AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಮತ್ತರಾಗಿದ್ದ ಭಗವಂತ್​​ ಮಾನ್​​ನ್ನು ವಿಮಾನದಿಂದ ಕೆಳಗಿಳಿಸಲಾಗಿತ್ತು ಎಂದ ಬಾದಲ್; ಆರೋಪ ನಿರಾಕರಿಸಿದ ಎಎಪಿ

ಬಾದಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಎಎಪಿ ನಾಯಕರಾದ ಕುಲದೀಪ್ ಧಲಿವಾಲ್ ಮತ್ತು ಮೀತ್ ಹೇಯರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಯಾರಿಗಾದರೂ ಆರೋಗ್ಯ ಸಮಸ್ಯೆಗಳು ಬರಬಹುದು, ಪ್ರತಿಪಕ್ಷಗಳಿಗೆ ಮಾತನಾಡಲು ಯಾವುದೇ ಸಮಸ್ಯೆಗಳಿಲ್ಲ...

ಪಾನಮತ್ತರಾಗಿದ್ದ ಭಗವಂತ್​​ ಮಾನ್​​ನ್ನು ವಿಮಾನದಿಂದ ಕೆಳಗಿಳಿಸಲಾಗಿತ್ತು ಎಂದ ಬಾದಲ್; ಆರೋಪ ನಿರಾಕರಿಸಿದ ಎಎಪಿ
ಭಗವಂತ್ ಮಾನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 19, 2022 | 10:16 PM

Share

ಮದ್ಯ ಸೇವಿಸಿದ್ದ ಭಗವಂತ್ ಮಾನ್ (Bhagwant Mann) ಅವರನ್ನು ವಿಮಾನದಿಂದ ಕೆಳಗಿಳಿಸಲಾಗಿತ್ತು ಎಂಬ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ (Sukhbir Singh Badal) ಅವರ ಆರೋಪವನ್ನು ತಳ್ಳಿಹಾಕಿರುವ ಆಮ್ ಆದ್ಮಿ ಪಕ್ಷ (AAP), ಪ್ರತಿಪಕ್ಷಗಳಿಗೆ ಮಾತನಾಡಲು ಬೇರೆ  ಸಂಗತಿಗಳಿಲ್ಲ. ಪಂಜಾಬ್ ಮುಖ್ಯಮಂತ್ರಿಗೆ ಆರೋಗ್ಯ ಸಮಸ್ಯೆಗಳಿವೆ ಎಂದು ಸೋಮವಾರ ಹೇಳಿದೆ. ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ಬಾದಲ್, ಮಾನ್ ಅವರು ಪಾನಮತ್ತರಾಗಿ ನಡೆಯಲು ಸಾಧ್ಯವಾಗದೇ ಇದ್ದಾಗ ಅವರನ್ನು ವಿಮಾನದಿಂದ ಕೆಳಗಿಳಿಸಲಾಯಿತು . ಇದರಿಂದಾಗಿ ವಿಮಾನ 4 ಗಂಟೆಗಳ ವಿಳಂಬವಾಯಿತು ಎಂದು ಆರೋಪಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ನಡೆಯಲು ಸಾಧ್ಯವಾಗದ ಕಾರಣ ಲುಫ್ಥಾನ್ಸ ವಿಮಾನದಿಂದ ಕೆಳಗಿಳಿಸಲಾಗಿದೆ ಎಂದು ಸಹಪ್ರಯಾಣಿಕರು ಹೇಳಿರುವುದಾಗಿ ಕೆಲವೊಂದು ಮಾಧ್ಯಮಗಳು ವರದಿ ಮಾಡಿವೆ. ಈ ಕಾರಣದಿಂದಾಗಿ ವಿಮಾನ 4 ಗಂಟೆಗಳ ಕಾಲವಿಳಂಬವಾಯಿತು. ಅವರು ಎಎಪಿಯ ರಾಷ್ಟ್ರೀಯ ಸಮಾವೇಶವನ್ನು ಮಿಸ್ ಮಾಡಿಕೊಂಡರು. ಈ ವರದಿಗಳು ಪ್ರಪಂಚದಾದ್ಯಂತದ ಪಂಜಾಬಿಗಳನ್ನು ಮುಜುಗರ ಮತ್ತು ನಾಚಿಕೆಗೀಡುಮಾಡಿದೆ ಎಂದು ಬಾದಲ್ ಟ್ವೀಟ್ ಮಾಡಿದ್ದಾರೆ.

ಮಾನ್ ಸೋಮವಾರಷ್ಟೇ ಜರ್ಮನಿಯಿಂದ ಎಂಟು ದಿನಗಳ ಪ್ರವಾಸದಿಂದ ಮರಳಿದ್ದಾರೆ. ಬಾದಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಎಎಪಿ ನಾಯಕರಾದ ಕುಲದೀಪ್ ಧಲಿವಾಲ್ ಮತ್ತು ಮೀತ್ ಹೇಯರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಯಾರಿಗಾದರೂ ಆರೋಗ್ಯ ಸಮಸ್ಯೆಗಳು ಬರಬಹುದು, ಪ್ರತಿಪಕ್ಷಗಳಿಗೆ ಮಾತನಾಡಲು ಯಾವುದೇ ಸಮಸ್ಯೆಗಳಿಲ್ಲ, ಆದ್ದರಿಂದ ಅವರು ಈ ಸುಳ್ಳು ಮತ್ತು ಅರ್ಥಹೀನ ವಿಷಯವನ್ನು ಹೈಲೈಟ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಬಾದಲ್ ಅವರು ಈ ವಿಷಯದ ಬಗ್ಗೆ ಮೌನವಾಗಿರುವುದರ ಬಗ್ಗೆ ಪಂಜಾಬ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಘಟನೆಯ ಬಗ್ಗೆ ಸ್ಪಷ್ಟೀಕರಣವನ್ನು ಕೇಳಿದರು. ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರಿಗೆ ಈ ವಿಷಯದ ಬಗ್ಗೆ ಸ್ಪಷ್ಟ ಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪಂಜಾಬ್ ಸರ್ಕಾರವು ತಮ್ಮ ಸಿಎಂ ಭಗವಂತ್ ಮಾನ್ ಅವರ ಬಗ್ಗೆ ಇರುವ ಈ ವರದಿಗಳ ಬಗ್ಗೆ ಮೌನವಾಗಿದೆ. ಅರವಿಂದ ಕೇಜ್ರಿವಾಲ್ ಈ ವಿಷಯದ ಬಗ್ಗೆ ಸ್ಪಷ್ಟ ಪಡಿಸಬೇಕು. ಇದು ಪಂಜಾಬಿ ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಒಳಗೊಂಡಿರುವುದರಿಂದ ಭಾರತ ಸರ್ಕಾರವು ಮಧ್ಯಪ್ರವೇಶಿಸಬೇಕು. ಅವರನ್ನು ವಿಮಾನದಿಂದ ಇಳಿಸಿದ್ದರೆ, ಭಾರತ ಸರ್ಕಾರ ಅದರ ಜರ್ಮನ್ ಅಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಬೇಕು ಎಂದು ಅವರು ಹೇಳಿದ್ದಾರೆ.+

ಇದಕ್ಕೂ ಮುನ್ನ ಆಗಸ್ಟ್ 31 ರಂದು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಸೇರಿದಂತೆ ನಿಯೋಗವು ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರಿಗೆ ಮನವಿ ಸಲ್ಲಿಸಿತು ಮತ್ತು ರಾಜ್ಯ ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿತು. ನೀತಿಯಲ್ಲಿ ಹಗರಣ ನಡೆದಿದೆ ಎಂದು ನಿಯೋಗ ಆರೋಪಿಸಿದೆ. “ದೆಹಲಿಯಲ್ಲಿ ನಡೆದಂತೆ ಪಂಜಾಬ್ ಅಬಕಾರಿ ನೀತಿಯಲ್ಲೂ ಹಗರಣ ನಡೆದಿದೆ. ದೆಹಲಿ ಎಲ್‌ಜಿ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಆದೇಶಿಸಿದಂತೆಯೇ, ಪಂಜಾಬ್‌ನಲ್ಲಿ ಸಿಬಿಐ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಬಾದಲ್ ಹೇಳಿದ್ದಾರೆ.

Published On - 10:15 pm, Mon, 19 September 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ