AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagavad Gita: 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ; ಗುಜರಾತ್​ ಸರ್ಕಾರ ಆದೇಶ

6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಭಗವದ್ಗೀತೆಯನ್ನು ಬೋಧಿಸುವುದರ ಜೊತೆಗೆ ಭಗವದ್ಗೀತೆಯ ಕುರಿತು ಭಾಷಣ ಸ್ಪರ್ಧೆ, ಶ್ಲೋಕ ಸ್ಪರ್ಧೆ, ಸಾಹಿತ್ಯ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗುವುದು ಎಂದು ಗುಜರಾತ್ ಸರ್ಕಾರ ತಿಳಿಸಿದೆ.

Bhagavad Gita: 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ; ಗುಜರಾತ್​ ಸರ್ಕಾರ ಆದೇಶ
ಭಗವದ್ಗೀತೆ
TV9 Web
| Edited By: |

Updated on:Mar 17, 2022 | 7:18 PM

Share

ನವದೆಹಲಿ: ಗುಜರಾತ್​ನ ಶಾಲೆಗಳಲ್ಲಿ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಲು ಆದೇಶಿಸಲಾಗಿದೆ. ಹೊಸ ಶಿಕ್ಷಣ ನೀತಿ (NEP) ಅಡಿಯಲ್ಲಿ ಗುಜರಾತ್‌ನ ಶಾಲೆಗಳ ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸಲಾಗುತ್ತದೆ ಎಂದು ಗುಜರಾತ್ ಸರ್ಕಾರ (Gujarat Government) ಇಂದು ಪ್ರಕಟಿಸಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯ ಮಕ್ಕಳಿಗೆ ಭಗವದ್ಗೀತೆಯ (Bhagavad Gita) ತತ್ವಗಳು ಮತ್ತು ಮೌಲ್ಯಗಳನ್ನು ಕಲಿಸಲಾಗುವುದು ಎಂದು ಗುಜರಾತ್ ಶಿಕ್ಷಣ ಸಚಿವ ಜಿತು ವಘಾನಿ ಹೇಳಿದ್ದಾರೆ.

2022-23ರ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಜ್ಞಾನ ವ್ಯವಸ್ಥೆಯನ್ನು ಅಳವಡಿಸಲು ಮೊದಲ ಹಂತದಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳು ಮತ್ತು ತತ್ವಗಳನ್ನು ತರಗತಿಯಲ್ಲಿ ತಿಳುವಳಿಕೆ ಮತ್ತು ಆಸಕ್ತಿಗೆ ಅನುಗುಣವಾಗಿ ಪರಿಚಯಿಸಲಾಗುತ್ತದೆ ಎಂದು ಗುಜರಾತ್‌ನ ಶಿಕ್ಷಣ ಸಚಿವರು ಹೇಳಿದ್ದಾರೆ.

ಭಗವದ್ಗೀತೆಯನ್ನು ಹಿಂದೂಗಳ ಧರ್ಮಗ್ರಂಥ ಎಂದೇ ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರದಿಂದ ಗುಜರಾತ್​ನಲ್ಲಿ ಮತ್ತೊಮ್ಮೆ ವಿವಾದ, ಗಲಾಟೆಗಳು ಸೃಷ್ಟಿಯಾಗುವ ಸಾಧ್ಯತೆಯಿದೆ. 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಭಗವದ್ಗೀತೆಯನ್ನು ಬೋಧಿಸುವುದರ ಜೊತೆಗೆ ಭಗವದ್ಗೀತೆಯ ಕುರಿತು ಭಾಷಣ ಸ್ಪರ್ಧೆ, ಶ್ಲೋಕ ಸ್ಪರ್ಧೆ, ಸಾಹಿತ್ಯ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗುವುದು ಎಂದು ಗುಜರಾತ್ ಸರ್ಕಾರ ತಿಳಿಸಿದೆ.

6ರಿಂದ 8ನೇ ತರಗತಿವರೆಗೆ ಭಗವದ್ಗೀತೆಯನ್ನು ಕಥೆ ಮತ್ತು ಪಠ್ಯ ರೂಪದಲ್ಲಿ ಪಠ್ಯ ಪುಸ್ತಕಗಳಲ್ಲಿ ಅಳವಡಿಸಬೇಕು. 9ರಿಂದ 12 ನೇ ತರಗತಿಯಲ್ಲಿ ಭಗವದ್ಗೀತೆಯನ್ನು ಕಥೆ ಮತ್ತು ಪಠ್ಯ ರೂಪದಲ್ಲಿ ಪ್ರಥಮ ಭಾಷೆಯ ಪಠ್ಯಪುಸ್ತಕದಲ್ಲಿ ಪರಿಚಯಿಸಬೇಕು. ಈ ಕುರಿತು ವಿಡಿಯೊಗಳು ಸೇರಿದಂತೆ ಇತರ ಅಧ್ಯಯನ ಸಾಮಗ್ರಿಗಳು ಲಭ್ಯವಿರುತ್ತವೆ ಎಂದು ಗುಜರಾತ್ ಸರ್ಕಾರದ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಪ್ರಾರ್ಥನಾ ಕಾರ್ಯಕ್ರಮದಲ್ಲಿ ಭಗವದ್ಗೀತೆಯ ಪಠಣವನ್ನು ಸೇರಿಸಬೇಕು ಎಂದು ಜಿತು ವಘಾನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶಾಲೆಗಳಲ್ಲಿ ಭಗವದ್ಗೀತೆ ಆಧಾರಿತ ಶ್ಲೋಕ ಗಾನ, ಶ್ಲೋಕಪೂರ್ಣಿ, ಪ್ರಬಂಧ, ನೃತ್ಯ, ಚಿತ್ರಗಳು, ರಸಪ್ರಶ್ನೆ ಮುಂತಾದ ವಿವಿಧ ಸ್ಪರ್ಧೆಗಳು ಮತ್ತು ಸೃಜನಶೀಲ ಚಟುವಟಿಕೆಗಳನ್ನು ಆಯೋಜಿಸಬೇಕು. 6ರಿಂದ 12 ನೇ ತರಗತಿಗಳಿಗೆ ಭಗವದ್ಗೀತೆಯ ಸ್ಟಡಿ ಮೆಟೀರಿಯಲ್ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ

E- Bhagavad Gita: ಇ- ಭಗವದ್ಗೀತೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ; ಪವಿತ್ರ ಗ್ರಂಥದ ಗುಣಗಾನ

Published On - 7:08 pm, Thu, 17 March 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ