AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ

ಇನ್ನೇನು ಭಾರತದಲ್ಲೂ ಕೊರೊನಾ ಲಸಿಕೆ ಸಿಗುವ ನಿರೀಕ್ಷೆಗಳು ಹೆಚ್ಚಾಗಿವೆ. ಈಗಾಗ್ಲೇ ರಷ್ಯಾ ಹಾಗೂ ಇಂಗ್ಲೆಂಡ್​ನಲ್ಲಿ ಸಾಮೂಹಿಕ ಲಸಿಕೆ ವಿತರಣೆ ಕಾರ್ಯ ಜಾರಿಯಾಗಿದ್ದು, ಭಾರತದಲ್ಲೂ ಯೋಜನೆ ಘೋಷಣೆಯಾಗುವ ಟೈಂ ಹತ್ತಿರ ಬಂದಿದೆ. ಈ ಹೊತ್ತಲ್ಲೇ ವಿದೇಶದಿಂದ ಆಗಮಿಸಿದ 60 ಸದಸ್ಯರ ನಿಯೋಗ, ಹೈದರಾಬಾದ್ನ ಭಾರತ್ ಬಯೋಟೆಕ್​ಗೆ ಭೇಟಿ ನೀಡಿರುವುದು ಕುತೂಹಲ ಹೆಚ್ಚುವಂತೆ ಮಾಡಿದೆ.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ
ಆಯೇಷಾ ಬಾನು
|

Updated on:Dec 10, 2020 | 7:51 AM

Share

ಕ್ರೂರಿ ಕೊರೊನಾಗೆ ದೇಶೀ ಮಟ್ಟದಲ್ಲೇ ವ್ಯಾಕ್ಸಿನ್ ಡೆವಲಪ್ ಮಾಡ್ತಾ ಇರೋ ತೆಲಂಗಾಣ ರಾಜ್ಯದ ಭಾರತ್ ಬಯೋಟೆಕ್ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ. ವ್ಯಾಕ್ಸಿನ್ ಕೂಡ ಇನ್ನೇನು ಅಪ್ರೂವ್ ಆಗುವ ಹಂತದಲ್ಲಿದ್ದು, ಭಾರಿ ಕುತೂಹಲ ಕೆರಳಿಸಿದೆ. ಈ ಹೊತ್ತಲ್ಲೇ ವಿದೇಶಿ ನಿಯೋಗ ನಿನ್ನೆ ಭಾರತ್ ಬಯೋಟೆಕ್​ಗೆ ವಿಸಿಟ್ ಕೊಟ್ಟು ಪರಿಶೀಲಿಸಿದೆ.

ಭಾರತ್ ಬಯೋಟೆಕ್​ಗೆ ಭೇಟಿ ನೀಡಿದ ನಂತರ ವಿದೇಶಿ ಪ್ರತಿನಿಧಿಗಳು ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಕಮೀಷನರ್ ಸೇರಿದಂತೆ ಇನ್ನಿತರರ ಜೊತೆಗೆ ಚರ್ಚಿಸಿದ್ರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ ಕುಮಾರ್ ಫಾರ್ಮಾ ಕಂಪನಿಗಳು ಅಭಿವೃದ್ಧಿಪಡಿಸಿದ ವ್ಯಾಕ್ಸಿನ್ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ನೀಡಿದ್ರು.

ಒಂದ್ಕಡೆ ಸಂಭ್ರಮ, ಮತ್ತೊಂದ್ಕಡೆ ಶಾಕ್! ಭಾರತ್ ಬಯೋಟೆಕ್​ಗೆ ಭೇಟಿ ನೀಡಿ ಚರ್ಚಿಸಿದ ವಿದೇಶಿ ಪ್ರತಿನಿಧಿಗಳು ಕೊರೊನಾ ವ್ಯಾಕ್ಸಿನ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ರು. ನಂತರ ಸರ್ಕಾರದಿಂದ ಸಹ ಲಸಿಕೆ ತಯಾರಿಕೆ ಕುರಿತಂತೆ ಮಾಹಿತಿ ಸಂಗ್ರಹಿಸಿದ್ರು. ಈ ಮಧ್ಯೆ ಕೇಂದ್ರ ಸರ್ಕಾರ ಭಾರತ್ ಬಯೋಟೆಕ್​ಗೆ ಶಾಕ್ ನೀಡಿದೆ. ಭಾರತ್ ಬಯೋಟೆಕ್ ಲಸಿಕೆ ತುರ್ತು ಬಳಕೆ ಸಂಬಂಧ ಸುರಕ್ಷತೆ ಹಾಗೂ ಸರಿಯಾದ ಮಾಹಿತಿ ಇಲ್ಲ ಎಂಬ ಕಾರಣಕ್ಕೆ ಅನುಮತಿ ನಿರಾಕರಿಸಿದ್ದು, ಸಂಭ್ರಮದ ಜೊತೆ ಶಾಕ್ ನೀಡಿದೆ.

ಒಟ್ನಲ್ಲಿ ವ್ಯಾಕ್ಸಿನ್ ಸಿಗುವ ಭರವಸೆಯಲ್ಲಿರುವ ದೇಶದ ನಾಗರಿಕರಿಗೆ ಒಂದಷ್ಟು ನಿರಾಸೆಯಾಗಿದೆ. ಸದ್ಯಕ್ಕೆ ಕೇಂದ್ರ ದೇಶೀ ವ್ಯಾಕ್ಸಿನ್​ಗಳಿಗೆ ಅಪ್ರೂವ್ ನೀಡಿಲ್ಲವಾದರೂ, ಅವುಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದೆ. ಹೀಗಾಗಿ ಸದ್ಯ ಪರಿಶೀಲನೆಗಳು ಸಾಗಿದ್ದು, ಸದ್ಯದಲ್ಲೇ ವ್ಯಾಕ್ಸಿನ್ ಬಳಕೆಗೆ ಅನುಮತಿ ಸಿಗುವ ಸಾಧ್ಯತೆ ದಟ್ಟವಾಗಿದೆ.

Corona Vaccine Trial: ಎರಡನೇ ಹಂತದ ಪ್ರಯೋಗಕ್ಕೆ ಆರು ಸ್ವಯಂಸೇವಕರು ಗೈರು

Published On - 7:50 am, Thu, 10 December 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ