AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಳಿಗ್ಗೆ ಹಾಸನ, ಚಿಕ್ಕಬಳ್ಳಾಪುರ, ಯಾದಗಿರಿ ನಗರಗಳಲ್ಲಿ ಉತ್ತಮ ಏರ್ ಕ್ವಾಲಿಟಿ ಇಂಡೆಕ್ಸ್ ದಾಖಲು

ಹಾಸನ ನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 20 ಮಾತ್ರ ದಾಖಲಾಗಿದೆ. ಹೀಗಾಗಿ ಉತ್ತಮವಾದ ಗಾಳಿಯ ಗುಣಮಟ್ಟವನ್ನು ಹಾಸನ ಹೊಂದಿದೆ. ಚಿಕ್ಕಬಳ್ಳಾಪುರ ನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 28 ದಾಖಲು, ಇನ್ನು ಯಾದಗಿರಿ‌ ನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 30 ದಾಖಲಾಗಿದೆ.

ಇಂದು ಬೆಳಿಗ್ಗೆ ಹಾಸನ, ಚಿಕ್ಕಬಳ್ಳಾಪುರ, ಯಾದಗಿರಿ ನಗರಗಳಲ್ಲಿ ಉತ್ತಮ ಏರ್ ಕ್ವಾಲಿಟಿ ಇಂಡೆಕ್ಸ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on:Nov 23, 2021 | 11:44 AM

Share

ದೆಹಲಿ: ರಾಜ್ಯದ 3 ನಗರಗಳಲ್ಲಿ ಉತ್ತಮ ವಾಯು ಗುಣಮಟ್ಟ ಸೂಚ್ಯಂಕ(Air Quality Index) ದಾಖಾಗಿದೆ. ಇಂದು (ನವೆಂಬರ್ 23) ಬೆಳಿಗ್ಗೆ ಹಾಸನ, ಚಿಕ್ಕಬಳ್ಳಾಪುರ, ಯಾದಗಿರಿ ನಗರಗಳಲ್ಲಿ ಉತ್ತಮ ವಾಯು ಗುಣಮಟ್ಟ ಸೂಚ್ಯಂಕ ದಾಖಲಾಗಿದೆ. ಹಾಸನ ನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 20 ಮಾತ್ರ ದಾಖಲಾಗಿದೆ. ಹೀಗಾಗಿ ಉತ್ತಮವಾದ ಗಾಳಿಯ ಗುಣಮಟ್ಟವನ್ನು ಹಾಸನ ಹೊಂದಿದೆ. ಚಿಕ್ಕಬಳ್ಳಾಪುರ ನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 28 ದಾಖಲು, ಇನ್ನು ಯಾದಗಿರಿ‌ ನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 30 ದಾಖಲಾಗಿದೆ. ಮಾಲಿನ್ಯ ರಹಿತವಾದ ಉತ್ತಮವಾದ ಗಾಳಿಯ ಗುಣಮಟ್ಟ ರಾಜ್ಯದ 3 ಜಿಲ್ಲೆಗಳಲ್ಲಿ ದಾಖಲಾಗಿದೆ.

ಇದಕ್ಕೆ ವಿರುದ್ಧವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯ ದಾಖಲಾಗಿದೆ. ದೆಹಲಿಯಲ್ಲಿ ವಾಯುವಿನ ಗುಣಮಟ್ಟ ಕುಸಿದಿದೆ. ದೆಹಲಿಯ ಜಂಗೀರಪುರ‌ ಪ್ರದೇಶದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 324 ಕ್ಕೆ ಕುಸಿತವಾಗಿದೆ. ಆದರೆ ನೆನ್ನೆ (ನವೆಂಬರ್ 22) ಮತ್ತು ಭಾನುವಾರಕ್ಕೆ ಹೋಲಿಸಿದರೆ ದೆಹಲಿಯಲ್ಲಿ ವಾಯುವಿನ ಗುಣಮಟ್ಟ ಸ್ವಲ್ಪ ಉತ್ತಮವಾಗಿದೆ. ನೆನ್ನೆ ದೆಹಲಿ ವಾಯುವಿನ ಗುಣಮಟ್ಟ 349 ಕ್ಕೆ ಕುಸಿದಿತ್ತು. ಸದ್ಯ ದೆಹಲಿಯಲ್ಲಿ ಬಿರುಸಾದ ಗಾಳಿಯ ವೇಗ ಇದೆ. ಹೀಗಾಗಿ ವಾಯುವಿನ ಗುಣಮಟ್ಟ ಸ್ವಲ್ಪ ಉತ್ತಮವಾಗಿದೆ.

air quality index

ವಾಯು ಗುಣಮಟ್ಟ ಸೂಚ್ಯಂಕ

ದೆಹಲಿಯಲ್ಲಿಆನ್​ಲೈನ್ ತರಗತಿ ಮಾತ್ರ ನಡೆಸಲು ಅವಕಾಶ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಆನ್​ಲೈನ್ ತರಗತಿ ಮಾತ್ರ ನಡೆಸಲು ಅವಕಾಶ ನೀಡಲಾಗಿದ್ದು, ದೆಹಲಿ ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮುಂದಿನ ಆದೇಶ ಬರುವವರೆಗೆ ಶಾಲೆಗಳನ್ನು ಮುಚ್ಚಲು ಪರಿಸರ ಇಲಾಖೆ ನಿರ್ದೇಶನ ನೀಡಿದೆ ಎಂದು ಹೆಚ್ಚುವರಿ ಶಿಕ್ಷಣ ನಿರ್ದೇಶಕಿ ರೀಟಾ ಶರ್ಮಾ ತಿಳಿಸಿದ್ದಾರೆ.ಅದಾಗ್ಯೂ, ಆನ್‌ಲೈನ್ ಬೋಧನಾ ಚಟುವಟಿಕೆಗಳು ಮತ್ತು ಬೋರ್ಡ್ ತರಗತಿಗಳಿಗೆ ಪರೀಕ್ಷೆಗಳನ್ನು ಮೊದಲೇ ನೀಡಲಾದ ಮಾರ್ಗಸೂಚಿಗಳ ಪ್ರಕಾರ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಹೇಳಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳೆದ ವಾರ (ನವೆಂಬರ್ 13 ರಂದು) ಒಂದು ವಾರದವರೆಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಘೋಷಿಸಿದ್ದರು. ಹರಿಯಾಣ ಸರ್ಕಾರ ಕೂಡ ಗುರುಗ್ರಾಮ್, ಫರಿದಾಬಾದ್, ಸೋನಿಪತ್ ಮತ್ತು ಝಿಜಾರ್ ನಗರಗಳಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಘೋಷಿಸಿತ್ತು. ಇದೀಗ ದೆಹಲಿಯಲ್ಲಿ ಶಾಲೆಗಳಿಗೆ ರಜೆ ಮುಂದುವರೆದಿದೆ.

ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ; ಮುಂದಿನ ಆದೇಶದವರೆಗೆ ಶಾಲೆಗಳಿಗೆ ರಜೆ ಘೋಷಣೆ

ದೆಹಲಿ: ಕಳಪೆ ಮಟ್ಟದಲ್ಲಿಯೇ ಇರುವ ವಾಯು ಗುಣಮಟ್ಟ, ಇಂದಿನಿಂದ ಸುಧಾರಿಸುವ ಸಾಧ್ಯತೆ; ಅಕ್ಕಪಕ್ಕದ ನಗರಗಳಲ್ಲಿ ಪರಿಸ್ಥಿತಿ ಹೇಗಿದೆ?

Published On - 11:37 am, Tue, 23 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ