AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ

ಇನ್ನೇನು ಭಾರತದಲ್ಲೂ ಕೊರೊನಾ ಲಸಿಕೆ ಸಿಗುವ ನಿರೀಕ್ಷೆಗಳು ಹೆಚ್ಚಾಗಿವೆ. ಈಗಾಗ್ಲೇ ರಷ್ಯಾ ಹಾಗೂ ಇಂಗ್ಲೆಂಡ್​ನಲ್ಲಿ ಸಾಮೂಹಿಕ ಲಸಿಕೆ ವಿತರಣೆ ಕಾರ್ಯ ಜಾರಿಯಾಗಿದ್ದು, ಭಾರತದಲ್ಲೂ ಯೋಜನೆ ಘೋಷಣೆಯಾಗುವ ಟೈಂ ಹತ್ತಿರ ಬಂದಿದೆ. ಈ ಹೊತ್ತಲ್ಲೇ ವಿದೇಶದಿಂದ ಆಗಮಿಸಿದ 60 ಸದಸ್ಯರ ನಿಯೋಗ, ಹೈದರಾಬಾದ್ನ ಭಾರತ್ ಬಯೋಟೆಕ್​ಗೆ ಭೇಟಿ ನೀಡಿರುವುದು ಕುತೂಹಲ ಹೆಚ್ಚುವಂತೆ ಮಾಡಿದೆ.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ
ಆಯೇಷಾ ಬಾನು
|

Updated on:Dec 10, 2020 | 7:51 AM

Share

ಕ್ರೂರಿ ಕೊರೊನಾಗೆ ದೇಶೀ ಮಟ್ಟದಲ್ಲೇ ವ್ಯಾಕ್ಸಿನ್ ಡೆವಲಪ್ ಮಾಡ್ತಾ ಇರೋ ತೆಲಂಗಾಣ ರಾಜ್ಯದ ಭಾರತ್ ಬಯೋಟೆಕ್ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ. ವ್ಯಾಕ್ಸಿನ್ ಕೂಡ ಇನ್ನೇನು ಅಪ್ರೂವ್ ಆಗುವ ಹಂತದಲ್ಲಿದ್ದು, ಭಾರಿ ಕುತೂಹಲ ಕೆರಳಿಸಿದೆ. ಈ ಹೊತ್ತಲ್ಲೇ ವಿದೇಶಿ ನಿಯೋಗ ನಿನ್ನೆ ಭಾರತ್ ಬಯೋಟೆಕ್​ಗೆ ವಿಸಿಟ್ ಕೊಟ್ಟು ಪರಿಶೀಲಿಸಿದೆ.

ಭಾರತ್ ಬಯೋಟೆಕ್​ಗೆ ಭೇಟಿ ನೀಡಿದ ನಂತರ ವಿದೇಶಿ ಪ್ರತಿನಿಧಿಗಳು ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಕಮೀಷನರ್ ಸೇರಿದಂತೆ ಇನ್ನಿತರರ ಜೊತೆಗೆ ಚರ್ಚಿಸಿದ್ರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ ಕುಮಾರ್ ಫಾರ್ಮಾ ಕಂಪನಿಗಳು ಅಭಿವೃದ್ಧಿಪಡಿಸಿದ ವ್ಯಾಕ್ಸಿನ್ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ನೀಡಿದ್ರು.

ಒಂದ್ಕಡೆ ಸಂಭ್ರಮ, ಮತ್ತೊಂದ್ಕಡೆ ಶಾಕ್! ಭಾರತ್ ಬಯೋಟೆಕ್​ಗೆ ಭೇಟಿ ನೀಡಿ ಚರ್ಚಿಸಿದ ವಿದೇಶಿ ಪ್ರತಿನಿಧಿಗಳು ಕೊರೊನಾ ವ್ಯಾಕ್ಸಿನ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ರು. ನಂತರ ಸರ್ಕಾರದಿಂದ ಸಹ ಲಸಿಕೆ ತಯಾರಿಕೆ ಕುರಿತಂತೆ ಮಾಹಿತಿ ಸಂಗ್ರಹಿಸಿದ್ರು. ಈ ಮಧ್ಯೆ ಕೇಂದ್ರ ಸರ್ಕಾರ ಭಾರತ್ ಬಯೋಟೆಕ್​ಗೆ ಶಾಕ್ ನೀಡಿದೆ. ಭಾರತ್ ಬಯೋಟೆಕ್ ಲಸಿಕೆ ತುರ್ತು ಬಳಕೆ ಸಂಬಂಧ ಸುರಕ್ಷತೆ ಹಾಗೂ ಸರಿಯಾದ ಮಾಹಿತಿ ಇಲ್ಲ ಎಂಬ ಕಾರಣಕ್ಕೆ ಅನುಮತಿ ನಿರಾಕರಿಸಿದ್ದು, ಸಂಭ್ರಮದ ಜೊತೆ ಶಾಕ್ ನೀಡಿದೆ.

ಒಟ್ನಲ್ಲಿ ವ್ಯಾಕ್ಸಿನ್ ಸಿಗುವ ಭರವಸೆಯಲ್ಲಿರುವ ದೇಶದ ನಾಗರಿಕರಿಗೆ ಒಂದಷ್ಟು ನಿರಾಸೆಯಾಗಿದೆ. ಸದ್ಯಕ್ಕೆ ಕೇಂದ್ರ ದೇಶೀ ವ್ಯಾಕ್ಸಿನ್​ಗಳಿಗೆ ಅಪ್ರೂವ್ ನೀಡಿಲ್ಲವಾದರೂ, ಅವುಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದೆ. ಹೀಗಾಗಿ ಸದ್ಯ ಪರಿಶೀಲನೆಗಳು ಸಾಗಿದ್ದು, ಸದ್ಯದಲ್ಲೇ ವ್ಯಾಕ್ಸಿನ್ ಬಳಕೆಗೆ ಅನುಮತಿ ಸಿಗುವ ಸಾಧ್ಯತೆ ದಟ್ಟವಾಗಿದೆ.

Corona Vaccine Trial: ಎರಡನೇ ಹಂತದ ಪ್ರಯೋಗಕ್ಕೆ ಆರು ಸ್ವಯಂಸೇವಕರು ಗೈರು

Published On - 7:50 am, Thu, 10 December 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್