AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಸೈಬರ್ ಕ್ರಿಮಿನಲ್​, ನಕಲಿ ಫೋನ್ ಕಾಲ್ ಬಗ್ಗೆ ಎಚ್ಚರ!; ಸರ್ಕಾರ ಸೂಚನೆ

ಸರ್ಕಾರಿ ಅಧಿಕಾರಿಗಳ ಹೆಸರಿನಲ್ಲಿ ಇತ್ತೀಚೆಗೆ ಜನರು ಮೋಸ ಮಾಡುತ್ತಿದ್ದಾರೆ. ತಾವು ನಿಜವಾದ ಅಧಿಕಾರಿಗಳೆಂದು ಜನರನ್ನು ನಂಬಿಸಲು ಈ ವಂಚಕರು ಪೊಲೀಸ್ ಠಾಣೆಗಳು ಮತ್ತು ಸರ್ಕಾರಿ ಕಚೇರಿಗಳನ್ನು ಹೋಲುವ ಸ್ಟುಡಿಯೋಗಳನ್ನು ಬಳಸುತ್ತಾರೆ. ಜನರ ಜೊತೆಗಿನ ಮಾತುಕತೆಯ ವೇಳೆ ಅವರು ಸಾಮಾನ್ಯವಾಗಿ ಸಮವಸ್ತ್ರವನ್ನು ಧರಿಸುತ್ತಾರೆ. ಈ ರೀತಿ ಯಾಮಾರಿಸುವವರ ಬಗ್ಗೆ ಎಚ್ಚರಿಕೆಯಿಂದ ಇರಲು ಗೃಹ ಸಚಿವಾಲಯ ಸೂಚಿಸಿದೆ.

Cyber Crime: ಸೈಬರ್ ಕ್ರಿಮಿನಲ್​, ನಕಲಿ ಫೋನ್ ಕಾಲ್ ಬಗ್ಗೆ ಎಚ್ಚರ!; ಸರ್ಕಾರ ಸೂಚನೆ
ಸೈಬರ್ ಕ್ರೈಮ್ Image Credit source: istock
ಸುಷ್ಮಾ ಚಕ್ರೆ
|

Updated on: May 14, 2024 | 6:19 PM

Share

ನವದೆಹಲಿ: ವಿವಿಧ ಸರ್ಕಾರಿ ಏಜೆನ್ಸಿಗಳ ಅಧಿಕಾರಿಗಳ ಸೋಗಿನಲ್ಲಿ ಬ್ಲ್ಯಾಕ್‌ಮೇಲ್ ಮತ್ತು ‘ಡಿಜಿಟಲ್ ಅರೆಸ್ಟ್​​’ನಂತಹ ಮೋಸದ ಚಟುವಟಿಕೆಗಳಲ್ಲಿ ತೊಡಗಿರುವ ಸೈಬರ್ ಅಪರಾಧಿಗಳ (Cyber Criminals) ಹೆಚ್ಚಳದ ಕುರಿತು ಗೃಹ ಸಚಿವಾಲಯ (MHA) ಮಂಗಳವಾರ ಕಠಿಣ ಎಚ್ಚರಿಕೆ ನೀಡಿದೆ. ಈ ಕ್ರಿಮಿನಲ್‌ಗಳು ಎನ್‌ಸಿಬಿ, ಸಿಬಿಐ, ಆರ್‌ಬಿಐ, ಹಾಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸ್‌ನಂತಹ ಏಜೆನ್ಸಿಗಳ ಪ್ರತಿನಿಧಿಗಳಂತೆ ನಟಿಸುತ್ತಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ರಾಷ್ಟ್ರೀಯ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ (NCRP)ನಲ್ಲಿ ಬೆದರಿಕೆ, ಬ್ಲ್ಯಾಕ್‌ಮೇಲ್, ಸುಲಿಗೆ ಮತ್ತು ಕಾನೂನು ಜಾರಿ ಅಧಿಕಾರಿಗಳಂತೆ ನಟಿಸುವ ಸೈಬರ್ ಅಪರಾಧಿಗಳು ಮಾಡುವ ಡಿಜಿಟಲ್ ಅರೆಸ್ಟ್​ ಕುರಿತು ವರದಿಯಾಗುತ್ತಿರುವ ದೂರುಗಳ ಸಂಖ್ಯೆ ಹೆಚ್ಚಾಗಿದೆ.

“ಈ ಸೈಬರ್ ಕ್ರಿಮಿನಲ್​ಗಳು ಅಕ್ರಮ ಸರಕುಗಳು, ಔಷಧಗಳು, ನಕಲಿ ಪಾಸ್‌ಪೋರ್ಟ್‌ಗಳು ಅಥವಾ ಇತರ ನಿಷಿದ್ಧ ವಸ್ತುಗಳನ್ನು ಕಳುಹಿಸುತ್ತಿದ್ದಾರೆ” ಎಂದು MHA ಹೇಳಿದೆ. ಕೆಲವು ಸಂದರ್ಭಗಳಲ್ಲಿ, ಈ ಅಪರಾಧಿಗಳು ನಿಮ್ಮ ಕುಟುಂಬದ ಸದಸ್ಯರು ಅಥವಾ ನಿಕಟ ಸಹಚರರು ಅಪರಾಧ ಅಥವಾ ಅಪಘಾತದಲ್ಲಿ ಭಾಗಿಯಾಗಿದ್ದಾರೆ ಮತ್ತು ತಮ್ಮ ವಶದಲ್ಲಿದ್ದಾರೆ ಎಂದು ಜನರಿಗೆ ತಿಳಿಸುತ್ತಾರೆ. ಇದನ್ನು ನಂಬುವ ಜನರನ್ನು ಯಾಮಾರಿಸುತ್ತಾರೆ ಎಂದು ಗೃಹ ಸಚಿವಾಲಯ ವಿವರಿಸಿದೆ.

ಇದನ್ನೂ ಓದಿ: ವಿಡಿಯೋ ಕಾಲ್​​ನಲ್ಲಿ ಬೆಂಗಳೂರು ಮಹಿಳೆಯ ಬೆತ್ತಲಾಗಿಸಿ 14.57 ಲಕ್ಷ ರೂ. ಎಗರಿಸಿದ ಸೈಬರ್ ವಂಚಕರು!

ಪೊಲೀಸ್ ಅಧಿಕಾರಿಗಳು, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ), ಮಾದಕ ದ್ರವ್ಯ ಇಲಾಖೆ, ರಿಸರ್ವ್ ಬ್ಯಾಂಕ್ ಆಫ್ ಸೈಬರ್ ಅಪರಾಧಿಗಳಿಂದ ಬೆದರಿಕೆ, ಬ್ಲ್ಯಾಕ್‌ಮೇಲ್, ಸುಲಿಗೆ ಮತ್ತು ಡಿಜಿಟಲ್ ಅರೆಸ್ಟ್​ಗೆ ಸಂಬಂಧಿಸಿದಂತೆ ರಾಷ್ಟ್ರೀಯ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ (ಎನ್‌ಸಿಆರ್‌ಪಿ)ನಲ್ಲಿ ಹೆಚ್ಚಿನ ಸಂಖ್ಯೆಯ ದೂರುಗಳು ವರದಿಯಾಗುತ್ತಿವೆ.

ಈ ವಂಚಕರು ಸಾಮಾನ್ಯವಾಗಿ ಜನರನ್ನು ಟಾರ್ಗೆಟ್ ಮಾಡಿ ಫೋನ್ ಮಾಡುತ್ತಾರೆ. ನಿಮ್ಮ ಕಡೆಯವರು ಅಥವಾ ಸಂಬಂಧಿಗಳು ಅಕ್ರಮ ಸರಕುಗಳು, ಔಷಧಗಳು, ನಕಲಿ ಪಾಸ್‌ಪೋರ್ಟ್‌ಗಳು, ಡ್ರಗ್ಸ್ ಅಥವಾ ಯಾವುದೇ ಇತರ ನಿಷಿದ್ಧ ವಸ್ತುಗಳನ್ನು ಒಳಗೊಂಡಿರುವ ಪಾರ್ಸೆಲ್ ಅನ್ನು ಕಳುಹಿಸಿದ್ದಾರೆ. ಹೀಗಾಗಿ, ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸುತ್ತಾರೆ. ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮಾತನಾಡುವ ಇವರನ್ನು ಜನರು ನಂಬಿ ತಮ್ಮ ಆಧಾರ್, ಪ್ಯಾನ್ ಮತ್ತಿತರ ದಾಖಲೆಗಳನ್ನು ನೀಡುತ್ತಾರೆ. ಇನ್ನು ಕೆಲವೊಮ್ಮೆ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾದವರನ್ನು ಬಿಡಲು ಹಣ ಕೊಡಬೇಕೆಂಬ ರಾಜಿ ಮಾತುಕತೆಯೂ ನಡೆಯುತ್ತದೆ. ಅವರ ಬೇಡಿಕೆಗಳನ್ನು ಪೂರೈಸುವವರೆಗೆ ವಂಚಕರಿಗೆ ಸ್ಕೈಪ್ ಅಥವಾ ಇತರ ವೀಡಿಯೊ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿರುತ್ತದೆ. ವಂಚಕರು ಪೊಲೀಸ್ ಠಾಣೆಗಳು ಮತ್ತು ಸರ್ಕಾರಿ ಕಚೇರಿಗಳ ಮಾದರಿಯ ಸ್ಟುಡಿಯೋಗಳನ್ನು ಬಳಸುತ್ತಾರೆ. ತಾವು ಅಸಲಿಯಾಗಿ ಕಾಣಿಸಿಕೊಳ್ಳಲು ಸಮವಸ್ತ್ರವನ್ನು ಧರಿಸುತ್ತಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಮೈಕ್ರೋಸಾಫ್ಟ್ ಸಹಯೋಗದೊಂದಿಗೆ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ 1,000ಕ್ಕೂ ಹೆಚ್ಚು ಸ್ಕೈಪ್ ಐಡಿಗಳನ್ನು I4C ನಿರ್ಬಂಧಿಸಿದೆ. ಅಂತಹ ವಂಚಕರು ಬಳಸುವ ಸಿಮ್ ಕಾರ್ಡ್‌ಗಳು, ಮೊಬೈಲ್ ಸಾಧನಗಳು ಮತ್ತು ಮ್ಯೂಲ್ ಖಾತೆಗಳನ್ನು ನಿರ್ಬಂಧಿಸಲು ಸಹ ಇದು ಸುಗಮಗೊಳಿಸುತ್ತದೆ. I4C ತನ್ನ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ‘ಸೈಬರ್‌ಡೋಸ್ಟ್’ನಲ್ಲಿ ಇನ್ಫೋಗ್ರಾಫಿಕ್ಸ್ ಮತ್ತು ವೀಡಿಯೊಗಳ ಮೂಲಕ ವಿವಿಧ ಎಚ್ಚರಿಕೆಗಳನ್ನು ನೀಡಿದೆ

ಇಂತಹ ವಂಚನೆಗಳ ಬಗ್ಗೆ ನಾಗರಿಕರು ಜಾಗೃತರಾಗಿ ಜಾಗೃತಿ ಮೂಡಿಸಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಅಂತಹ ಕರೆಗಳನ್ನು ಸ್ವೀಕರಿಸಿದ ನಂತರ, ನಾಗರಿಕರು ಸಹಾಯಕ್ಕಾಗಿ ತಕ್ಷಣವೇ ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ 1930 ಅಥವಾ www.cybercrime.gov.in ಕ್ಕೆ ದೂರು ನೀಡಬೇಕು ಎಂದು ಗೃಹ ಸಚಿವಾಲಯ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ