AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸದ ನಡುವೆ ಗುಡ್ ನ್ಯೂಸ್, ಭಾರತೀಯರಿಗೆ ಫೆಬ್ರವರಿಯಲ್ಲಿ ಸಿಗಲಿದೆ ಸ್ವದೇಶಿ ಲಸಿಕೆ?

ದೆಹಲಿ: ಕೊರೊನಾ ಮೂರನೇ ಅಲೆಯ ಅಟ್ಟಹಾಸದ ನಡುವೆ, ಲಸಿಕೆ‌ ಅಭಿವೃದ್ಧಿ ವಿಚಾರದಲ್ಲಿ ಆಶಾದಾಯಕ ಬೆಳವಣಿಗೆ ಕಂಡುಬಂದಿದೆ.‌ ಸ್ವದೇಶಿ ಲಸಿಕೆ ಕೋವಾಕ್ಸಿನ್ ಫೆಬ್ರವರಿಯಲ್ಲಿಯೇ ಸಿದ್ಧವಾಗುವ ಭರವಸೆ ಸಿಕ್ಕಿದೆ. ‌ದೇಶದಲ್ಲಿ ದಿನೇದಿನೆ ಹೆಮ್ಮಾರಿ ಕೊರೊನಾ ಅಟ್ಟಹಾಸ ಹೆಚ್ಚುತ್ತಲೇ ಇದೆ. ದಿನ ನಿತ್ಯ ಸಾವಿರಾರು ಜನ ಕೊರೊನಾ ಕೂಪದಲ್ಲಿ ಬೀಳುತ್ತಿದ್ದಾರೆ. ರಾಷ್ಟ್ರರಾಜಧಾನಿ ಸೇರಿದಂತೆ ಮಹಾನಗರಗಳಲ್ಲಿ ಕೊರೊನಾ ಮೂರನೇ‌ ಅಲೆ ಎದ್ದಿದ್ದು ಮಹಾ ಭೀತಿ ಶುರುವಾಗಿದೆ. ಆದ್ರೆ ಇಷ್ಟು ದಿನ ಮೈಮರೆತಿದ್ದ ಸರ್ಕಾರಗಳು ಮೈಕೊಡವಿ ಕೊರೊನಾ‌ ನಿಯಂತ್ರಣಕ್ಕೆ ನಿಂತಿವೆ. ಈ ಮಧ್ಯೆ ಲಸಿಕೆ […]

ಕೊರೊನಾ ಅಟ್ಟಹಾಸದ ನಡುವೆ ಗುಡ್ ನ್ಯೂಸ್, ಭಾರತೀಯರಿಗೆ ಫೆಬ್ರವರಿಯಲ್ಲಿ ಸಿಗಲಿದೆ ಸ್ವದೇಶಿ ಲಸಿಕೆ?
ಆಯೇಷಾ ಬಾನು
|

Updated on: Nov 06, 2020 | 6:46 AM

Share

ದೆಹಲಿ: ಕೊರೊನಾ ಮೂರನೇ ಅಲೆಯ ಅಟ್ಟಹಾಸದ ನಡುವೆ, ಲಸಿಕೆ‌ ಅಭಿವೃದ್ಧಿ ವಿಚಾರದಲ್ಲಿ ಆಶಾದಾಯಕ ಬೆಳವಣಿಗೆ ಕಂಡುಬಂದಿದೆ.‌ ಸ್ವದೇಶಿ ಲಸಿಕೆ ಕೋವಾಕ್ಸಿನ್ ಫೆಬ್ರವರಿಯಲ್ಲಿಯೇ ಸಿದ್ಧವಾಗುವ ಭರವಸೆ ಸಿಕ್ಕಿದೆ.

‌ದೇಶದಲ್ಲಿ ದಿನೇದಿನೆ ಹೆಮ್ಮಾರಿ ಕೊರೊನಾ ಅಟ್ಟಹಾಸ ಹೆಚ್ಚುತ್ತಲೇ ಇದೆ. ದಿನ ನಿತ್ಯ ಸಾವಿರಾರು ಜನ ಕೊರೊನಾ ಕೂಪದಲ್ಲಿ ಬೀಳುತ್ತಿದ್ದಾರೆ. ರಾಷ್ಟ್ರರಾಜಧಾನಿ ಸೇರಿದಂತೆ ಮಹಾನಗರಗಳಲ್ಲಿ ಕೊರೊನಾ ಮೂರನೇ‌ ಅಲೆ ಎದ್ದಿದ್ದು ಮಹಾ ಭೀತಿ ಶುರುವಾಗಿದೆ. ಆದ್ರೆ ಇಷ್ಟು ದಿನ ಮೈಮರೆತಿದ್ದ ಸರ್ಕಾರಗಳು ಮೈಕೊಡವಿ ಕೊರೊನಾ‌ ನಿಯಂತ್ರಣಕ್ಕೆ ನಿಂತಿವೆ. ಈ ಮಧ್ಯೆ ಲಸಿಕೆ ವಿಚಾರದಲ್ಲಿ ಭಾರತಕ್ಕೆ ಗುಡ್ ನ್ಯೂಸ್ ಸಿಕ್ಕಿದೆ.

ಇನ್ನೂ ಮೂರು ತಿಂಗಳಲ್ಲಿ ರೆಡಿಯಾಗಲಿದೆ ಕೋವ್ಯಾಕ್ಸಿನ್ ಯೆಸ್‌, ದೇಶೀಯವಾಗಿ ಅಭಿವೃದ್ಧಿ ಪಡಿಸುತ್ತಿರುವ ಕೊವಿಡ್ 19 ಲಸಿಕೆಯಾದ ಕೋವಾಕ್ಸಿನ್ ಮುಂದಿನ ವರ್ಷ ಫೆಬ್ರವರಿಗೆ ಬಿಡುಗಡೆಯಾಗುವ ಸೂಚನೆ ಸಿಕ್ಕಿದೆ. ಮನುಷ್ಯರ ಮೇಲೆ ಈವರೆಗೂ ನಡೆಸಲಾಗಿರುವ ಪ್ರಯೋಗದಲ್ಲಿ ಲಸಿಕೆ ಪರಿಣಾಮಕಾರಿ ಮತ್ತು ಸುರಕ್ಷಿತವೆಂದು ತಿಳಿದು ಬಂದಿದೆ. ಇದೇ ತಿಂಗಳು ಲಸಿಕೆಯ ಕೊನೆಯ ಹಂತದ ಪ್ರಯೋಗ ಆರಂಭವಾಗಲಿದೆ ಎಂದು ಐಸಿಎಂಆರ್‌ನ ಹಿರಿಯ ವಿಜ್ಞಾನಿಗಳು ತಿಳಿಸಿದ್ದಾರೆ.

ಐಸಿಎಂಆರ್‌ ಮತ್ತು ಭಾರತ್‌ ಬಯೋಟೆಕ್‌ ಕಂಪನಿ ಜಂಟಿಯಾಗಿ ಕೋವಾಕ್ಸಿನ್‌ ಅಭಿವೃದ್ಧಿ ಪಡಿಸುತ್ತಿವೆ. ಕೋವಾಕ್ಸಿನ್ ಲಸಿಕೆಯನ್ನು ಮುಂದಿನ ವರ್ಷ ಎರಡನೇ ತ್ರೈಮಾಸಿಕದಲ್ಲಿ ಅಂದ್ರೆ ಜೂನ್ ನಲ್ಲಿ ಬಿಡುಗಡೆ ಮಾಡುವ ಭರವಸೆ ವ್ಯಕ್ತವಾಗಿತ್ತು. ಆದರೆ, ಮುಂಚಿತವಾಗಿಯೇ ಅಂದ್ರೆ ಫೆಬ್ರವರಿಯಲ್ಲಿ ಲಸಿಕೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಎರಡು ಹಂತದ ಪರೀಕ್ಷೆಗೆ ಒಳಗಾಗಿರುವ ಕೋವಾಕ್ಸಿನ್ ಮೂರನೇ ಹಂತದ ಪರೀಕ್ಷೆಯಲ್ಲಿದೆ. ಕೋವಾಕ್ಸಿನ್‌ನನ್ನು ಪ್ರಾಣಿಗಳ ಮೇಲೆ ಪ್ರಯೋಗ ಮಾಡಲಾಗಿದ್ದು, 100ರಷ್ಟು ಸುರಕ್ಷಿತವಾಗಿರುವುದು ಕಂಡುಬಂದಿದೆ. ಸಧ್ಯಕ್ಕೆ ಲಸಿಕೆ ಪರಿಣಾಮಕಾರಿಯಾಗಿದೆ, ಐಸಿಎಂಆರ್‌‌ ಕೂಡ ಲಸಿಕೆ‌ ಬಗ್ಗೆ ಆಶಾದಾಯಕ ಭಾವನೆ ಹೊಂದಿದೆ. ಈ ಲಸಿಕೆ‌ ಭಾರತ ಸರ್ಕಾರಕ್ಕೂ ಪ್ರಮುಖವಾಗಿದ್ದು ಪ್ರಯೋಗದ ಪ್ರತಿ ಪ್ರಕ್ರಿಯೇ ಮೇಲೆ‌ ನಿಗಾ ಇಟ್ಟಿದೆ. ತುರ್ತು ಪರಿಸ್ಥಿತಿಗಳಲ್ಲಿ ಲಸಿಕೆಯನ್ನು ಬಳಸುವ ಬಗ್ಗೆ ಸರ್ಕಾರ ಯೋಚಿಸಬಹುದಾಗಿದೆ. ಆದರೆ, ಅಪಾಯಗಳ ಬಗ್ಗೆಯೂ ಸರಕಾರಕ್ಕೆ‌ ಆತಂಕವಿದೆ.

ಒಟ್ನಲ್ಲಿ ಫೆಬ್ರುವರಿಯಲ್ಲಿ ಕೋವಾಕ್ಸಿನ್‌ ಬಿಡುಗಡೆಯಾದರೆ, ಮೊದಲ ಭಾರತೀಯ ಕೋವಿಡ್‌ 19 ಲಸಿಕೆ ಹೊರಬಂದಂತಾಗಲಿದೆ. ಆದಷ್ಟು ಬೇಗ ಈ ಲಸಿಕೆ ಯಶಸ್ವಿಯಾಗಿ ಭಾರತೀಯರ ಕೈಗೆ ಸಿಗುವಂತೆ ಆಗಲಿ. ಈ ಲಸಿಕೆಯಿಂದ ಪ್ರಪಂಚವೇ ಕೊರೊನಾ ಮುಕ್ತವಾಗಲಿ ಅನ್ನೋದೆ ಎಲ್ಲರ ಆಶಯ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ