AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಬೇಡಿಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತಮ ಅವಕಾಶ : ಪ್ರಲ್ಹಾದ್ ಜೋಶಿ

2040ರ ವೇಳೆಗೆ ಭಾರತ ದೇಶದಲ್ಲಿ ತಲಾ ವಿದ್ಯುತ್ ಬಳಕೆ ದ್ವಿಗುಣಗೊಳ್ಳಲಿದ್ದು, ಹೆಚ್ಚಿನ ಕಲ್ಲಿದ್ದಲು ಉತ್ಪಾದನೆಗೆ ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ವಿದ್ಯುತ್ ಬೇಡಿಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತಮ ಅವಕಾಶ : ಪ್ರಲ್ಹಾದ್ ಜೋಶಿ
ಕಲ್ಲಿದ್ದಲು ಗಣಿಗಾರಿಕೆ ಹೂಡಿಕೆದಾರರ ಸಮಾವೇಶ
TV9 Web
| Edited By: |

Updated on: Nov 09, 2022 | 9:57 PM

Share

ಇಂದೋರ್‌: 2040ರ ವೇಳೆಗೆ ಭಾರತ ದೇಶದಲ್ಲಿ ತಲಾ ವಿದ್ಯುತ್ (power) ಬಳಕೆ ದ್ವಿಗುಣಗೊಳ್ಳಲಿದ್ದು, ಹೆಚ್ಚಿನ ಕಲ್ಲಿದ್ದಲು ಉತ್ಪಾದನೆಗೆ ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಕಲ್ಲಿದ್ದಲು ಗಣಿಗಾರಿಕೆ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕಲ್ಲಿದ್ದಲು ಸಚಿವಾಲಯ ಇಂದೋರ್‌ನಲ್ಲಿ ಇಂದು ಮೊಟ್ಟಮೊದಲ ಹೂಡಿಕೆದಾರರ ಸಮಾವೇಶವನ್ನು ಹಮ್ಮಿಕೊಂಡಿತ್ತು. ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸರಕಾರ ಕಲ್ಲಿದ್ದಲು ಕ್ಷೇತ್ರವನ್ನ ಖಾಸಗಿ ವಲಯಕ್ಕೂ ಅನ್ ಲಾಕ್ ಮಾಡುವ ಮೂಲಕ ಹೆಚ್ಚಿನ ಉತ್ಪಾದನೆಗೆ ಗಮನಹರಿಸಿದೆ ಎಂದರು. ಕಲ್ಲಿದ್ದಲು ಆಮದನ್ನ ಶೇ 2%ಗೆ ಇಳಿಸಲಾಗಿದೆ ಎಂದರು.

ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ್​ನತ್ತ ಸಾಗುತ್ತಿದೆ. ವಿದ್ಯುತ್ ಬಳಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಬೇಕಿದೆ. ಈ ನಿಟ್ಟಿನಲ್ಲಿ 6ನೇ ಹಂತದ 133 ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ 5 ನೇ ಹಂತದ 64 ಕಲ್ಲಿದ್ದಲು ಗಣಿಗಳನ್ನ ಯಶಸ್ವಿಯಾಗಿ ಹರಾಜು ಮಾಡಲಾಗಿದೆ. ಅಲ್ಲದೇ 5 ನೇ ಹಂತದ ಸೆಕೆಂಡ್ ಅಟೆಮ್ಟ್​ನಲ್ಲಿ 8 ಗಣಿಗಳ ಹರಾಜು ಪ್ರಾರಂಭಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು. ಕಲ್ಲಿದ್ದಲು ಸಚಿವಾಲಯದಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗಿದ್ದು, ಉದ್ಯಮ ಸ್ನೇಹಿ ವಾತಾವರಣ ರೂಪಿಸಲಾಗಿದೆ. ಹೂಡಿಕೆದಾರರು ಹೂಡಿಕೆ ಮಾಡಲು ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ. ಮುಂದಿನ 25 – 30 ವರ್ಷಗಳ ವರೆಗೆ ಕಲ್ಲಿದ್ದಲಿಗೆ ಬೇಡಿಕೆ ಹೆಚ್ಚುತ್ತಲೇ ಹೋಗಲಿದೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ಪಟ್ಟರು.

ಇತರ ಅಭಿವೃದ್ಧಿ ಹೊಂದಿದ ಆರ್ಥಿಕತೆಗಳಿಗೆ ಹೋಲಿಸಿದರೆ ಭಾರತವು ಪ್ರಸ್ತುತ ತಲಾ ವಿದ್ಯುತ್ ಬಳಕೆಯ ಹತ್ತನೇ ಒಂದು ಭಾಗವನ್ನು ಹೊಂದಿಲ್ಲ. 2040ರ ವೇಳೆಗೆ ತಲಾ ಬಳಕೆ ದ್ವಿಗುಣಗೊಳ್ಳಲಿದೆ. ಇದಕ್ಕಾಗಿ ಕಲ್ಲಿದ್ದಲು ಅಗತ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಉತ್ತಮ ತಾಂತ್ರಿಕ ಪ್ರಕ್ರಿಯೆಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಜೋಶಿ ಹೂಡಿಕೆದಾರರಿಗೆ ಮಾಹಿತಿ ನೀಡಿದರು. ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ, ಕೋಲ್ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷರಾದ ಪ್ರಮೋದ್ ಅಗರವಾಲ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!