AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗವಂತ್ ಮಾನ್ ಸಂಪುಟ ವಿಸ್ತರಣೆ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಐವರು ಶಾಸಕರು

ಐವರು ಸಚಿವರ ನೇಮಕದೊಂದಿಗೆ ರಾಜ್ಯ ಸಚಿವ ಸಂಪುಟದಲ್ಲಿ ಈಗ 15 ಸದಸ್ಯರಿದ್ದಾರೆ. ಸುನಮ್‌ನಿಂದ ಎರಡು ಬಾರಿ ಶಾಸಕರಾಗಿರುವ ಅರೋರಾ ಅವರನ್ನು ಹೊರತುಪಡಿಸಿ ಉಳಿದ ನಾಲ್ವರು ಮೊದಲ ಬಾರಿಗೆ ಶಾಸಕರಾಗಿದ್ದಾರೆ

ಭಗವಂತ್ ಮಾನ್ ಸಂಪುಟ ವಿಸ್ತರಣೆ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಐವರು ಶಾಸಕರು
ನೂತನ ಸಚಿವರೊಂದಿಗೆ ಭಗವಂತ್ ಮಾನ್
TV9 Web
| Edited By: |

Updated on:Jul 04, 2022 | 8:45 PM

Share

ಸೋಮವಾರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟದಲ್ಲಿ ಐವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗಡಿ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ (AAP) ಅಧಿಕಾರಕ್ಕೆ ಬಂದ ನಂತರ ಮಾನ್ ನೇತೃತ್ವದ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಇದಾಗಿದೆ. ಸುನಮ್ ಶಾಸಕ ಅಮನ್ ಅರೋರಾ, ಅಮೃತಸರ ಸೌತ್‌ನ ಇಂದರ್‌ಬೀರ್ ಸಿಂಗ್ ನಿಜ್ಜರ್, ಗುರು ಹರ್ಸಾಹೈ ಅವರ ಫೌಜಾ ಸಿಂಗ್ ಸರಾರಿ, ಸಮನಾದ ಚೇತನ್ ಸಿಂಗ್ ಜೌರಮಜ್ರಾ ಮತ್ತು ಖರಾರ್ ಶಾಸಕ ಅನ್ಮೋಲ್ ಗಗನ್ ಮಾನ್ ಅವರಿಗೆ ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರು ಪಂಜಾಬ್ ದೇವುಡಿಯ ಗುರುನಾನಕ್ ದೇವುಡಿ ಭವಾನಿಯಂನಲ್ಲಿ ಪ್ರಮಾಣ ವಚನ ಬೋಧಿಸಿದರು. ಸಾಂವಿಧಾನಿಕ ಮಿತಿಯ ಪ್ರಕಾರ ವಿಧಾನಸಭೆಯ ಸದಸ್ಯರ ಸಂಖ್ಯೆ  ಶೇಕಡಾ 15 ರಷ್ಟು ಅಂದರೆ  ಪಂಜಾಬ್ ಮುಖ್ಯಮಂತ್ರಿ ಸೇರಿದಂತೆ   18 ಮಂತ್ರಿಗಳನ್ನು ಹೊಂದಬಹುದು. ಐವರು ಸಚಿವರ ನೇಮಕದೊಂದಿಗೆ ರಾಜ್ಯ ಸಚಿವ ಸಂಪುಟದಲ್ಲಿ ಈಗ 15 ಸದಸ್ಯರಿದ್ದಾರೆ. ಸುನಮ್‌ನಿಂದ ಎರಡು ಬಾರಿ ಶಾಸಕರಾಗಿರುವ ಅರೋರಾ ಅವರನ್ನು ಹೊರತುಪಡಿಸಿ ಉಳಿದ ನಾಲ್ವರು ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಅವರೆಲ್ಲರೂ ಪಂಜಾಬಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಐವರು ಹೊಸ ಮುಖಗಳ ಪೈಕಿ ನಾಲ್ವರು ಶಾಸಕರು ಮಾಲ್ವಾ ಪ್ರದೇಶದವರು ಮತ್ತು ಒಬ್ಬರು ಮಝಾ ಪ್ರದೇಶದವರು.

ಇದನ್ನೂ ಓದಿ
Image
ಅನೈತಿಕ ಸಂಬಂಧ ಆರೋಪ: ಮಧ್ಯಪ್ರದೇಶದಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ ಗ್ರಾಮಸ್ಥರು
Image
ಪಂಜಾಬ್ ಸಿಎಂ ಹಿಮಾಚಲದಲ್ಲಿ ತನ್ನ ಸಾಧನೆಗಳನ್ನು ಎಣಿಸುತ್ತಿರುವಾಗ ಪಂಜಾಬ್ ರಕ್ತದ ಕಣ್ಣೀರು ಸುರಿಸುತ್ತಿದೆ: ಬಿಜೆಪಿ ವಾಗ್ದಾಳಿ
Image
Sadhu Singh Dharamsot: ಭ್ರಷ್ಟಾಚಾರ ಪ್ರಕರಣ; ಪಂಜಾಬ್‌ನ ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಬಂಧನ

ಕಳೆದ ವಾರ ಮಾನ್ ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದರು. ಈ ಸಭೆಯಲ್ಲಿ ಪಂಜಾಬ್‌ನ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆದಿದ್ದು, ಸಂಭಾವ್ಯ ಸಚಿವರ ಹೆಸರನ್ನೂ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Published On - 8:37 pm, Mon, 4 July 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ