AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan CM Oath Taking: ರಾಜಸ್ಥಾನದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಭಜನ್​ ಲಾಲ್ ಶರ್ಮಾ

ಭಜನ್ ಲಾಲ್ ಶರ್ಮಾ(Bhajan Lal Sharma) ರಾಜಸ್ಥಾನ(Rajasthan)ದ ಮುಖ್ಯಮಂತ್ರಿ(Chief Minister)ಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಅವರ ಹುಟ್ಟುಹಬ್ಬವಿರುವ ಕಾರಣ ಇಂದೇ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಜೈಪುರದ ಐತಿಹಾಸಿಕ ಆಲ್ಬರ್ಟ್ ಹಾಲ್‌ನಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

Rajasthan CM Oath Taking: ರಾಜಸ್ಥಾನದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಭಜನ್​ ಲಾಲ್ ಶರ್ಮಾ
ಭಜನ್​ ಲಾಲ್
Follow us
ನಯನಾ ರಾಜೀವ್
|

Updated on: Dec 15, 2023 | 8:38 AM

ಭಜನ್ ಲಾಲ್ ಶರ್ಮಾ(Bhajan Lal Sharma) ರಾಜಸ್ಥಾನ(Rajasthan)ದ ಮುಖ್ಯಮಂತ್ರಿ(Chief Minister)ಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಅವರ ಹುಟ್ಟುಹಬ್ಬವಿರುವ ಕಾರಣ ಇಂದೇ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಜೈಪುರದ ಐತಿಹಾಸಿಕ ಆಲ್ಬರ್ಟ್ ಹಾಲ್‌ನಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ವಿಧ್ಯಾಧರ್ ನಗರ ಶಾಸಕಿ ದಿಯಾ ಕುಮಾರಿ ಮತ್ತು ದುಡು ಶಾಸಕ ಪ್ರೇಮ್ ಚಂದ್ ಬೈರ್ವಾ ಈ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೂವರಿಗೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಪ್ರಮಾಣ ವಚನ ಬೋಧಿಸಲಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರೇಮ್ ಚಂದ್ ಬೈರ್ವಾ ಜೈಪುರದ ಮೋತಿ ಡುಂಗ್ರಿ ಗಣೇಶ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಆಲ್ಬರ್ಟ್ ಸಭಾಂಗಣದಲ್ಲಿ ಭಾರಿ ಭದ್ರತೆ ಹಾಗೂ ಆಸನ ವ್ಯವಸ್ಥೆ ಮಾಡಲಾಗಿದೆ. ಭಜನ್ ಲಾಲ್ ಶರ್ಮಾ ಮತ್ತು ಅವರ ಇಬ್ಬರು ಪ್ರತಿನಿಧಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಧ್ಯಾಹ್ನ 12 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಮತ್ತಷ್ಟು ಓದಿ: Rajasthan New CM: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಆಯ್ಕೆ

ಸಮಾರಂಭಕ್ಕೆ ಕೇಂದ್ರ ನಾಯಕರು ಮತ್ತು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ಕಳುಹಿಸಲಾಗಿದೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಜೈಪುರಕ್ಕೆ ಹೋಗುವ ಪ್ರಮುಖ ರಸ್ತೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರದ ವಿವಿಧ ಕಲ್ಯಾಣ ಯೋಜನೆಗಳ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳ ಜೊತೆಗೆ ನಾಯಕರ ಕಟೌಟ್‌ಗಳಿಂದ ಅಲಂಕರಿಸಲಾಗಿದೆ.

ಟೌನ್​ ಹಾಲ್ ಮ್ಯೂಸಿಯಂ ಬಗ್ಗೆ ಮಾಹಿತಿ ಮಹಾರಾಜ ರಾಮ್​ ಸಿಂಗ್ ಆಶಯದ ಪ್ರಕಾರ, ಆಲ್ಬರ್ಟ್​ ಹಾಲ್ ವಸ್ತುಸಂಗ್ರಹಾಲಯದ ಸ್ಥಳದಲ್ಲಿ ಟೌನ್ ಹಾಲ್ ನಿರ್ಮಿಸಲಾಯಿತು. ಆದರೆ ಮಹಾರಾಜ ಮಧೋ ಸಿಂಗ್ II, ಈ ಕಟ್ಟಡವನ್ನು ಕಲಾ ವಸ್ತು ಸಂಗ್ರಹಾಲಯವೆಂದು ಗುರುತಿಸಲು ನಿರ್ಧರಿಸಿದರು. ಈ ವಸ್ತುಸಂಗ್ರಹಾಲಯದ ಆವರಣದಲ್ಲಿ ಅನೇಕ ವರ್ಣಚಿತ್ರಗಳು, ಅಮೂಲ್ಯ ಕಲ್ಲುಗಳು, ಲೋಹಗಳು ಹಾಗೂ ಶಿಲ್ಪಗಳನ್ನು ಕಾಣಬಹುದು. ಇದು ರಾಮ್ ನಿವಾಸ್ ಉದ್ಯಾನದ ಹೊರ ಭಾಗದಲ್ಲಿದೆ. ಭಾರತೀಯ ಮತ್ತು ಅರೇಬಿಕ್ ಶೈಲಿಯಲ್ಲಿ ನಿರ್ಮಿಸಲಾದ ಈ ಕಟ್ಟಡವನ್ನು ಸ್ಯಾಮ್ಯುಯೆಲ್ ಸ್ವಿಂಟನ್ ಜಾಕೋಬ್ ವಿನ್ಯಾಸಗೊಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ