AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಅರ್ಜಿ ಸಲ್ಲಿಸಿದ ಭಾರತ್ ಬಯೋಟೆಕ್

ಒಂದುವೇಳೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ದೊರೆತಲ್ಲಿ ಕೊವ್ಯಾಕ್ಸಿನ್​ ಲಸಿಕೆಗೂ ಇನ್ನೂ ಹೆಚ್ಚಿನ ಸ್ಥಾನಮಾನ ದೊರೆಯಲಿದೆ. ಮುಂದಿನ ದಿನಗಳಲ್ಲಿ ಹೈದರಾಬಾದ್, ಬೆಂಗಳೂರು ಮತ್ತು ಗುಜರಾತ್​ನ ಅಂಕ್ಲೇಶ್ವರ್ ನಗರಗಳಲ್ಲಿ ಲಸಿಕೆ ಉತ್ಪಾದಿಸಲು ಭಾರತ್ ಬಯೋಟೆಕ್ ತೀರ್ಮಾನಿಸಿದೆ.

ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಅರ್ಜಿ ಸಲ್ಲಿಸಿದ ಭಾರತ್ ಬಯೋಟೆಕ್
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 24, 2021 | 10:57 PM

Share

ಹೈದರಾಬಾದ್: ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಬಳಕೆಗೆ ಅನುಮೋದನೆ ಪಡೆಯಲು ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಕಂಪನಿ ಭಾರತ್ ಬಯೋಟೆಕ್ ಅರ್ಜಿ ಸಲ್ಲಿಸಿದೆ. ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಪಡೆಯಲು ವಿಶ್ವ ಆರೋಗ್ಯ ಸಂಸ್ಥೆಗೆ ಭಾರತ್ ಬಯೋಟೆಕ್ ಕಂಪನಿ ಅರ್ಜಿ ಸಲ್ಲಿಸಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಿರುವ ಅರ್ಜಿಯಲ್ಲಿ ಶೇಕಡಾ 90ರಷ್ಟು ದಾಖಲೆಗಳನ್ನು ನೀಡಿದ್ದು, ಇನ್ನೂ ಹೆಚ್ಚಿನ ದಾಖಲೆಗಳನ್ನು ಜೂನ್ ತಿಂಗಳಲ್ಲಿ ಸಲ್ಲಿಸಲಿದೆ.

ಸದ್ಯದ ಮಾಹಿತಿಗಳ ಪ್ರಕಾರ ಕೊವ್ಯಾಕ್ಸಿನ್ ಲಸಿಕೆಯನ್ನು 10ಕ್ಕಿಂತ ಕಡಿಮೆ ದೇಶಗಳು ಅಂಗೀಕರಿಸಿವೆ. ವಿಶ್ವದ ಬಹುತೇಕ ದೇಶಗಳು ಸದ್ಯ ಆಕ್ಸ್​ಫರ್ಡ್-ಆಸ್ಟ್ರೋಜೆನೆಕಾದ ಕೊವಿಶೀಲ್ಡ್ ಲಸಿಕೆಯನ್ನು ಅಧಿಕೃತವಾಗಿ ಅಂಗೀಕರಿಸಿದ್ದು, ತಮ್ಮ ದೇಶಕ್ಕೆ ಆಗಮಿಸುವ ಪ್ರಯಾಣಿಕರಿರು ಕೊವಿಶೀಲ್ಡ್ ಲಸಿಕೆ ಪಡೆದಿರಬೇಕು ಎಂದು ಸೂಚಿಸುತ್ತವೆ. ಒಂದುವೇಳೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ದೊರೆತಲ್ಲಿ ಕೊವ್ಯಾಕ್ಸಿನ್​ ಲಸಿಕೆಗೂ ಇನ್ನೂ ಹೆಚ್ಚಿನ ಸ್ಥಾನಮಾನ ದೊರೆಯಲಿದೆ.

ಸದ್ಯ ವಿಶ್ವದ ಕೆಲವೇ ಕೆಲವು ಲಸಿಕೆಗಳು ಮಾತ್ರ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಮಾನ್ಯತೆ ಹೊಂದಿವೆ. ಕೊವಿಶೀಲ್ಡ್, ಫೈಜರ್, ಆಸ್ಟ್ರಾಝೆನೆಕಾ, ಜಾನ್ಸನ್, ಮಾಡೆರ್ನಾ ಮತ್ತು ಸಿನೋಫಾರ್ಮಾ ಕಂಪನಿಗಳ ಕೊವಿಡ್ ಲಸಿಕೆಗಳಿಗೆ ಮಾತ್ರ ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಬಳಕೆಯ ಮಾನ್ಯತೆ ದೊರೆತಿದೆ. ಕೊವ್ಯಾಕ್ಸಿನ್​ ಲಸಿಕೆಗೂ ಈ ಮಾನ್ಯತೆ ದೊರೆಲ್ಲಿ ಭಾರತದ ಲಸಿಕೆಗೆ ವಿದೇಶಗಳಲ್ಲಿಯೂ ಮಾನ್ಯತೆ ದೊರೆಯಲಿದೆ.

ಮುಂದಿನ ದಿನಗಳಲ್ಲಿ ಹೈದರಾಬಾದ್, ಬೆಂಗಳೂರು ಮತ್ತು ಗುಜರಾತ್​ನ ಅಂಕ್ಲೇಶ್ವರ್ ನಗರಗಳಲ್ಲಿ ಲಸಿಕೆ ಉತ್ಪಾದಿಸಲು ಭಾರತ್ ಬಯೋಟೆಕ್ ತೀರ್ಮಾನಿಸಿದೆ.

ಇದನ್ನೂ ಓದಿ: ನೀವು ಕೊವಿಡ್​ನಿಂದ ಈಗಷ್ಟೇ ಚೇತರಿಸಿಕೊಂಡಿದ್ದೀರಾ? ದೀರ್ಘಕಾಲ ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಭಾರತದ ಟಾಪ್ ವೈದ್ಯರು

ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ (Bharat Biotech submitted 90 percent documents to WHO to get emergency approval)

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?