AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ದಿನಗಳಲ್ಲಿ ದೇಶದ 30 ನಗರಗಳಿಗೆ ಕೊವ್ಯಾಕ್ಸಿನ್ ಲಸಿಕೆ ಪೂರೈಕೆ; ಟ್ವೀಟ್​ ಮಾಡಿ ಮಾಹಿತಿ ಹಂಚಿಕೊಂಡ ಭಾರತ್ ಬಯೋಟೆಕ್ ಮುಖ್ಯಸ್ಥೆ

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು 30 ದಿನಗಳೊಳಗೆ ದೇಶದ30 ನಗರಗಳಿಗೆ ತಲುಪಿಸಲಾಗಿದೆ. ಕೊರೊನಾ ಕಾರಣದಿಂದ ಅನೇಕ ಉದ್ಯೋಗಿಗಳು ರಜೆಯಲ್ಲಿದ್ದರೂ ಲಸಿಕೆ ಉತ್ಪಾದನೆಗೆ ತಡೆ ಉಂಟಾಗದಂತೆ ಕಾರ್ಯ ನಿರ್ವಹಿಸಲಾಗಿದೆ. ನಮ್ಮ ಸಂಸ್ಥೆಯ ಸಿಬ್ಬಂದಿ ಕೆಲಸಕ್ಕೆ ಬದ್ಧರಾಗಿ ಲಾಕ್​ಡೌನ್​ ನಡುವೆಯೂ ಅಹರ್ನಿಶಿ ದುಡಿಯುತ್ತಿದ್ದಾರೆ: ಸುಚಿತ್ರಾ ಎಲ್ಲಾ

30 ದಿನಗಳಲ್ಲಿ ದೇಶದ 30 ನಗರಗಳಿಗೆ ಕೊವ್ಯಾಕ್ಸಿನ್ ಲಸಿಕೆ ಪೂರೈಕೆ; ಟ್ವೀಟ್​ ಮಾಡಿ ಮಾಹಿತಿ ಹಂಚಿಕೊಂಡ ಭಾರತ್ ಬಯೋಟೆಕ್ ಮುಖ್ಯಸ್ಥೆ
ಕೊವ್ಯಾಕ್ಸಿನ್
Skanda
|

Updated on: May 26, 2021 | 12:13 PM

Share

ಹೈದರಾಬಾದ್: ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಜತೆಗೆ ಲಸಿಕೆ ಅಭಾವವೂ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿ ಇಡೀ ವ್ಯವಸ್ಥೆಯನ್ನೇ ಹೈರಾಣಾಗಿಸಿಬಿಟ್ಟಿದೆ. ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಹಾಗೂ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೊವಿಶೀಲ್ಡ್ ಲಸಿಕೆಗಳ ಪೂರೈಕೆಯಲ್ಲಿ ಕೊರತೆ ಕಂಡುಬಂದಿದ್ದರಿಂದ ಹಲವೆಡೆ ಜನರು ಎರಡನೇ ಡೋಸ್ ಲಸಿಕೆ ಪಡೆಯುವುದಕ್ಕೆ ಪರದಾಡುವಂತಾಗಿತ್ತು. ಇದೀಗ ಹಂತಹಂತವಾಗಿ ಈ ಸಮಸ್ಯೆಯನ್ನು ನಿವಾರಿಸಲು ಲಸಿಕೆ ಉತ್ಪಾದಕಾ ಸಂಸ್ಥೆಗಳು ಪ್ರಯತ್ನಿಸುತ್ತಿದ್ದು, ಅವಶ್ಯಕತೆಗೆ ಅನುಗುಣವಾಗಿ ಲಸಿಕೆ ಒದಗಿಸಲು ಪ್ರಯತ್ನಿಸುತ್ತಿವೆ. ಈ ಬಗ್ಗೆ ಭಾರತ್ ಬಯೋಟೆಕ್ ಸಂಸ್ಥೆಯ ಸಹ ಸಂಸ್ಥಾಪಕಿ ಸುಚಿತ್ರಾ ಎಲ್ಲಾ ಟ್ವೀಟ್​ ಮೂಲಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, 30 ದಿನಗಳೊಳಗೆ 30 ನಗರಗಳಿಗೆ ಕೊವ್ಯಾಕ್ಸಿನ್ ಲಸಿಕೆ ತಲುಪಿಸಿರುವುದಾಗಿ ತಿಳಿಸಿದ್ದಾರೆ.

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು 30 ದಿನಗಳೊಳಗೆ ದೇಶದ30 ನಗರಗಳಿಗೆ ತಲುಪಿಸಲಾಗಿದೆ. ಕೊರೊನಾ ಕಾರಣದಿಂದ ಅನೇಕ ಉದ್ಯೋಗಿಗಳು ರಜೆಯಲ್ಲಿದ್ದರೂ ಲಸಿಕೆ ಉತ್ಪಾದನೆಗೆ ತಡೆ ಉಂಟಾಗದಂತೆ ಕಾರ್ಯ ನಿರ್ವಹಿಸಲಾಗಿದೆ. ನಮ್ಮ ಸಂಸ್ಥೆಯ ಸಿಬ್ಬಂದಿ ಕೆಲಸಕ್ಕೆ ಬದ್ಧರಾಗಿ ಲಾಕ್​ಡೌನ್​ ನಡುವೆಯೂ ಅಹರ್ನಿಶಿ ದುಡಿಯುತ್ತಿದ್ದಾರೆ. ಆ ಮೂಲಕ ದೇಶದಲ್ಲಿ ಹೆಚ್ಚೆಚ್ಚು ಲಸಿಕೆ ವಿತರಣೆ ಆಗುವಂತೆ ಪ್ರಯತ್ನಿಸುತ್ತಿದ್ದಾರೆ. ಇವರಿಗೂ ಮನೆ, ಕುಟುಂಬ ಇವೆ. ಕೆಲವರು ಕ್ವಾರಂಟೈನ್ ಆಗಿದ್ದಾರೆ, ಇನ್ನು ಕೆಲವರು ಚೇತರಿಸಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಿಮ್ಮ ಪ್ರಾರ್ಥನೆ ಅವರೊಂದಿಗಿರಲಿ ಎಂದು ಸುಚಿತ್ರಾ ಎಲ್ಲಾ ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

ಕಳೆದೊಂದು ವಾರದಲ್ಲಿ ಭಾರತ್ ಬಯೋಟೆಕ್ ಗುಜರಾತ್​ನಲ್ಲಿರುವ ತನ್ನ ಇನ್ನೊಂದು ಘಟಕದ ಸಹಾಯದೊಂದಿಗೆ 20 ಕೋಟಿ ಡೋಸ್ ಹೆಚ್ಚುವರಿ ಲಸಿಕೆ ಉತ್ಪಾದಿಸಿರುವುದಾಗಿ ತಿಳಿಸಿದೆ. ಕರ್ನಾಟಕದಲ್ಲಿ ಮೈಸೂರು, ಶಿವಮೊಗ್ಗ, ಬೆಂಗಳೂರು ಸೇರಿದಂತೆ ದೇಶದ ವಿವಿಧ ರಾಜ್ಯಗಳ ಒಟ್ಟು 30 ನಗರಗಳಿಗೆ ಭಾರತ್ ಬಯೋಟೆಕ್ ಸಂಸ್ಥೆ ಕಳೆದ 30 ದಿನಗಳಲ್ಲಿ ಕೊವ್ಯಾಕ್ಸಿನ್ ಲಸಿಕೆ ಪೂರೈಸಿದೆ.

ಇದನ್ನೂ ಓದಿ: ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಅರ್ಜಿ ಸಲ್ಲಿಸಿದ ಭಾರತ್ ಬಯೋಟೆಕ್ 

WHO ಪಟ್ಟಿಯಲಿಲ್ಲ ಕೊವ್ಯಾಕ್ಸಿನ್.. ಲಸಿಕೆಗೆ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ, ಭಾರತ್ ಬಯೋಟೆಕ್ ಸರ್ಕಸ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ