ಹಂತದಲ್ಲಿದೆ. ಟ್ರಾನ್ಸ್​ಪೋರ್ಟರ್​ಗಳು ಮೊದಲಾದ ಸಂಬಂಧಿತರು ಪ್ಯಾನಲ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ 12 ಜಿಲ್ಲೆಗಳಲ್ಲಿ ಅ. 29ರಿಂದ ಈಶಾನ್ಯ ಮಾನ್ಸೂನ್ ಅಬ್ಬರ

ಈ ಸೀಸನ್​ನ ಲೀಡರ್ಸ್ ಅಫ್ ರೋಡ್ ಟ್ರಾನ್ಸ್​ಪೋರ್ಟ್ ಕೂಟ ಒಟ್ಟು ನಾಲ್ಕು ಕಡೆ ನಡೆಯಲಿದೆ. ದೆಹಲಿ, ಜೈಪುರ, ಮುಂಬೈ ಮತ್ತು ಬೆಂಗಳೂರಿನಲ್ಲಿ ಹಂತ ಹಂತವಾಗಿ ಈ ಕಾಂಕ್ಲೇವ್ ನಡೆಯುತ್ತಿದೆ. ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ತಂದಿರುವ ಕಾಂಟಿನೆಂಟಲ್ ಕಂಪನಿಯ ಪ್ರತಿನಿಧಿಗಳು ಪ್ಯಾನಲ್ ಡಿಸ್ಕಶನ್​ನ ಭಾಗವಾಗಿರಲಿದ್ದಾರೆ.

ಬೆಂಗಳೂರಿನಲ್ಲಿ ಇಂದು ಅಕ್ಟೋಬರ್ 27ರಂದು ಎರಡನೇ ಹಂತದ ಈ ಕಾಂಕ್ಲೇವ್ ಸೀರೀಸ್ ಆರಂಭವಾಗುತ್ತಿದೆ. ಬಹಳ ಸುಸ್ಥಿರವಾದ, ತಂತ್ರಜ್ಞಾನ ಬೆಂಬಲಿತವಾದ, ನಾವೀನ್ಯವಾದ ಮತ್ತು ಸುರಕ್ಷಿತವಾದ ರಸ್ತೆ ಸಾರಿಗೆ ವ್ಯವಸ್ಥೆಯನ್ನು ಹೇಗೆ ರೂಪಿಸಬಹುದು ಎಂದು ಈ ಸರಣಿ ಕಾರ್ಯಕ್ರಮಗಳಲ್ಲಿ ಚರ್ಚಿಸಲಾಗುತ್ತದೆ. ಕಳೆದ ವರ್ಷ ನಡೆದ ಮೊದಲ ಸೀಸನ್​ನ ಸಮಾವೇಶ ಭರ್ಜರಿ ಯಶಸ್ವಿಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:27 am, Fri, 27 October 23

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್