AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಟು-ಎದಿರೇಟು ಮರೆತ ಸೆರಮ್​ ಮತ್ತು ಭಾರತ್​ ಬಯೋಟೆಕ್​: ಜಂಟಿ ಹೇಳಿಕೆ ಬಿಡುಗಡೆ

ಕೊರೊನಾ ಲಸಿಕೆ ತಯಾರಿಸುವಲ್ಲಿ ಭಾರತ್​ ಬಯೋಟೆಕ್​ ಮತ್ತು ಸೆರಮ್​ ಸಂಸ್ಥೆಗಳು ಒಂದಾಗಿ ಕಾರ್ಯ ನಿರ್ವಹಿಸಲಿವೆ. ದೇಶ ಮತ್ತು ವಿಶ್ವದ ಹಿತ ಕಾಪಾಡಲು ನಾವು ಬದ್ಧರಾಗಿದ್ದೇವೆ ಎಂದು ಎರಡೂ ಸಂಸ್ಥೆಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡಿದ್ದಾರೆ.

ಏಟು-ಎದಿರೇಟು ಮರೆತ ಸೆರಮ್​ ಮತ್ತು ಭಾರತ್​ ಬಯೋಟೆಕ್​: ಜಂಟಿ ಹೇಳಿಕೆ ಬಿಡುಗಡೆ
ಅದರ್​ ಪೂನಾವಾಲಾ ಮತ್ತು ಕೃಷ್ಣ ಎಲ್ಲಾ
Skanda
| Edited By: |

Updated on: Jan 05, 2021 | 7:38 PM

Share

ಹೈದರಾಬಾದ್​: ಭಾರತದಲ್ಲಿ ಕೊರೊನಾ ಲಸಿಕೆ ತಯಾರಿಸುತ್ತಿರುವ ಸೆರಮ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಗಳ ಮುಖ್ಯಸ್ಥರು ತಮ್ಮ ನಡುವಿನ ಶೀತಲ ಸಮರಕ್ಕೆ ಅಂತ್ಯ ಹಾಡುವ ಪ್ರಯತ್ನ ಮಾಡಿದ್ದಾರೆ. ಕೆಲವು ಸಂಸ್ಥೆಯ ಲಸಿಕೆಗಳು ‘ನೀರಿನಷ್ಟೇ ಪರಿಣಾಮಕಾರಿ’ ಎಂಬ ಸೆರಮ್​ ಸಂಸ್ಥೆಯ ಮುಖ್ಯಸ್ಥ ಅದರ್​ ಪೂನಾವಾಲಾ ಹೇಳಿಕೆಗೆ ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ ನಿನ್ನೆ ತಮ್ಮ ಭಾಷಣದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದರು.

ಆದರೆ, ಇಂದು ಈ ಮುನಿಸಿನಿಂದ ಹೊರ ಬಂದಿರುವ ಕೃಷ್ಣ ಎಲ್ಲಾ ಮತ್ತು ಅದರ್​ ಪೂನಾವಾಲಾ ಜಂಟಿ ಹೇಳಿಕೆ ನೀಡಿದ್ದಾರೆ. ಕೊರೊನಾ ಲಸಿಕೆ ತಯಾರಿಕೆಯ ವಿಚಾರದಲ್ಲಿ ಸೆರಮ್​ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳು ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲಿವೆ. ಜನರ ಆರೋಗ್ಯ ಮತ್ತು ಹಿತಕ್ಕಾಗಿ ನಾವು ಒಂದಾಗಿ ಶ್ರಮಿಸುತ್ತೇವೆ. ದೇಶದಲ್ಲಿ ಮತ್ತು ವಿಶ್ವದಲ್ಲಿ ಕೊರೊನಾ ಲಸಿಕೆ ಸುಲಭವಾಗಿ ಲಭಿಸಬೇಕು ಎನ್ನುವುದೇ ನಮ್ಮ ಧ್ಯೇಯವಾಗಿದೆ ಎಂದು ಇಬ್ಬರೂ ತಮ್ಮ ಟ್ವಿಟರ್​ ಅಕೌಂಟ್​ಗಳಲ್ಲಿ ಹೇಳಿಕೆ ನೀಡಿದ್ದಾರೆ.

ನಮ್ಮ ಲಸಿಕೆಗಳು ಎಷ್ಟು ಪ್ರಾಮುಖ್ಯ ಎಂಬುದರ ಕುರಿತು ನಮಗೆ ಅರಿವಿದೆ. ದೇಶ ಹಾಗೂ ವಿಶ್ವ ಮಟ್ಟದ ಪರಿಸ್ಥಿತಿ ಸುಧಾರಣೆಗೆ ಎರಡೂ ಸಂಸ್ಥೆಗಳು ಬದ್ಧವಾಗಿವೆ. ಪ್ರಸ್ತುತ ಕೊರೊನಾ ಲಸಿಕೆಗಳ ಉತ್ಪಾದನೆ ಮತ್ತು ಗುಣಮಟ್ಟದ ಬಗ್ಗೆ ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ. ಇದು ನಮ್ಮ ಆದ್ಯ ಕರ್ತವ್ಯವಾಗಿದೆ. ಸದ್ಯ ನಮ್ಮ ಯೋಜನೆಗಳನ್ನು ಯಾವ ಗೊಂದಲಗಳಿಲ್ಲದೇ ಮುಂದುವರೆಸುತ್ತೇವೆ ಎಂದು ಅದರ್​ ಪೂನಾವಾಲಾ ಮತ್ತು ಕೃಷ್ಣ ಎಲ್ಲಾ ತಿಳಿಸಿದ್ದಾರೆ.

ಕೊವಾಕ್ಸಿನ್​ ವಿಚಾರದಲ್ಲಿ ರಾಜಕೀಯ ಬೇಡ: ಬಯೋಟೆಕ್ ಎಂಡಿ ಕೃಷ್ಣ ಎಲ್ಲಾ ಆಗ್ರಹ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!