AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಗುಣಮುಖರಾದವರಿಗೂ ಲಸಿಕೆ ಅಗತ್ಯವಿದೆ: ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ

ಈಗಾಗಲೇ ಕೊವಿಡ್​ಗೆ ಒಳಗಾದವರು ಕೊರೊನಾ ಲಸಿಕೆ ಪಡೆಯುವುದು ಉತ್ತಮ. ಏಕೆಂದರೆ ಒಮ್ಮೆ ಕೊರೊನಾ ಸೋಂಕಿಗೆ ತುತ್ತಾದವರ ದೇಹದಲ್ಲಿ ಟಿ ಸೆಲ್​ಗಳು ಉತ್ತಮವಾಗಿ ಸ್ಪಂದಿಸುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಕೃಷ್ಣಾ ಎಲ್ಲಾ ತಿಳಿಸಿದ್ದಾರೆ.

ಕೊವಿಡ್​ನಿಂದ ಗುಣಮುಖರಾದವರಿಗೂ ಲಸಿಕೆ ಅಗತ್ಯವಿದೆ: ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 23, 2020 | 8:45 PM

Share

ಈಗಾಗಲೇ ಕೊವಿಡ್​ನಿಂದ ಗುಣಮುಖರಾದವರು ಸಹ ಲಸಿಕೆ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ ಅಭಿಪ್ರಾಯಪಟ್ಟಿದ್ದಾರೆ. ಲಸಿಕೆಗೆ ಮೊದಲು ಲಸಿಕೆಯ ನಂತರದ ಅವಧಿಯಲ್ಲಿ (Sero surveillance significance in immunogenicity and safety in pre and post vaccination era) ವಹಿಸಬೇಕಾದ ಎಚ್ಚರಿಕೆಗಳ ಕುರಿತು ಆಯೋಜಿಸಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಕೊರೊನಾ ಲಸಿಕೆ ಹಂಚಿಕೆಗೆ ಸರ್ವ ಸನ್ನದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕೊವಿಡ್​ಗೆ ಒಳಗಾದವರು ಕೊರೊನಾ ಲಸಿಕೆ ಪಡೆಯುವುದು ಉತ್ತಮ. ಏಕೆಂದರೆ ಒಮ್ಮೆ ಕೊರೊನಾ ಸೋಂಕಿಗೆ ತುತ್ತಾದವರ ದೇಹದಲ್ಲಿ ಟಿ ಸೆಲ್​ಗಳು ಉತ್ತಮವಾಗಿ ಸ್ಪಂದಿಸುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಕೃಷ್ಣಾ ಎಲ್ಲಾ ತಿಳಿಸಿದ್ದಾರೆ.

ಭಾರತ್​ ಬಯೋಟೆಕ್​ ಸಂಸ್ಥೆಯ ಕೊರೊನಾ ಲಸಿಕೆ ಭಾರತದಲ್ಲಿ ಒಟ್ಟು 24 ಕಡೆ 3 ಹಂತದಲ್ಲಿ ಪರೀಕ್ಷೆಗೆ ಒಳಪಟ್ಟಿದೆ. ಈ ಮೂಲಕ ನಾವು ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದನ್ನು ಪರೀಕ್ಷಿಸಲಾಗುತ್ತಿದೆ. ಒಮ್ಮೆ ಲಸಿಕೆ ವಿತರಣೆ ಆರಂಭವಾದರೆ ಅದನ್ನು ವ್ಯವಸ್ಥಿತವಾಗಿ ಮಾಡಲು ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಮಾತನಾಡಿದ ಬಯೋಕಾನ್​ ಸಂಸ್ಥೆಯ ಮುಖ್ಯಸ್ಥ ಕಿರಣ್​ ಮಜುಮ್ದಾರ್ ಶಾ, ಕೊವಿಡ್​ ಕುರಿತು ವಿಶ್ವಮಟ್ಟದಲ್ಲಿ ಅನೇಕ ರೀತಿಯ ಲೆಕ್ಕಾಚಾರಗಳು ನಡೆಯುತ್ತಿವೆ. ಭಾರತದಲ್ಲೂ ನಾವು ಅಂತಹ ವಿಭಿನ್ನ ದೃಷ್ಟಿಯಲ್ಲಿ ಯೋಚಿಸಬೇಕು. ಆಗ ಭಾರತದ ಯಾವ ಭಾಗದಲ್ಲಿ ಹರ್ಡ್​ ಇಮ್ಯೂನಿಟಿ ಅಭಿವೃದ್ಧಿಯಾಗಿದೆ. ಯಾವ ಜನರು ಸುಲಭವಾಗಿ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂಬ ಕುರಿತು ಸ್ಪಷ್ಟ ಮಾಹಿತಿ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?