AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಟು-ಎದಿರೇಟು ಮರೆತ ಸೆರಮ್​ ಮತ್ತು ಭಾರತ್​ ಬಯೋಟೆಕ್​: ಜಂಟಿ ಹೇಳಿಕೆ ಬಿಡುಗಡೆ

ಕೊರೊನಾ ಲಸಿಕೆ ತಯಾರಿಸುವಲ್ಲಿ ಭಾರತ್​ ಬಯೋಟೆಕ್​ ಮತ್ತು ಸೆರಮ್​ ಸಂಸ್ಥೆಗಳು ಒಂದಾಗಿ ಕಾರ್ಯ ನಿರ್ವಹಿಸಲಿವೆ. ದೇಶ ಮತ್ತು ವಿಶ್ವದ ಹಿತ ಕಾಪಾಡಲು ನಾವು ಬದ್ಧರಾಗಿದ್ದೇವೆ ಎಂದು ಎರಡೂ ಸಂಸ್ಥೆಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡಿದ್ದಾರೆ.

ಏಟು-ಎದಿರೇಟು ಮರೆತ ಸೆರಮ್​ ಮತ್ತು ಭಾರತ್​ ಬಯೋಟೆಕ್​: ಜಂಟಿ ಹೇಳಿಕೆ ಬಿಡುಗಡೆ
ಅದರ್​ ಪೂನಾವಾಲಾ ಮತ್ತು ಕೃಷ್ಣ ಎಲ್ಲಾ
Skanda
| Edited By: |

Updated on: Jan 05, 2021 | 7:38 PM

Share

ಹೈದರಾಬಾದ್​: ಭಾರತದಲ್ಲಿ ಕೊರೊನಾ ಲಸಿಕೆ ತಯಾರಿಸುತ್ತಿರುವ ಸೆರಮ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಗಳ ಮುಖ್ಯಸ್ಥರು ತಮ್ಮ ನಡುವಿನ ಶೀತಲ ಸಮರಕ್ಕೆ ಅಂತ್ಯ ಹಾಡುವ ಪ್ರಯತ್ನ ಮಾಡಿದ್ದಾರೆ. ಕೆಲವು ಸಂಸ್ಥೆಯ ಲಸಿಕೆಗಳು ‘ನೀರಿನಷ್ಟೇ ಪರಿಣಾಮಕಾರಿ’ ಎಂಬ ಸೆರಮ್​ ಸಂಸ್ಥೆಯ ಮುಖ್ಯಸ್ಥ ಅದರ್​ ಪೂನಾವಾಲಾ ಹೇಳಿಕೆಗೆ ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ ನಿನ್ನೆ ತಮ್ಮ ಭಾಷಣದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದರು.

ಆದರೆ, ಇಂದು ಈ ಮುನಿಸಿನಿಂದ ಹೊರ ಬಂದಿರುವ ಕೃಷ್ಣ ಎಲ್ಲಾ ಮತ್ತು ಅದರ್​ ಪೂನಾವಾಲಾ ಜಂಟಿ ಹೇಳಿಕೆ ನೀಡಿದ್ದಾರೆ. ಕೊರೊನಾ ಲಸಿಕೆ ತಯಾರಿಕೆಯ ವಿಚಾರದಲ್ಲಿ ಸೆರಮ್​ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳು ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲಿವೆ. ಜನರ ಆರೋಗ್ಯ ಮತ್ತು ಹಿತಕ್ಕಾಗಿ ನಾವು ಒಂದಾಗಿ ಶ್ರಮಿಸುತ್ತೇವೆ. ದೇಶದಲ್ಲಿ ಮತ್ತು ವಿಶ್ವದಲ್ಲಿ ಕೊರೊನಾ ಲಸಿಕೆ ಸುಲಭವಾಗಿ ಲಭಿಸಬೇಕು ಎನ್ನುವುದೇ ನಮ್ಮ ಧ್ಯೇಯವಾಗಿದೆ ಎಂದು ಇಬ್ಬರೂ ತಮ್ಮ ಟ್ವಿಟರ್​ ಅಕೌಂಟ್​ಗಳಲ್ಲಿ ಹೇಳಿಕೆ ನೀಡಿದ್ದಾರೆ.

ನಮ್ಮ ಲಸಿಕೆಗಳು ಎಷ್ಟು ಪ್ರಾಮುಖ್ಯ ಎಂಬುದರ ಕುರಿತು ನಮಗೆ ಅರಿವಿದೆ. ದೇಶ ಹಾಗೂ ವಿಶ್ವ ಮಟ್ಟದ ಪರಿಸ್ಥಿತಿ ಸುಧಾರಣೆಗೆ ಎರಡೂ ಸಂಸ್ಥೆಗಳು ಬದ್ಧವಾಗಿವೆ. ಪ್ರಸ್ತುತ ಕೊರೊನಾ ಲಸಿಕೆಗಳ ಉತ್ಪಾದನೆ ಮತ್ತು ಗುಣಮಟ್ಟದ ಬಗ್ಗೆ ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ. ಇದು ನಮ್ಮ ಆದ್ಯ ಕರ್ತವ್ಯವಾಗಿದೆ. ಸದ್ಯ ನಮ್ಮ ಯೋಜನೆಗಳನ್ನು ಯಾವ ಗೊಂದಲಗಳಿಲ್ಲದೇ ಮುಂದುವರೆಸುತ್ತೇವೆ ಎಂದು ಅದರ್​ ಪೂನಾವಾಲಾ ಮತ್ತು ಕೃಷ್ಣ ಎಲ್ಲಾ ತಿಳಿಸಿದ್ದಾರೆ.

ಕೊವಾಕ್ಸಿನ್​ ವಿಚಾರದಲ್ಲಿ ರಾಜಕೀಯ ಬೇಡ: ಬಯೋಟೆಕ್ ಎಂಡಿ ಕೃಷ್ಣ ಎಲ್ಲಾ ಆಗ್ರಹ

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ