AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ

ಇನ್ನೇನು ಭಾರತದಲ್ಲೂ ಕೊರೊನಾ ಲಸಿಕೆ ಸಿಗುವ ನಿರೀಕ್ಷೆಗಳು ಹೆಚ್ಚಾಗಿವೆ. ಈಗಾಗ್ಲೇ ರಷ್ಯಾ ಹಾಗೂ ಇಂಗ್ಲೆಂಡ್​ನಲ್ಲಿ ಸಾಮೂಹಿಕ ಲಸಿಕೆ ವಿತರಣೆ ಕಾರ್ಯ ಜಾರಿಯಾಗಿದ್ದು, ಭಾರತದಲ್ಲೂ ಯೋಜನೆ ಘೋಷಣೆಯಾಗುವ ಟೈಂ ಹತ್ತಿರ ಬಂದಿದೆ. ಈ ಹೊತ್ತಲ್ಲೇ ವಿದೇಶದಿಂದ ಆಗಮಿಸಿದ 60 ಸದಸ್ಯರ ನಿಯೋಗ, ಹೈದರಾಬಾದ್ನ ಭಾರತ್ ಬಯೋಟೆಕ್​ಗೆ ಭೇಟಿ ನೀಡಿರುವುದು ಕುತೂಹಲ ಹೆಚ್ಚುವಂತೆ ಮಾಡಿದೆ.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 10, 2020 | 7:51 AM

Share

ಕ್ರೂರಿ ಕೊರೊನಾಗೆ ದೇಶೀ ಮಟ್ಟದಲ್ಲೇ ವ್ಯಾಕ್ಸಿನ್ ಡೆವಲಪ್ ಮಾಡ್ತಾ ಇರೋ ತೆಲಂಗಾಣ ರಾಜ್ಯದ ಭಾರತ್ ಬಯೋಟೆಕ್ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ. ವ್ಯಾಕ್ಸಿನ್ ಕೂಡ ಇನ್ನೇನು ಅಪ್ರೂವ್ ಆಗುವ ಹಂತದಲ್ಲಿದ್ದು, ಭಾರಿ ಕುತೂಹಲ ಕೆರಳಿಸಿದೆ. ಈ ಹೊತ್ತಲ್ಲೇ ವಿದೇಶಿ ನಿಯೋಗ ನಿನ್ನೆ ಭಾರತ್ ಬಯೋಟೆಕ್​ಗೆ ವಿಸಿಟ್ ಕೊಟ್ಟು ಪರಿಶೀಲಿಸಿದೆ.

ಭಾರತ್ ಬಯೋಟೆಕ್​ಗೆ ಭೇಟಿ ನೀಡಿದ ನಂತರ ವಿದೇಶಿ ಪ್ರತಿನಿಧಿಗಳು ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಕಮೀಷನರ್ ಸೇರಿದಂತೆ ಇನ್ನಿತರರ ಜೊತೆಗೆ ಚರ್ಚಿಸಿದ್ರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ ಕುಮಾರ್ ಫಾರ್ಮಾ ಕಂಪನಿಗಳು ಅಭಿವೃದ್ಧಿಪಡಿಸಿದ ವ್ಯಾಕ್ಸಿನ್ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ನೀಡಿದ್ರು.

ಒಂದ್ಕಡೆ ಸಂಭ್ರಮ, ಮತ್ತೊಂದ್ಕಡೆ ಶಾಕ್! ಭಾರತ್ ಬಯೋಟೆಕ್​ಗೆ ಭೇಟಿ ನೀಡಿ ಚರ್ಚಿಸಿದ ವಿದೇಶಿ ಪ್ರತಿನಿಧಿಗಳು ಕೊರೊನಾ ವ್ಯಾಕ್ಸಿನ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ರು. ನಂತರ ಸರ್ಕಾರದಿಂದ ಸಹ ಲಸಿಕೆ ತಯಾರಿಕೆ ಕುರಿತಂತೆ ಮಾಹಿತಿ ಸಂಗ್ರಹಿಸಿದ್ರು. ಈ ಮಧ್ಯೆ ಕೇಂದ್ರ ಸರ್ಕಾರ ಭಾರತ್ ಬಯೋಟೆಕ್​ಗೆ ಶಾಕ್ ನೀಡಿದೆ. ಭಾರತ್ ಬಯೋಟೆಕ್ ಲಸಿಕೆ ತುರ್ತು ಬಳಕೆ ಸಂಬಂಧ ಸುರಕ್ಷತೆ ಹಾಗೂ ಸರಿಯಾದ ಮಾಹಿತಿ ಇಲ್ಲ ಎಂಬ ಕಾರಣಕ್ಕೆ ಅನುಮತಿ ನಿರಾಕರಿಸಿದ್ದು, ಸಂಭ್ರಮದ ಜೊತೆ ಶಾಕ್ ನೀಡಿದೆ.

ಒಟ್ನಲ್ಲಿ ವ್ಯಾಕ್ಸಿನ್ ಸಿಗುವ ಭರವಸೆಯಲ್ಲಿರುವ ದೇಶದ ನಾಗರಿಕರಿಗೆ ಒಂದಷ್ಟು ನಿರಾಸೆಯಾಗಿದೆ. ಸದ್ಯಕ್ಕೆ ಕೇಂದ್ರ ದೇಶೀ ವ್ಯಾಕ್ಸಿನ್​ಗಳಿಗೆ ಅಪ್ರೂವ್ ನೀಡಿಲ್ಲವಾದರೂ, ಅವುಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದೆ. ಹೀಗಾಗಿ ಸದ್ಯ ಪರಿಶೀಲನೆಗಳು ಸಾಗಿದ್ದು, ಸದ್ಯದಲ್ಲೇ ವ್ಯಾಕ್ಸಿನ್ ಬಳಕೆಗೆ ಅನುಮತಿ ಸಿಗುವ ಸಾಧ್ಯತೆ ದಟ್ಟವಾಗಿದೆ.

Corona Vaccine Trial: ಎರಡನೇ ಹಂತದ ಪ್ರಯೋಗಕ್ಕೆ ಆರು ಸ್ವಯಂಸೇವಕರು ಗೈರು

Published On - 7:50 am, Thu, 10 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​