AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ

ಇನ್ನೇನು ಭಾರತದಲ್ಲೂ ಕೊರೊನಾ ಲಸಿಕೆ ಸಿಗುವ ನಿರೀಕ್ಷೆಗಳು ಹೆಚ್ಚಾಗಿವೆ. ಈಗಾಗ್ಲೇ ರಷ್ಯಾ ಹಾಗೂ ಇಂಗ್ಲೆಂಡ್​ನಲ್ಲಿ ಸಾಮೂಹಿಕ ಲಸಿಕೆ ವಿತರಣೆ ಕಾರ್ಯ ಜಾರಿಯಾಗಿದ್ದು, ಭಾರತದಲ್ಲೂ ಯೋಜನೆ ಘೋಷಣೆಯಾಗುವ ಟೈಂ ಹತ್ತಿರ ಬಂದಿದೆ. ಈ ಹೊತ್ತಲ್ಲೇ ವಿದೇಶದಿಂದ ಆಗಮಿಸಿದ 60 ಸದಸ್ಯರ ನಿಯೋಗ, ಹೈದರಾಬಾದ್ನ ಭಾರತ್ ಬಯೋಟೆಕ್​ಗೆ ಭೇಟಿ ನೀಡಿರುವುದು ಕುತೂಹಲ ಹೆಚ್ಚುವಂತೆ ಮಾಡಿದೆ.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ
ಆಯೇಷಾ ಬಾನು
|

Updated on:Dec 10, 2020 | 7:51 AM

Share

ಕ್ರೂರಿ ಕೊರೊನಾಗೆ ದೇಶೀ ಮಟ್ಟದಲ್ಲೇ ವ್ಯಾಕ್ಸಿನ್ ಡೆವಲಪ್ ಮಾಡ್ತಾ ಇರೋ ತೆಲಂಗಾಣ ರಾಜ್ಯದ ಭಾರತ್ ಬಯೋಟೆಕ್ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ. ವ್ಯಾಕ್ಸಿನ್ ಕೂಡ ಇನ್ನೇನು ಅಪ್ರೂವ್ ಆಗುವ ಹಂತದಲ್ಲಿದ್ದು, ಭಾರಿ ಕುತೂಹಲ ಕೆರಳಿಸಿದೆ. ಈ ಹೊತ್ತಲ್ಲೇ ವಿದೇಶಿ ನಿಯೋಗ ನಿನ್ನೆ ಭಾರತ್ ಬಯೋಟೆಕ್​ಗೆ ವಿಸಿಟ್ ಕೊಟ್ಟು ಪರಿಶೀಲಿಸಿದೆ.

ಭಾರತ್ ಬಯೋಟೆಕ್​ಗೆ ಭೇಟಿ ನೀಡಿದ ನಂತರ ವಿದೇಶಿ ಪ್ರತಿನಿಧಿಗಳು ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಕಮೀಷನರ್ ಸೇರಿದಂತೆ ಇನ್ನಿತರರ ಜೊತೆಗೆ ಚರ್ಚಿಸಿದ್ರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ ಕುಮಾರ್ ಫಾರ್ಮಾ ಕಂಪನಿಗಳು ಅಭಿವೃದ್ಧಿಪಡಿಸಿದ ವ್ಯಾಕ್ಸಿನ್ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ನೀಡಿದ್ರು.

ಒಂದ್ಕಡೆ ಸಂಭ್ರಮ, ಮತ್ತೊಂದ್ಕಡೆ ಶಾಕ್! ಭಾರತ್ ಬಯೋಟೆಕ್​ಗೆ ಭೇಟಿ ನೀಡಿ ಚರ್ಚಿಸಿದ ವಿದೇಶಿ ಪ್ರತಿನಿಧಿಗಳು ಕೊರೊನಾ ವ್ಯಾಕ್ಸಿನ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ರು. ನಂತರ ಸರ್ಕಾರದಿಂದ ಸಹ ಲಸಿಕೆ ತಯಾರಿಕೆ ಕುರಿತಂತೆ ಮಾಹಿತಿ ಸಂಗ್ರಹಿಸಿದ್ರು. ಈ ಮಧ್ಯೆ ಕೇಂದ್ರ ಸರ್ಕಾರ ಭಾರತ್ ಬಯೋಟೆಕ್​ಗೆ ಶಾಕ್ ನೀಡಿದೆ. ಭಾರತ್ ಬಯೋಟೆಕ್ ಲಸಿಕೆ ತುರ್ತು ಬಳಕೆ ಸಂಬಂಧ ಸುರಕ್ಷತೆ ಹಾಗೂ ಸರಿಯಾದ ಮಾಹಿತಿ ಇಲ್ಲ ಎಂಬ ಕಾರಣಕ್ಕೆ ಅನುಮತಿ ನಿರಾಕರಿಸಿದ್ದು, ಸಂಭ್ರಮದ ಜೊತೆ ಶಾಕ್ ನೀಡಿದೆ.

ಒಟ್ನಲ್ಲಿ ವ್ಯಾಕ್ಸಿನ್ ಸಿಗುವ ಭರವಸೆಯಲ್ಲಿರುವ ದೇಶದ ನಾಗರಿಕರಿಗೆ ಒಂದಷ್ಟು ನಿರಾಸೆಯಾಗಿದೆ. ಸದ್ಯಕ್ಕೆ ಕೇಂದ್ರ ದೇಶೀ ವ್ಯಾಕ್ಸಿನ್​ಗಳಿಗೆ ಅಪ್ರೂವ್ ನೀಡಿಲ್ಲವಾದರೂ, ಅವುಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದೆ. ಹೀಗಾಗಿ ಸದ್ಯ ಪರಿಶೀಲನೆಗಳು ಸಾಗಿದ್ದು, ಸದ್ಯದಲ್ಲೇ ವ್ಯಾಕ್ಸಿನ್ ಬಳಕೆಗೆ ಅನುಮತಿ ಸಿಗುವ ಸಾಧ್ಯತೆ ದಟ್ಟವಾಗಿದೆ.

Corona Vaccine Trial: ಎರಡನೇ ಹಂತದ ಪ್ರಯೋಗಕ್ಕೆ ಆರು ಸ್ವಯಂಸೇವಕರು ಗೈರು

Published On - 7:50 am, Thu, 10 December 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್