AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಗುಣಮುಖರಾದವರಿಗೂ ಲಸಿಕೆ ಅಗತ್ಯವಿದೆ: ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ

ಈಗಾಗಲೇ ಕೊವಿಡ್​ಗೆ ಒಳಗಾದವರು ಕೊರೊನಾ ಲಸಿಕೆ ಪಡೆಯುವುದು ಉತ್ತಮ. ಏಕೆಂದರೆ ಒಮ್ಮೆ ಕೊರೊನಾ ಸೋಂಕಿಗೆ ತುತ್ತಾದವರ ದೇಹದಲ್ಲಿ ಟಿ ಸೆಲ್​ಗಳು ಉತ್ತಮವಾಗಿ ಸ್ಪಂದಿಸುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಕೃಷ್ಣಾ ಎಲ್ಲಾ ತಿಳಿಸಿದ್ದಾರೆ.

ಕೊವಿಡ್​ನಿಂದ ಗುಣಮುಖರಾದವರಿಗೂ ಲಸಿಕೆ ಅಗತ್ಯವಿದೆ: ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ
ಸಾಂದರ್ಭಿಕ ಚಿತ್ರ
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 23, 2020 | 8:45 PM

Share

ಈಗಾಗಲೇ ಕೊವಿಡ್​ನಿಂದ ಗುಣಮುಖರಾದವರು ಸಹ ಲಸಿಕೆ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ ಅಭಿಪ್ರಾಯಪಟ್ಟಿದ್ದಾರೆ. ಲಸಿಕೆಗೆ ಮೊದಲು ಲಸಿಕೆಯ ನಂತರದ ಅವಧಿಯಲ್ಲಿ (Sero surveillance significance in immunogenicity and safety in pre and post vaccination era) ವಹಿಸಬೇಕಾದ ಎಚ್ಚರಿಕೆಗಳ ಕುರಿತು ಆಯೋಜಿಸಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಕೊರೊನಾ ಲಸಿಕೆ ಹಂಚಿಕೆಗೆ ಸರ್ವ ಸನ್ನದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕೊವಿಡ್​ಗೆ ಒಳಗಾದವರು ಕೊರೊನಾ ಲಸಿಕೆ ಪಡೆಯುವುದು ಉತ್ತಮ. ಏಕೆಂದರೆ ಒಮ್ಮೆ ಕೊರೊನಾ ಸೋಂಕಿಗೆ ತುತ್ತಾದವರ ದೇಹದಲ್ಲಿ ಟಿ ಸೆಲ್​ಗಳು ಉತ್ತಮವಾಗಿ ಸ್ಪಂದಿಸುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಕೃಷ್ಣಾ ಎಲ್ಲಾ ತಿಳಿಸಿದ್ದಾರೆ.

ಭಾರತ್​ ಬಯೋಟೆಕ್​ ಸಂಸ್ಥೆಯ ಕೊರೊನಾ ಲಸಿಕೆ ಭಾರತದಲ್ಲಿ ಒಟ್ಟು 24 ಕಡೆ 3 ಹಂತದಲ್ಲಿ ಪರೀಕ್ಷೆಗೆ ಒಳಪಟ್ಟಿದೆ. ಈ ಮೂಲಕ ನಾವು ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದನ್ನು ಪರೀಕ್ಷಿಸಲಾಗುತ್ತಿದೆ. ಒಮ್ಮೆ ಲಸಿಕೆ ವಿತರಣೆ ಆರಂಭವಾದರೆ ಅದನ್ನು ವ್ಯವಸ್ಥಿತವಾಗಿ ಮಾಡಲು ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಮಾತನಾಡಿದ ಬಯೋಕಾನ್​ ಸಂಸ್ಥೆಯ ಮುಖ್ಯಸ್ಥ ಕಿರಣ್​ ಮಜುಮ್ದಾರ್ ಶಾ, ಕೊವಿಡ್​ ಕುರಿತು ವಿಶ್ವಮಟ್ಟದಲ್ಲಿ ಅನೇಕ ರೀತಿಯ ಲೆಕ್ಕಾಚಾರಗಳು ನಡೆಯುತ್ತಿವೆ. ಭಾರತದಲ್ಲೂ ನಾವು ಅಂತಹ ವಿಭಿನ್ನ ದೃಷ್ಟಿಯಲ್ಲಿ ಯೋಚಿಸಬೇಕು. ಆಗ ಭಾರತದ ಯಾವ ಭಾಗದಲ್ಲಿ ಹರ್ಡ್​ ಇಮ್ಯೂನಿಟಿ ಅಭಿವೃದ್ಧಿಯಾಗಿದೆ. ಯಾವ ಜನರು ಸುಲಭವಾಗಿ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂಬ ಕುರಿತು ಸ್ಪಷ್ಟ ಮಾಹಿತಿ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ