AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ Volunteers ಬೇಕಾಗಿದ್ದಾರೆ.. ಯಾರೆಲ್ಲಾ ಪಾಲ್ಗೊಳ್ಳಬಹುದು?

ಕೋವಿಡ್-19 ಲಸಿಕೆಗಳನ್ನು ಜನ ಬಳಕೆಗೆ ಶೀಘ್ರವಾಗಿ ಲಭ್ಯವಾಗುವಂತೆ ಮಾಡಬೇಕೆನ್ನುವ ಪ್ರಯತ್ನಕ್ಕೆ ಹೊಸ ವೇಗ ದೊರೆತಿದೆ. ಯೂರೋಪಿನ ಹಲವು ದೇಶಗಳಲ್ಲಿ ಕೊರೊನಾ ವೈರಸ್​ನ 2ನೇ ಅಲೆ ಪ್ರಬಲವಾಗುತ್ತಿರುವ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗದ ಅಂತಿಮ ಹಂತಕ್ಕೆ ಬಂದಿರುವ ಲಸಿಕೆಗಳು ಹೊಸ ಭರವಸೆ ಮೂಡಿಸಿವೆ. ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ಬೇಕಾಗಿದ್ದಾರೆ..  ಲಸಿಕೆ ತಯಾರಿಕೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿರುವ ಭಾರತ್ ಬಯೋಟೆಕ್ ಕಂಪನಿಯು ಕೊವಾಕ್ಸಿನ್ ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ […]

ಕೊವಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ Volunteers ಬೇಕಾಗಿದ್ದಾರೆ.. ಯಾರೆಲ್ಲಾ ಪಾಲ್ಗೊಳ್ಳಬಹುದು?
ಕೊವ್ಯಾಕ್ಸಿನ್ ಲಸಿಕೆ
ಪೃಥ್ವಿಶಂಕರ
| Edited By: |

Updated on:Nov 21, 2020 | 3:51 PM

Share

ಕೋವಿಡ್-19 ಲಸಿಕೆಗಳನ್ನು ಜನ ಬಳಕೆಗೆ ಶೀಘ್ರವಾಗಿ ಲಭ್ಯವಾಗುವಂತೆ ಮಾಡಬೇಕೆನ್ನುವ ಪ್ರಯತ್ನಕ್ಕೆ ಹೊಸ ವೇಗ ದೊರೆತಿದೆ. ಯೂರೋಪಿನ ಹಲವು ದೇಶಗಳಲ್ಲಿ ಕೊರೊನಾ ವೈರಸ್​ನ 2ನೇ ಅಲೆ ಪ್ರಬಲವಾಗುತ್ತಿರುವ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗದ ಅಂತಿಮ ಹಂತಕ್ಕೆ ಬಂದಿರುವ ಲಸಿಕೆಗಳು ಹೊಸ ಭರವಸೆ ಮೂಡಿಸಿವೆ.

ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ಬೇಕಾಗಿದ್ದಾರೆ..  ಲಸಿಕೆ ತಯಾರಿಕೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿರುವ ಭಾರತ್ ಬಯೋಟೆಕ್ ಕಂಪನಿಯು ಕೊವಾಕ್ಸಿನ್ ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ತಲಾ 2000 ಆಸಕ್ತರನ್ನು ನೋಂದಾಯಿಸಲು ಮುಂದಾಗಿದೆ.

ಅಮೆರಿಕದ ಫೈಜರ್ ಮತ್ತು ಜರ್ಮನಿಯ ಬಯೋಎನ್ಟೆಕ್ ಕಂಪನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸಿರುವ BNT162b2 ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಅಮೆರಿಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿವೆ.

ಕೋವಿಡ್-19 ಲಸಿಕೆಗೆ ಸಂಬಂಧಿಸಿದಂತೆ ನಡೆದಿರುವ ಬೆಳವಣಿಗೆಗಳು 1. ಕೋವಿಡ್-19 ನಿಯಂತ್ರಣಕ್ಕೆ ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು, ಲಸಿಕೆಯ ಪ್ರಯೋಗದಲ್ಲಿ ಪಾಲ್ಗೊಳ್ಳಲು ಆಸಕ್ತರನ್ನು ಸ್ವಾಗತಿಸಿದೆ. 18 ವರ್ಷಕ್ಕಿಂತ ಕಡಿಮೆ ಇರುವವರು ಮತ್ತು ಈ ಹಿಂದೆ ಕೋವಿಡ್-19 ಪಾಸಿಟಿವ್ ಆಗಿದ್ದವರು ಪ್ರಯೋಗದಲ್ಲಿ ಪಾಲ್ಗೊಳ್ಳುವಂತಿಲ್ಲ.

ಇದು ಭಾರತದಲ್ಲಿ ಈವರೆಗಿನ ಅತಿದೊಡ್ಡ ಲಸಿಕೆ ಪ್ರಯೋಗ ಎನಿಸಿಕೊಂಡಿದೆ. ‘ಬ್ರೆಜಿಲ್ ದೇಶದ ಸರ್ಕಾರದೊಂದಿಗೂ ಕಂಪನಿ ಸಂಪರ್ಕದಲ್ಲಿದ್ದು, ಅಲ್ಲಿಯೂ ಪ್ರಯೋಗ ನಡೆಸಲು ಮುಂದಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಾಯಿ ಪ್ರಸಾದ್ ಅವರು ತಿಳಿಸಿದ್ದಾರೆ.

2. ಫೈಜರ್ ಮತ್ತು ಬಯೊಎನ್ಟೆಕ್ ಕಂಪನಿಗಳು ಅಭಿವೃದ್ಧಿಪಡಿಸಿರುವ BNT162b2 ಲಸಿಕೆ ಕೊರೊನಾ ನಿಯಂತ್ರಣಕ್ಕೆ ಶೇ 95ರಷ್ಟು ಪರಿಣಾಮಕಾರಿ ಎಂದು ಸಾಬೀತಾಗಿದೆ. ಸುರಕ್ಷೆಗೆ ಸಂಬಂಧಿಸಿದಂತೆಯೂ ಯಾವುದೇ ಗಣನೀಯ ಆತಂಕಗಳು ವರದಿಯಾಗಿಲ್ಲ. ಔಷಧಿಯ ತುರ್ತು ಬಳಕೆಗೆ ಅನುಮತಿ ಕೋರಿ ‘ಅಮೆರಿಕದ ಆಹಾರ ಮತ್ತು ಔಷಧ ನಿಯಂತ್ರಣಾ ಸಂಸ್ಥೆ‘ಗೆ (FDA – United States Food and Drug Administration) ಅರ್ಜಿ ಸಲ್ಲಿಸಿರುವುದಾಗಿ ಫೈಜರ್ ಸಿಇಒ ಆಲ್ಬರ್ಟ್ ಬೌರ್ಲಾ ತಿಳಿಸಿದ್ದಾರೆ.

3. ದೀರ್ಘಕಾಲ ಸಕ್ರಿಯವಾಗಿರುವ ಮೊನೊಕ್ಲೋನಲ್ ಪ್ರತಿಕಾಯದ (ಆ್ಯಂಟಿಬಾಡಿ) ಸಂಯೋಜನೆಯಿಂದ AZD7442 ಔಷಧಿಯನ್ನು ಅಭಿವೃದ್ಧಿಪಡಿಸಿರುವ ಬ್ರಿಟನ್ ಮೂಲದ ಆಸ್ಟ್ರಾಜೆನೆಕಾ ಕಂಪನಿ ಇಂದಿನಿಂದ (ನ.21) ಅಂತಿಮ ಹಂತದ ಪ್ರಯೋಗ ಆರಂಭಿಸಿದೆ. ನಿರ್ದಿಷ್ಟ ಬಿಳಿ ರಕ್ತಕಣಗಳಿಂದ ಪ್ರತ್ಯೇಕಿಸಿರುವ ಪ್ರತಿಕಾಯದಿಂದ ಅಭಿವೃದ್ಧಿಪಡಿಸಿರುವ ಈ ಔಷಧಿಯನ್ನು ತೆಗೆದುಕೊಂಡ ನಂತರದ 12 ತಿಂಗಳು ಕೊರೊನಾ ಸೋಂಕಿನ ಭೀತಿ ಇರುವುದಿಲ್ಲ.

ಯೂರೋಪಿನ ವಿವಿಧ ದೇಶಗಳು ಮತ್ತು ಅಮೆರಿಕದಿಂದ ಒಟ್ಟು 5000 ಮಂದಿಯನ್ನು ಪ್ರಯೋಗ ನಡೆಸಲು ಸಂಸ್ಥೆ ಆಯ್ಕೆ ಮಾಡಿದೆ. ಲಸಿಕೆಗೂ ಈ ಔಷಧಿಯ ಕಾರ್ಯವೈಖರಿಗೂ ಬಹಳ ವ್ಯತ್ಯಾಸವಿದೆ. ಲಸಿಕೆಗಳು ದೇಹದಲ್ಲಿ ಪ್ರತಿಕಾಯಗಳನ್ನು ಬೆಳೆಸುವ ಮೂಲಕ ಸೋಂಕು ತಡೆಗಟ್ಟುತ್ತದೆ, ಈ ಔಷಧಿಯು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಮೂಲಕ ಸೋಂಕಿನಿಂದ ರಕ್ಷಿಸುತ್ತದೆ.

Published On - 3:49 pm, Sat, 21 November 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್