AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ Volunteers ಬೇಕಾಗಿದ್ದಾರೆ.. ಯಾರೆಲ್ಲಾ ಪಾಲ್ಗೊಳ್ಳಬಹುದು?

ಕೋವಿಡ್-19 ಲಸಿಕೆಗಳನ್ನು ಜನ ಬಳಕೆಗೆ ಶೀಘ್ರವಾಗಿ ಲಭ್ಯವಾಗುವಂತೆ ಮಾಡಬೇಕೆನ್ನುವ ಪ್ರಯತ್ನಕ್ಕೆ ಹೊಸ ವೇಗ ದೊರೆತಿದೆ. ಯೂರೋಪಿನ ಹಲವು ದೇಶಗಳಲ್ಲಿ ಕೊರೊನಾ ವೈರಸ್​ನ 2ನೇ ಅಲೆ ಪ್ರಬಲವಾಗುತ್ತಿರುವ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗದ ಅಂತಿಮ ಹಂತಕ್ಕೆ ಬಂದಿರುವ ಲಸಿಕೆಗಳು ಹೊಸ ಭರವಸೆ ಮೂಡಿಸಿವೆ. ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ಬೇಕಾಗಿದ್ದಾರೆ..  ಲಸಿಕೆ ತಯಾರಿಕೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿರುವ ಭಾರತ್ ಬಯೋಟೆಕ್ ಕಂಪನಿಯು ಕೊವಾಕ್ಸಿನ್ ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ […]

ಕೊವಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ Volunteers ಬೇಕಾಗಿದ್ದಾರೆ.. ಯಾರೆಲ್ಲಾ ಪಾಲ್ಗೊಳ್ಳಬಹುದು?
ಕೊವ್ಯಾಕ್ಸಿನ್ ಲಸಿಕೆ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Nov 21, 2020 | 3:51 PM

ಕೋವಿಡ್-19 ಲಸಿಕೆಗಳನ್ನು ಜನ ಬಳಕೆಗೆ ಶೀಘ್ರವಾಗಿ ಲಭ್ಯವಾಗುವಂತೆ ಮಾಡಬೇಕೆನ್ನುವ ಪ್ರಯತ್ನಕ್ಕೆ ಹೊಸ ವೇಗ ದೊರೆತಿದೆ. ಯೂರೋಪಿನ ಹಲವು ದೇಶಗಳಲ್ಲಿ ಕೊರೊನಾ ವೈರಸ್​ನ 2ನೇ ಅಲೆ ಪ್ರಬಲವಾಗುತ್ತಿರುವ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗದ ಅಂತಿಮ ಹಂತಕ್ಕೆ ಬಂದಿರುವ ಲಸಿಕೆಗಳು ಹೊಸ ಭರವಸೆ ಮೂಡಿಸಿವೆ.

ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ಬೇಕಾಗಿದ್ದಾರೆ..  ಲಸಿಕೆ ತಯಾರಿಕೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿರುವ ಭಾರತ್ ಬಯೋಟೆಕ್ ಕಂಪನಿಯು ಕೊವಾಕ್ಸಿನ್ ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ತಲಾ 2000 ಆಸಕ್ತರನ್ನು ನೋಂದಾಯಿಸಲು ಮುಂದಾಗಿದೆ.

ಅಮೆರಿಕದ ಫೈಜರ್ ಮತ್ತು ಜರ್ಮನಿಯ ಬಯೋಎನ್ಟೆಕ್ ಕಂಪನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸಿರುವ BNT162b2 ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಅಮೆರಿಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿವೆ.

ಕೋವಿಡ್-19 ಲಸಿಕೆಗೆ ಸಂಬಂಧಿಸಿದಂತೆ ನಡೆದಿರುವ ಬೆಳವಣಿಗೆಗಳು 1. ಕೋವಿಡ್-19 ನಿಯಂತ್ರಣಕ್ಕೆ ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು, ಲಸಿಕೆಯ ಪ್ರಯೋಗದಲ್ಲಿ ಪಾಲ್ಗೊಳ್ಳಲು ಆಸಕ್ತರನ್ನು ಸ್ವಾಗತಿಸಿದೆ. 18 ವರ್ಷಕ್ಕಿಂತ ಕಡಿಮೆ ಇರುವವರು ಮತ್ತು ಈ ಹಿಂದೆ ಕೋವಿಡ್-19 ಪಾಸಿಟಿವ್ ಆಗಿದ್ದವರು ಪ್ರಯೋಗದಲ್ಲಿ ಪಾಲ್ಗೊಳ್ಳುವಂತಿಲ್ಲ.

ಇದು ಭಾರತದಲ್ಲಿ ಈವರೆಗಿನ ಅತಿದೊಡ್ಡ ಲಸಿಕೆ ಪ್ರಯೋಗ ಎನಿಸಿಕೊಂಡಿದೆ. ‘ಬ್ರೆಜಿಲ್ ದೇಶದ ಸರ್ಕಾರದೊಂದಿಗೂ ಕಂಪನಿ ಸಂಪರ್ಕದಲ್ಲಿದ್ದು, ಅಲ್ಲಿಯೂ ಪ್ರಯೋಗ ನಡೆಸಲು ಮುಂದಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಾಯಿ ಪ್ರಸಾದ್ ಅವರು ತಿಳಿಸಿದ್ದಾರೆ.

2. ಫೈಜರ್ ಮತ್ತು ಬಯೊಎನ್ಟೆಕ್ ಕಂಪನಿಗಳು ಅಭಿವೃದ್ಧಿಪಡಿಸಿರುವ BNT162b2 ಲಸಿಕೆ ಕೊರೊನಾ ನಿಯಂತ್ರಣಕ್ಕೆ ಶೇ 95ರಷ್ಟು ಪರಿಣಾಮಕಾರಿ ಎಂದು ಸಾಬೀತಾಗಿದೆ. ಸುರಕ್ಷೆಗೆ ಸಂಬಂಧಿಸಿದಂತೆಯೂ ಯಾವುದೇ ಗಣನೀಯ ಆತಂಕಗಳು ವರದಿಯಾಗಿಲ್ಲ. ಔಷಧಿಯ ತುರ್ತು ಬಳಕೆಗೆ ಅನುಮತಿ ಕೋರಿ ‘ಅಮೆರಿಕದ ಆಹಾರ ಮತ್ತು ಔಷಧ ನಿಯಂತ್ರಣಾ ಸಂಸ್ಥೆ‘ಗೆ (FDA – United States Food and Drug Administration) ಅರ್ಜಿ ಸಲ್ಲಿಸಿರುವುದಾಗಿ ಫೈಜರ್ ಸಿಇಒ ಆಲ್ಬರ್ಟ್ ಬೌರ್ಲಾ ತಿಳಿಸಿದ್ದಾರೆ.

3. ದೀರ್ಘಕಾಲ ಸಕ್ರಿಯವಾಗಿರುವ ಮೊನೊಕ್ಲೋನಲ್ ಪ್ರತಿಕಾಯದ (ಆ್ಯಂಟಿಬಾಡಿ) ಸಂಯೋಜನೆಯಿಂದ AZD7442 ಔಷಧಿಯನ್ನು ಅಭಿವೃದ್ಧಿಪಡಿಸಿರುವ ಬ್ರಿಟನ್ ಮೂಲದ ಆಸ್ಟ್ರಾಜೆನೆಕಾ ಕಂಪನಿ ಇಂದಿನಿಂದ (ನ.21) ಅಂತಿಮ ಹಂತದ ಪ್ರಯೋಗ ಆರಂಭಿಸಿದೆ. ನಿರ್ದಿಷ್ಟ ಬಿಳಿ ರಕ್ತಕಣಗಳಿಂದ ಪ್ರತ್ಯೇಕಿಸಿರುವ ಪ್ರತಿಕಾಯದಿಂದ ಅಭಿವೃದ್ಧಿಪಡಿಸಿರುವ ಈ ಔಷಧಿಯನ್ನು ತೆಗೆದುಕೊಂಡ ನಂತರದ 12 ತಿಂಗಳು ಕೊರೊನಾ ಸೋಂಕಿನ ಭೀತಿ ಇರುವುದಿಲ್ಲ.

ಯೂರೋಪಿನ ವಿವಿಧ ದೇಶಗಳು ಮತ್ತು ಅಮೆರಿಕದಿಂದ ಒಟ್ಟು 5000 ಮಂದಿಯನ್ನು ಪ್ರಯೋಗ ನಡೆಸಲು ಸಂಸ್ಥೆ ಆಯ್ಕೆ ಮಾಡಿದೆ. ಲಸಿಕೆಗೂ ಈ ಔಷಧಿಯ ಕಾರ್ಯವೈಖರಿಗೂ ಬಹಳ ವ್ಯತ್ಯಾಸವಿದೆ. ಲಸಿಕೆಗಳು ದೇಹದಲ್ಲಿ ಪ್ರತಿಕಾಯಗಳನ್ನು ಬೆಳೆಸುವ ಮೂಲಕ ಸೋಂಕು ತಡೆಗಟ್ಟುತ್ತದೆ, ಈ ಔಷಧಿಯು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಮೂಲಕ ಸೋಂಕಿನಿಂದ ರಕ್ಷಿಸುತ್ತದೆ.

Published On - 3:49 pm, Sat, 21 November 20

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ